Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೇಂದ್ರ ಸರಕಾರದಿಂದ ಭೇದ ಸೃಷ್ಟಿಸಿ ವಿಭಜಿಸುವ ಕೆಲಸ: ಫಾ. ವಿಲಿಯಂ ಮಾರ್ಟಿಸ್
    ಊರ್ಮನೆ ಸಮಾಚಾರ

    ಕ್ರೇಂದ್ರ ಸರಕಾರದಿಂದ ಭೇದ ಸೃಷ್ಟಿಸಿ ವಿಭಜಿಸುವ ಕೆಲಸ: ಫಾ. ವಿಲಿಯಂ ಮಾರ್ಟಿಸ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಭಾರತದಲ್ಲಿ ಅದೆಷ್ಟೊ ಕಾಲದಿಂದ ಎಲ್ಲ ಧರ್ಮ, ಜಾತಿ, ವರ್ಗಗಳ ಜನರು ಒಂದಾಗಿ ಜೀವಿಸುತ್ತ ಬಂದಿದ್ದಾರೆ. ಆದರೆ ಕೆಂದ್ರದ ಪ್ರಸಕ್ತ ಬಿಜೆಪಿ ಸರ್ಕಾರ ನಾಗರಿಕತೆ ಕಾಯ್ದೆಗೆ ಮಾಡಿರುವ ತಿದ್ದುಪಡಿ ಮೂಲಕ ಅವರ ನಡುವೆ ಭೇದ ಸೃಷ್ಟಿಸಿ ವಿಭಜಿಸುವ ಕೆಲಸಕ್ಕೆ ಮುಂದಾಗಿದೆ. ಈ ಕೃತ್ಯವನ್ನು ಎಲ್ಲ ಸೇರಿ ವಿರೋಧಿಸಬೇಕು ಎಂದು ಮಾನವ ಹಕ್ಕುಗಳ ಹೋರಾಟಗಾರ ಫಾ. ವಿಲಿಯಂ ಮಾರ್ಟಿಸ್ ಹೇಳಿದರು.

    Click Here

    Call us

    Click Here

    ಕುಂದಾಪುರ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟ ಸಮಿತಿ ಬುಧವಾರ ನಾವುಂದದಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆ ಉದ್ಘಾಟಿಸಿ ಮಾತನಾಡಿದರು. ಇಂತಹ ಒಂದು ಕರಾಳ ಕ್ರಮಕ್ಕೆ ಅಸ್ಸಾಂ ರಾಜ್ಯವನ್ನು ಪ್ರಯೋಗ ಭೂಮಿಯಾಗಿ ಆರಿಸಿಕೊಳ್ಳಲಾಗಿದೆ. ಅಲ್ಲಿ ನಡೆದ ಎನ್‌ಆರ್‌ಸಿ ಪ್ರಕ್ರಿಯೆಯಲ್ಲಿ ೧೯ ಲಕ್ಷ ಜನರು ದೇಶದ ನಾಗರಿಕರಲ್ಲ ಎಂದು ಕಂಡುಕೊಳ್ಳಲಾಗಿದೆ. ಅವರಲ್ಲಿ೧೪ ಲಕ್ಷ ಜನರು ಹಿಂದುಗಳಿದ್ದಾರೆ. ಅವರೆಲ್ಲ ಈಗ ಸಂಕಷ್ಟದಲ್ಲಿದ್ದಾರೆ. ಆದರೂ ತಿದ್ದುಪಡಿ ಕಾಯಿದೆಯಿಂದ ದೇಶದ ಹಿಂದುಗಳಿಗೆ ತೊಂದರೆಯಾಗದು ಎಂದು ಸುಳ್ಳು ಹೇಳುತ್ತಿದ್ದಾರೆ. ನಿಜವಾಗಿ ಶೇ ೪೦ ಹಿಂದುಗಳು ನಾಗರಿಕತೆಯಿಂದ ವಂಚಿತರಾಗಿ ಸಂಕಷ್ಟ ಅನುಭವಿಸಲಿದ್ದಾರೆ. ದೇಶದಲ್ಲಿ ಆರ್ಥಿಕ ಕುಸಿತ, ನಿರುದ್ಯೋಗ, ಬಡತನದಂತಹ ಗಂಭೀರ ಸಮಸ್ಯೆಗಳಿಂದ ಜನ ನಲುಗುತ್ತಿರುವಾಗ ಅವುಗಳನ್ನು ಪರಿಹರಿಸಲು ಆದ್ಯತೆ ನೀಡುವ ಬದಲು ಇಂತಹ ಜನವಿರೋಧಿ ಕ್ರಮಗಳಿಗೆ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಅವರು ಟೀಕಿಸಿದರು.

    ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಅಧ್ಯಕ್ಷ ಶಶಿಧರ ಹೆಮ್ಮಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

    ಯುವ ಚಿಂತಕಿ ಭವ್ಯಾ ನರಸಿಂಹಮೂರ್ತಿ ಮೋದಿ ನೇತೃತ್ವದ ಬಿಜೆಪಿ ಚುನಾವಣೆಯಲ್ಲಿ ಜಯಗಳಿಸಲು ಸೈನ್ಯ ಮತ್ತು ಧರ್ಮವನ್ನು ಬಳಸಿಕೊಳ್ಳುತ್ತಿದೆ. ಆದರೆ ಸೈನಿಕರಿಗೆ ಸೂಕ್ತ ಸೌಲಭ್ಯ ಕಲ್ಪಿಸುವುದನ್ನು ನಿರ್ಲಕ್ಷಿಸುತ್ತಿದೆ. ಅವರ ಆಡಳಿತಲ್ಲಿ ವಿದ್ಯಾರ್ಥಿಗಳ, ಮಹಿಳೆಯರ ಮತ್ತು ದಲಿತರ ಮೇಲೆ ದೌರ್ಜನ್ಯ ಹೆಚ್ಚಿದೆ. ಈ ವರ್ಗಗಳ ವಿರೋಧಿ. ಸಿಎನ್‌ಎನ್ ಭಾರತ ಎಂಬ ಪರಿಕಲ್ಪನೆಗೇ ವಿರೋಧಿಯಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸಾಮಾಜಿಕ ಹೋರಾಟಗಾರ ಮುನೀರ್ ಜನ್ಸಾಲೆ, ಸುಧೀರ್‌ಕುಮಾರ್ ಮರೋಳಿ, ಎಸ್‌ಎಸ್‌ಎಫ್ ರಾಜ್ಯ ಕಾರ್ಯದರ್ಶಿ ಕೆ.ಪಿ. ಸಿರಾಜುದ್ದೀನ್ ಸಖಾಫಿ, ಆಲ್ ಇಂಡಿಯ ಇಮಾಮ್ ಕೌನ್ಸಿಲ್ ರಾಜ್ಯ ಉಪಾಧ್ಯಕ್ಷ ಮುಫ್ತಿ ಮಝಮ್ ಮೌಲಾನಾ, ಚಿಂತಕಿ-ವಾಗ್ಮಿ ನಜ್ಮಾ ನಝೀರ್ ಚಿಕ್ಕನೇರಳೆ, ಕುಂದಾಪುರ ಡಿವೈಎಫ್‌ಐ ಅಧ್ಯಕ್ಷ ರಾಜೇಶ ವಡೇರಹೋಬಳಿ ಮಾತನಾಡಿ ಕಾಯ್ದೆ ಮತ್ತು ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು. ಅಸಿಮ್ ಕುಂದಾಪುರ ವಂದಿಸಿದರು. ಇಕ್ಬಾಲ್ ಮತ್ತು ಆಸೀನ್ ಕುಂದಾಪುರ ನಿರೂಪಿಸಿದರು.

    ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬ್ಲಾಕ್ ಕಂಗ್ರೆಸ್ ಅಧ್ಯಕ್ಷ ಎಸ್. ಮದನ್‌ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ, ಜಾಮಿಯಾ ಮಸೀದಿ ಅಧ್ಯಕ್ಷ ತೌಫೀಕ್ ಅಬ್ದುಲ್ಲಾ, ಉಪಾಧ್ಯಕ್ಷ ಮನ್ಸೂರ್ ಇಬ್ರಾಹಿಂ, ಬೈಂದೂರು ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಮಂಜುನಾಥ ಹಳಗೇರಿ, ಕರ್ನಾಟಕ ಮುಸ್ಲಿಮ ಜಮಾತ್‌ನ ಇಲ್ಯಾಸ್ ನಾವುಂದ, ಎಸ್‌ಡಿಪಿಐ ಅಧ್ಯಕ್ಷ ಆಸೀಫ್ ಕೋಟೇಶ್ವರ, ಬೈಂದೂರು ಮುಸ್ಲಿಂ ಒಕ್ಕೂದ ಅಧ್ಯಕ್ಷ ಹಸನ್ ಮಾವಡ್, ತಬ್ರೆಜ್ ನಾಗೂರು, ನಾಸೀರ್, ಇತರರು ಇದ್ದರು. ಆರಂಭದಲ್ಲಿ ’ಸಾರೇ ಜಹಾಂಸೆ ಅಚ್ಛಾ’ ಹಾಡಲಾಯಿತು. ಹಿದಾಯತ್ ಕಂಡ್ಲೂರು ಕಾಯ್ದೆ ವಿರೋಧಿ ಉರ್ದು ಮತ್ತು ಕನ್ನಡ ಶಾಯರಿ ಪ್ರಸ್ತುತಪಡಿಸಿದರು. ಸಭೆಯ ಆರಂಭದಲ್ಲಿ ಮತ್ತು ನಡುವೆ ಆಜಾದಿ ಘೋಷಣೆ ಮೊಳಗಿದುವು. ರಾಷ್ಟ್ರಗೀತೆಯೊಂದಿಗೆ ಸಭೆ ಮುಕ್ತಾಯವಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    five + fifteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.