ಪಿಎಲ್‌ಡಿ ಬ್ಯಾಂಕ್: ಮಲ್ಯಾಡಿ ಶಿವರಾಮ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು.

Call us

Click Here

ನೂತನ ಅಧ್ಯಕ್ಷರಾಗಿ ಮಲ್ಯಾಡಿ ಶಿವರಾಮ ಶೆಟ್ಟಿ ತೆಕ್ಕಟ್ಟೆ ಹಾಗೂ ಉಪಾಧ್ಯಕ್ಷರಾಗಿ ದೀನಪಾಲ ಶೆಟ್ಟಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ. ಹಿರಿಯಣ್ಣ, ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಅಭಿನಂದಿಸಿ ಮಾತನಾಡಿದರು.

ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ನಿರ್ದೇಶಕ ದಿವಾಕರ ಪೂಜಾರಿ ಕಡ್ಗಿಮನೆ, ಎಸ್. ದಿನಕರ ಶೆಟ್ಟಿ ಸುಣ್ಣಾರಿ, ನಾಸಿರ್ ಮಾವಿನಕಟ್ಟೆ, ಅಣ್ಣಯ್ಯ ಗಾಣಿಗ ಮುಲ್ಲಿಮನೆ, ಗೋಪಾಲ ಬಳೆಗಾರ, ಗೀತಾ ಎಸ್.ಶೆಟ್ಟಿ ಕನ್ಯಾನ, ಶಶಿಕಲಾ ಎಸ್.ಪೂಜಾರಿ ಗುಲ್ವಾಡಿ, ಶೇಖರ ಚಾತ್ರಬೆಟ್ಟು ಬೀಜಾಡಿ, ಸುಖಾನಂದ ಹೆಗ್ಡೆ ಸಳ್ವಾಡಿ, ರವೀಂದ್ರ ಸುಣ್ಣಾರಿ, ಸಂಜೀವ ನಾಯ್ಕ ಜಂಬೆಹಾಡಿ ಅಮಾಸೆಬೈಲು ಇದ್ದರು.

 

Leave a Reply