ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ : ಎಂ. ಮಹೇಶ್ವರ ರಾವ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಿನಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ.

Call us

Click Here

Click here

Click Here

Call us

Visit Now

Click here

ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಕಳೆದ ಬಾರಿ ಬೇಸಿಗೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ತಲೆದೋರಿದ ನೀರಿನ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಈ ಬಾರಿ ಮೇ ಅಂತ್ಯದವರೆಗೂ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದ ಅವರು, ನೀರಿನ ಕಡಿತಗೊಳಿಸುವ ನಿರ್ಣಯ ಕೈಗೊಳ್ಳುವ ಮೊದಲು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯ ತತ್ಪರರಾಗಿ ಎಂದು ತಿಳಿಸಿದರು.

ಬೇಸಿಗೆ ಸಮಯದಲ್ಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ವಿತರಿಸುವ ಕುರಿತಂತೆ ಆಪ್ ಅಭಿವೃದ್ದಿಪಡಿಸಲಾಗಿದ್ದು, ಇದರ ಪ್ರಾಯೋಗಿಕ ಬಳಕೆಯ ಕುರಿತು ಎಲ್ಲಾ ತಹಸೀಲ್ದಾರ್ ಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಲು ಕಾಲ್ ಸೆಂಟರ್ ತೆರಯುವಂತೆ ತಿಳಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ನದಿ ದಂಡೆಯಲ್ಲಿನ ರೈತರಿಗೆ ನದಿಯ ನೀರು ಬಳಸುವುದರ ಬದಲು ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಕುರಿತಂತೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಸಿ, ಅವರ ಮನವೊಲಿಸುವಂತೆ ತಿಳಿಸಿದರು.

Call us

ಜಿಲ್ಲೆಯಲ್ಲಿ ಮಲೇರಿಯಾ ಮುಂತಾದ ರೋಗ ಹರಡುವಿಕೆಯನ್ನು ನಿಯಂತ್ರಿಸಲು ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದ ಕಾರ್ಯದರ್ಶಿಗಳು, ಕಟ್ಟಡ ನಿರ್ಮಾಣ ಸ್ಥಳದಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸದ ಕಟ್ಟಡ ಮಾಲೀಕರಿಗೆ ಹೆಚ್ಚಿನ ಪ್ರಮಾಣದ ದಂಡ ವಿಧಿಸುವಂತೆ ಹಾಗೂ ಈ ಬಗ್ಗೆ ನಗರಸಭೆಯ ಬೈಲಾದಲ್ಲಿ ಅಳವಡಿಸಿ, ನಗರ ಸಭೆಯ ಅಧಿಕಾರಿಗಳ ತಂಡ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುವಂತೆ ಹಾಗೂ ಜಿಲ್ಲೆಯಲ್ಲಿ ಎಳನೀರು ಸಿಪ್ಪೆಯನ್ನು ಬಿಸಾಡುವ ಬದಲು ಅದನ್ನು ಮೌಲ್ಯವರ್ಧಿತ ಮಾಡುವ ಕುರಿತಂತೆ ತೋಟಗಾರಿಕಾ ಅಧಿಕಾರಿಗಳು ಮತ್ತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಪರಿಶೀಲಿಸುವಂತೆ ಹಾಗೂ ಮೌಲ್ಯವರ್ಧನೆ ಮಾಡಲು ಮುಂದೆ ಬರುವ ಕೈಗಾರಿಕೋದ್ಯಮಿಗಳಿಗೆ ಅಗತ್ಯ ಸಹಾಯಧನ ಮತ್ತು ಕೈಗಾರಿಕೆ ಸ್ಥಾಪನೆಗೆ ಸ್ಥಳವನ್ನು ನೀಡುವಂತೆ ಸೂಚಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್‌ಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ 90 ಮಂದಿ ಡಯಾಲಿಸಿಸ್‌ಗೆ ಒಳಪಡುತ್ತಿದ್ದು, 50 ಮಂದಿ ಕಾಯುವಿಕೆ ಪಟ್ಟಿಯಲ್ಲಿ ಇದ್ದಾರೆ ಎಂಬುದನ್ನು ಪರಿಶೀಲಿಸಿದ ಮಹೇಶ್ವರ ರಾವ್, ಜಿಲ್ಲೆಯಲ್ಲಿನ ಖಾಸಗಿ ಸಂಸ್ಥೆಗಳು ತಮ್ಮ ಸಿಎಸ್‌ಆರ್ ನಿಧಿಯಿಂದ ಡಯಾಲಿಸಿಸ್ ಯಂತ್ರ ನೀಡಲು ಆಸಕ್ತಿ ಇರುವ ಬಗ್ಗೆ ಪರಿಶೀಲಿಸಿ, ಕಾರ್ಕಳದ ನೂತನ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರ ಅಳವಡಿಸುವಂತೆ ಜಿಲ್ಲಾ ಸರ್ಜನ್‌ಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ವಾರದಲ್ಲಿ ಒಂದು ದಿನ ಕಚೇರಿಯ ಕೆಲಸವನ್ನು ಬಿಟ್ಟು, ತಮ್ಮ ಇಲಾಖಾ ವ್ಯಾಪ್ತಿಯ ಕಾಮಗಾರಿಗಳ ಪ್ರಗತಿಯ ವೀಕ್ಷಣೆಗಾಗಿ ಕ್ಷೇತ್ರ ಭೇಟಿಯನ್ನು ನೀಡುವಂತೆ ಸೂಚಿಸಿದ ಮಹೇಶ್ವರ ರಾವ್, ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಓ ಮೂಲಕ ವೇಳಾಪಟ್ಟಿ ತಯಾರಿಸುವಂತೆ ಹಾಗೂ ನಿಗಧಿತ ಭೇಟಿಯ ದಿನದಂದು ಯಾವುದೇ ಸಭೆಗಳಿದ್ದರೆ ಪೂರ್ವಾನುಮತಿ ಪಡೆಯುವಂತೆ ಸೂಚಿಸಿದರು.

ಜಿಲ್ಲೆಯಲ್ಲಿನ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವಂತೆ ತಿಳಿಸಿದ ಕಾರ್ಯದರ್ಶಿ, ಪಡುಕೆರೆ ಬೀಚ್‌ನಲ್ಲಿ ಲೈಟ್ ಅಳವಡಿಕೆ ಮತ್ತು ಕಾಪು ಲೈಟ್ ಹೌಸ್ ಬಳಿ ಅಗತ್ಯ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಮತ್ತು ಜಿಲ್ಲೆಯಲ್ಲಿ ಮರಳು ಸಾಗಾಟ ಸಂದರ್ಭದಲ್ಲಿ, ನಿಯಮ ಉಲ್ಲಂಘನೆಯಾಗಿರುವ ಪ್ರಕರಣಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡುವಂತೆ ಸೂಚಿಸಿದರು.

ಪ್ರಾಕೃತಿಕ ವಿಕೋಪ ಅನುದಾನದಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಕಾರ್ಯದರ್ಶಿ, ಈ ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

1 × two =