Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾಶಿವರಾತ್ರಿ ಅಖಂಡ ಭಜನಾ ಸಪ್ತಾಹ ಮಂಗಲೋತ್ಸವದ ಸಮಾರೋಪ
    ಊರ್ಮನೆ ಸಮಾಚಾರ

    ಮಹಾಶಿವರಾತ್ರಿ ಅಖಂಡ ಭಜನಾ ಸಪ್ತಾಹ ಮಂಗಲೋತ್ಸವದ ಸಮಾರೋಪ

    Updated:23/02/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸನಾತನ ಹಿಂದೂ ಧರ್ಮದ ಪ್ರತಿಯೊಂದು ಧಾರ್ಮಿಕ ಆಚರಣೆಗಳು ವೈಜ್ಞಾನಿಕವಾಗಿಯೂ ಸಂಬಂಧ ಹೊಂದಿದೆ. ಭಜನೆಯಲ್ಲಿ ಮೂಲಾಧಾರಚಕ್ರ, ಸ್ವಾಧಿಷ್ಠಾನಚಕ್ರ ಮಣಿಪುರಚಕ್ರ ಹಾಗೂ ಸಹಸ್ರಾಳಚಕ್ರ ಎಂಬ ವಿಧಗಳಿವೆ. ಹೀಗಾಗಿ ನಾವು ಮಾಡುವ ಪ್ರತಿಯೊಂದು ಧಾರ್ಮಿಕ ಪದ್ದತಿಗಳು ಗಣಪತಿ ಸ್ತುತಿಯೊಂದಿಗೆ ಆರಂಭಗೊಳ್ಳಲಿದ್ದು, ಇದು ಶಾಸ್ತ್ರದ ನಿಯಮವಾಗಿದೆ ಎಂದು ವೇ. ಮೂ. ಹಳಗೇರಿ ವಾಸುದೇವ ಕಾರಂತ ಹೇಳಿದರು.

    Click Here

    Call us

    Click Here

    ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ಭಜನಾ ಮಂಡಳಿಯ ವತಿಯಿಂದ ನಡೆದ ಮಹಾಶಿವರಾತ್ರಿ ಅಖಂಡ ಭಜನಾ ಸಪ್ತಾಹದ ಮಂಗಲೋತ್ಸವದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಧ್ಯಾನಮಾರ್ಗ, ಭಕ್ತಿಮಾರ್ಗ ಮತ್ತು ಕರ್ಮಮಾರ್ಗಗಳಿಂದ ಮಾತ್ರ ನಮ್ಮ ಆಂತರಿಕ ಕೊಳೆಯನ್ನು ತೊಳೆದುಕೊಳ್ಳಬಹುದು. ಭಕ್ತಿ ಮಾರ್ಗ ಅಂದರೆ ಭಜನೆಯ ಮೂಲಕ ಶೀಘ್ರ ಭಗವಂತನ ಒಲುಮೆ ಸಾಧ್ಯವಾಗುತ್ತದೆ. ಬ್ರಾಹ್ಮಿ ಹಾಗೂ ಗೋದೂಳಿ ಸಮಯದಲ್ಲಿ ದೇವರ ಸ್ಮರಣೆ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಇದಕ್ಕೆ ಮೂಲವಾಗಿರುವ ವಿಧಾನವೇ ಭಜನೆ. ಇದು ತಪಸ್ಸಿಗೆ ಸಮನಾಗಿರುವುದಲ್ಲದೇ ಭಗವಂತನ ಅನುಗ್ರಹಕ್ಕೆ ಪಾತ್ರರಾಗಿ ಶೀಘ್ರವಾಗಿ ಆತನನ್ನು ಒಲಿಸಿಕೊಳ್ಳುವ ಸುಲಭದ ದಾರಿಯಾಗಿದೆ. ಅಲ್ಲದೇ ಆತ್ಮೋದ್ಧಾರಕ್ಕೆ ಕೂಡಾ ಭಜನೆ ಅತ್ಯವಶ್ಯಕ ಎಂದರು.

    ಹೆರಂಜಾಲು ಶ್ರೀ ಗುಡೇಮಹಾಲಿಂಗೇಶ್ವರ ದೇವಸ್ಥಾನ ಧರ್ಮದರ್ಶಿ ಹೆಚ್. ಪದ್ಮನಾಭ ಮೇರ್ಟ ಅಧ್ಯಕ್ಷತೆವಹಿಸಿದ್ದರು. ಹಿರಿಯ ಭಜನಾ ಸಾಧಕರಾದ ಗೋವಿಂದ ದೇವಾಡಿಗ, ಮಹಾಲಿಂಗ ಭಟ್ಟ, ಪದ್ಮನಾಭ ಹೆಬ್ಬಾರ್, ಹೆರಿಯ ದೇವಾಡಿಗ, ವೆಂಕ್ಟ ದೇವಾಡಿಗ, ಶೀನ ದೇವಾಡಿಗ, ದಾರ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಜಿಪಂ ಸದಸ್ಯೆ ಗೌರಿ ದೇವಾಡಿಗ, ಕಂಬದಕೋಣೆ ಗ್ರಾಪಂ ಅಧ್ಯಕ್ಷ ಆನಂದ ಪೂಜಾರಿ, ಕಾಲ್ತೋಡು ಗ್ರಾಪಂ ಅಧ್ಯಕ್ಷ ಬಿ. ಅಣ್ಣಪ್ಪ ಶೆಟ್ಟಿ ಬಟ್ನಾಡಿ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕ ಗಣೇಶ ಬಿ., ಕಾಲ್ತೋಡು ಶ್ರೀಮಾಲಸಾ ಮಾರಿಕಾಂಬಾ ದೇವಸ್ಥಾನದ ರಾಮಯ್ಯ ಅರ್ಚಕರು, ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದ ಮಾಜಿ ಧರ್ಮದರ್ಶಿ ಕೆ. ಉಮೇಶ ಶ್ಯಾನಭೋಗ, ಭಜನಾ ಮಂಡಳಿ ಕಾರ್ಯದರ್ಶಿ ನಾಗೇಶ ದೇವಾಡಿಗ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಅಧ್ಯಕ್ಷೆ ಸುಮತಿ ಪಿ. ಮೇರ್ಟ, ಶ್ರೀನಿವಾಸ ಜೋಯಿಸ ಹೇರಂಜಾಲು, ಶ್ರೀ ಗುಡೇಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಮಂಜುನಾಥ ಅಡಿಗ, ಉದ್ಯಮಿ ಅಪ್ಪೆಡಿಮನೆ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ನಾಗರಾಜ ಮೆರ್ಟ ಸ್ವಾಗತಿಸಿ, ಭಜನಾ ಮಂಡಳಿ ಅಧ್ಯಕ್ಷ ಶ್ರೀನಾಥ ಮೇರ್ಟ ಪ್ರಾಸ್ತಾವಿಸಿದರು. ವಿನಾಯಕ ಮೇರ್ಟ ನಿರೂಪಿಸಿದರು.

    ಸಂಜೆ ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಗುಡೇದೇವಸ್ಥಾನ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಂತರ ವಿದ್ಯಾರ್ಥಿಗಳು ಮತ್ತು ಹಳೆವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ರಾತ್ರಿ ಕಲಾಸ್ಫೂರ್ತಿ ಹವ್ಯಾಸಿ ಕಲಾತಂಡ ಕುಂದಾಪುರ ಇವರಿಂದ ಹಾಸ್ಯಮಯ ನಗೆನಾಟಕ ಮನೆಒಕ್ಲು ಪ್ರದರ್ಶನಗೊಂಡಿತು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025

    ವೃದ್ಧೆ ನಾಪತ್ತೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.