Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಳಕೆಯಿಂದ ಮಾತ್ರ ಕನ್ನಡ ಉಳಿವು ಸಾಧ್ಯ: ಭಾವನಾ ಆರ್. ಭಟ್
    ಊರ್ಮನೆ ಸಮಾಚಾರ

    ಬಳಕೆಯಿಂದ ಮಾತ್ರ ಕನ್ನಡ ಉಳಿವು ಸಾಧ್ಯ: ಭಾವನಾ ಆರ್. ಭಟ್

    Updated:09/02/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕನ್ನಡ ಭಾಷೆ ಬಳಕೆ ಹೆಚ್ಚಾದರೆ ಕನ್ನಡ ಉಳಿಯುತ್ತದೆಯೇ ಹೊರತು ಹೋರಾಟದಿಂದಲ್ಲ. ಕನ್ನಡ ಬಳಕೆ ಹೆಚ್ಚು ಮಾಡುವುದರಿಂದ ಕನ್ನಡ ಉಳಿಸಲು ಸಾಧ್ಯ, ಸಾಮಾಜಿಕ ಜಾಲತಾಣದಿಂದ ಓದು ಕಡಿಮೆ ಆಗುತ್ತದೆ ಎನ್ನುವ ಆರೋಪದ ನಡುವೆ ಜಾಲತಾಣ ಕೂಡಾ ಬರವಣಿಗೆ ವೇದಿಕೆ ಆಗುತ್ತದೆ. ಜಂಗಮವಾಣಿಲ್ಲಿ ಕನ್ನಡ ಅಕ್ಷರ ಜೋಡಣೆ ಮಾಡುವ ಮೂಲಕ ಕನ್ನಡ ಉಳಿಸುವ ಕೆಲಸ ಮಾಡೋಣ ಎಂದು ಜಿಲ್ಲಾ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಭಾವನಾ ಆರ್. ಭಟ್ ಕೆರೆಮಠ ಹೇಳಿದರು.

    Click Here

    Call us

    Click Here

    ಕೋಟ ಕಲಾ ಸೌರಭ ಸಂಸ್ಕೃತಿಕ ಸಂಘಟನೆ, ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಕಾಲೇಜ್ ವೇದಿಕೆಯಲ್ಲಿ ಶನಿವಾರ ನಡೆದ ಉಡುಪಿ ಜಿಲ್ಲಾ ಪದವಿ ಮತ್ತು ಪದವಿಪೂರ್ವ ಕಾಲೇಜ್ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿ ಅಮ್ಮ ಹೇಳುವ ಶೋಭಾನೆ, ಅಪ್ಪ ಹೇಳುವ ಗಾದೆ, ಅಜ್ಜಿ ಹೇಳುವ ನೀತಿಪಾಠ, ಅಜ್ಜ ಹೇಳುವ ಕತೆ ಇವೆಲ್ಲವೂ ಸಾಹಿತ್ಯದ ಪ್ರಕಾರಗಳಾಗಿದ್ದು, ವಿದ್ಯಾರ್ಥಿಗಳು ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎನ್ನೋದು ಮುಖ್ಯವಾಗುತ್ತದೆ.

    ಓದಬೇಕು ಅಂತಾದರೆ ದೊಡ್ಡ ಕಾದಂಬರಿ ಆಗಬೇಕೆಂದಿಲ್ಲ. ಸಣ್ಣ ಕತೆ, ಪಂಚತಂತ್ರ, ನೀತಿ ಕತೆಗಳಂತಹ ಚಿಕ್ಕಪುಟ್ಟ ಪುಸ್ತಕವಾದರೂ ಓದುವ ಮೂಲಕ ಸಾಹಿತ್ಯಾಸಕ್ತಿ ಉದ್ದೀಪನಗೊಳಸಲು ಸಹಕಾರಿ ಆಗಲಿದೆ. ವಿದ್ಯಾರ್ಥಿಗಳು ಹೇಗೆ ಪಠ್ಯಪುಸ್ತಕ ಓದುತ್ತಾರೋ ಹಾಗೆ ಸಾಹಿತ್ಯಕ್ಕೆ ಸಂಬಂಧಿಸಿದ ಪುಸ್ತಕಗಳ ಓದುವ ಮೂಲಕ ಸಾಹಿತ್ಯಾಸಕ್ತಿ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು.

    ಕಾವ್ಯ, ಕವನ, ಕತೆಗಳ ಓದುವ ಮೂಲಕ ನಮ್ಮ ಸೈದ್ಧಾಂತಿಕ ಶಕ್ತಿ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದ ಅವರು, ಒಂದೇ ಗುಕ್ಕಿಗೆ ಎಲ್ಲವನ್ನೂ ಓದಿ ಮುಗಿಸಬೇಕಂತಲ್ಲಾ. ಪ್ರತೀದಿನ ಒಂದೆರಡು ಹಾಳೆ ಓದುವ ಮೂಲಕ ಓದುವ ಹವ್ಯಾಸ ಹೆಚ್ಚಿಸಿಕೊಳ್ಳಬೇಕು. ವಿದ್ಯಾರ್ಥಿ ದಿಷೆಯಲ್ಲೇ ಓದುವ ಹವ್ಯಾಸ ಬೆಳಸಿಕೊಳ್ಳುವ ಮೂಲಕ ಸಾಹಿತ್ಯ ಸೇವೆಗೆ ವೇದಿಕೆ ಸಿದ್ದ ಮಾಡಿಕೊಳ್ಳಬೇಕು ಎಂದರು.

    Click here

    Click here

    Click here

    Call us

    Call us

    ಇಂದಿನ ವಿದ್ಯಾರ್ಥಿಗಳಲ್ಲಿ ನೋವು ಭರಸುವ ಶಕ್ತಿ ಕಡಿಮೆ ಆಗುತ್ತಿದ್ದು, ಅದಕ್ಕೆ ನಾವು ಬೇರೆ ಬೇರೆ ಪುಸ್ತಕಗಳ ಓದದೆ ಕೇವಲ ನಮ್ಮ ಪಠ್ಯಪುಸ್ತಕಕ್ಕೆ ಸೀಮಿತವಾಗಿದ್ದೇವೆ. ಚೋಮನದಡಿ, ಮರಳಿಮಣ್ಣುಗೆ ಮುಂತಾದ ಪುಸ್ತಕಗಳ ಓದಿದಾಗ ನಮ್ಮದೇನು ಕಷ್ಟ ಮಹಾ ಎನ್ನುವ ಧೈರ್ಯಬರುವ ಜೊತೆ ಬದುಕು ಸವಾಲಾಗಿ ಸ್ವೀಕರಿಸಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.

    ಹಿರಿಯ ಸಾಹಿತಿ ಜನಾರ್ದನ ಮರವಂತೆ, ಕೋಟ ಕಲಾ ಸೌರಭ ಸಾಂಸ್ಕೃತಿಕ ಸಂಘದ ಸುದರ್ಶನ ಉರಾಳ ಕೋಟ, ಡಾ. ಬಿ. ಬಿ. ಹೆಗ್ಡೆ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಚೇತನ ಕುಮಾರ್ ಶೆಟ್ಟಿ ಕೊವಾಡಿ ಇದ್ದರು.

    ಇದನ್ನೂ ಓದಿ:
    ► ಅಧ್ಯಯನದಿಂದ ಸಾಹಿತ್ಯ ರಚನೆ ಕೌಶಲ್ಯ ಗಟ್ಟಿ: ಜನಾರ್ದನ ಮರವಂತೆ – https://kundapraa.com/?p=35286  .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.