Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೆ.14ರಂದು ಕುಂದಾಪುರದಲ್ಲಿ ಹಿರಿಯ ಪತ್ರಕರ್ತ ಪಿ. ಸಾಯಿನಾಥ್ ಉಪನ್ಯಾಸ
    ಊರ್ಮನೆ ಸಮಾಚಾರ

    ಫೆ.14ರಂದು ಕುಂದಾಪುರದಲ್ಲಿ ಹಿರಿಯ ಪತ್ರಕರ್ತ ಪಿ. ಸಾಯಿನಾಥ್ ಉಪನ್ಯಾಸ

    Updated:13/02/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಪರಿ ಸಂಸ್ಥೆಯ ಮುಖ್ಯಸ್ಥ ಮ್ಯಾಗ್ಸಸೆ ಪುರಸ್ಕೃತ ಪತ್ರಕರ್ತ ಪಿ. ಸಾಯಿನಾಥ ಇದೇ 14 ರಂದು ಸಂಜೆ 5.30ಕ್ಕೆ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾಮಂದಿರದಲ್ಲಿ ‘ಕಾರ್ಪೋರೇಟ್‌ ಫಾರ್ಮಿಂಗ್‌ ಮತ್ತು ಭಾರತದ ಕೃಷಿ ಬಿಕ್ಕಟ್ಟುಗಳು’ ಕುರಿತು ಉಪನ್ಯಾಸ ನೀಡಲಿದ್ದಾರೆ.

    Click Here

    Call us

    Click Here

    ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಮುದಾಯ ಕುಂದಾಪುರದ ಕಾರ್ಯದರ್ಶಿ ಸದಾನಂದ ಬೈಂದೂರು, ‘ಕೃಷಿ ಬಿಕ್ಕಟ್ಟುಗಳು ಹೆಚ್ಚುತ್ತಾ ಹೋಗುತ್ತಿದ್ದು, ರೈತರು ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ. ‘ಕೃಷಿಕರ ಆದಾಯ ದುಪ್ಪಟ್ಟು ಮಾಡುವ ಉದ್ದೇಶ ಹೊಂದಿದ್ದೇವೆ’ ಎಂದು ಸರ್ಕಾರಗಳು ಹೇಳುತ್ತಿವೆ. ಜೊತೆಗೆ ಕಾರ್ಪೋರೇಟ್‌ ಫಾರ್ಮಿಂಗ್‌ಗೆ ಪ್ರೋತ್ಸಾಹ ನೀಡುವ ಕ್ರಮಗಳು ವೇಗ ಪಡೆದುಕೊಳ್ಳುತ್ತಿದೆ. ಇಂತಹದೊಂದು ಸನ್ನಿವೇಶದಲ್ಲಿ ರೈತನ ಪಾತ್ರ ಏನು? ಈ ವಿಚಾರಗಳಿಗೆ ರೈತ ಹೇಗೆ ಮುಖಾಮುಖಿ ಆಗಬಹುದು? ಎನ್ನುವ ಬಗ್ಗೆ ರೈತ ಸಮುದಾಯದ ಜೊತೆ ಸಂವಾದ ನಡೆಸುವುದು ಈ ಉಪನ್ಯಾಸದ ಉದ್ದೇಶ’ ಎಂದರು.

    ‘ಕುಂದಾಪುರಕ್ಕೆ ಮೊದಲ ಬಾರಿ ಬರುತ್ತಿರುವ ಪಿ.ಸಾಯಿನಾಥ ಅವರು, ಮಹಾರಾಷ್ಟ್ರದ ಮರಾಠವಾಡಾ, ವಿದರ್ಭ ಪ್ರಾಂತ್ಯಗಳಲ್ಲಿ ರೈತ ಸಮುದಾಯದ ಸಂಕಷ್ಟಗಳ ಅಧ್ಯಯನ ನಡೆಸು
    ತ್ತಿದ್ದು, ಅವರ ಪರಿ (ಪೀಪಲ್ಸ್‌ ಆರ್ಕೈವ್‌ ಆಫ್‌ ರೂರಲ್‌ ಇಂಡಿಯಾ) ಸಂಸ್ಥೆಯ ಮೂಲಕ ನಾಶವಾಗುತ್ತಿರುವ ಭಾರತದ ಗ್ರಾಮೀಣ ಬದುಕು–ಸಂಸ್ಕೃತಿಗಳನ್ನು ದಾಖಲಿಸುವ ಮಹತ್ವದ ಕೆಲಸದಲ್ಲಿ ನಿರತರಾಗಿದ್ದಾರೆ’ ಎಂದು ತಿಳಿಸಿದರು.

    ಕಾರ್ಯಕ್ರಮದ ಪ್ರಾಯೋಜಕ ಸಂಸ್ಥೆ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಟ್ರಸ್ಟಿ ರಾಜಾರಾಂ ತಲ್ಲೂರು ಮಾತನಾಡಿ, ‘ಕರಾವಳಿಯಲ್ಲಿ ರೈತರು, ಮೀನುಗಾರರು, ಪಶು ಸಂಗೋಪನೆ ಮಾಡುವವರು ಹಾಗೂ ಸಹಕಾರಿ ರಂಗಗಳಲ್ಲಿ ಸಕ್ರಿಯರಾಗಿರುವವರಿಗೆ ಈ ಉಪನ್ಯಾಸ ಉತ್ತಮ ದೃಷ್ಟಿಕೋನ ನೀಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪತ್ರಕರ್ತ ರಾಮಕೃಷ್ಣ ಹೇರ್ಳೆ ಇದ್ದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    15 + six =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.