Kundapra.com ಕುಂದಾಪ್ರ ಡಾಟ್ ಕಾಂ

ಬದುಕಿನಲ್ಲಿ ಅನುಮಾನ, ಅವಮಾನದ ಬಳಿಕವೇ ಸನ್ಮಾನ: ಶೈನ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬದುಕಿನಲ್ಲಿ ಅನುಮಾನ, ಅವಮಾನ ಎದುರಿಸಿದರೆ ಒಂದಲ್ಲಾ ಒಂದು ದಿನ ಸನ್ಮಾನ ದೊರೆಯುತ್ತದೆ. ಜೀವನದಲ್ಲಿ ಮೆಟ್ಟಿಲನ್ನು ಹಂತ ಹಂತವಾಗಿ ಏರಿದರೆ ಯಶಸ್ಸು ದೊರೆಯುತ್ತದೆ ಎಂದು ಬಿಗ್‌ಬಾಸ್ ಸೀಸನ್ 7 ವಿಜೇತ ಶೈನ್ ಶೆಟ್ಟಿ ಹೇಳಿದರು.

ತಾಲೂಕಿನ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ಸಭಾಭವನದಲ್ಲಿ ಟೀಮ್ ಪಾವನಿ ಸಂಘಟನೆಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಮಾರಣಕಟ್ಟೆ ಅನುವಂಶೀಯ ಆಡಳಿತ ಮುಕ್ತೇಸರರಾದ ಸದಾಶಿವ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಂ.ಐ.ಟಿ. ಮಣಿಪಾಲ ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ಡಾ. ಅತುಲ್ ಕುಮಾರ್ ಶೆಟ್ಟಿ, ಕೊಲ್ಲೂರು ಉಪ ವಲಯ ಅರಣ್ಯಾಧಿಕಾರಿ ರೂಪೇಶ್ ಚೌವಾಣ್, ಕಮಲಶಿಲೆ ಯಕ್ಷಗಾನ ಮೇಳ ಸಂಸ್ಥಾಪಕ ಹಾಗೂ ಯಕ್ಷ ಸಂಚಲನ ಟ್ರಸ್ಟ್ ಅಧ್ಯಕ್ಷ ಕೃಷ್ಣ ಕನ್ನಂತ್ ಕುಡೇರಿ, ಕೊಲ್ಲೂರು ವ್ಯವಸ್ಥಾಪನಾ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ ಚಿತ್ತೂರು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರವಿರಾಜ್ ಶೆಟ್ಟಿ, ಪಾವನ ಟ್ರಸ್ಟ್ ಅಧ್ಯಕ್ಷ ಸಂಪತ್ ಕನ್ನಂತ, ಡಾ. ಶೃತಿ ಕನ್ನಂತ ಉಪಸ್ಥಿತರಿದ್ದರು.

ಇದನ್ನೂ ಓದಿ:
► ಮಾರಣಕಟ್ಟೆಯಲ್ಲಿ ಟೀಮ್ ಪಾವನಿ ಸಂಘಟನೆ ಉದ್ಘಾಟನೆ – https://kundapraa.com/?p=35591 .

Exit mobile version