Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎನ್ಕೌಂಟರ್ ಸ್ಪೆಶಲಿಸ್ಟ್ ದಯಾ ನಾಯಕ್ ಸಸ್ಪೆಂಡ್
    ಮುಂಬೈ

    ಎನ್ಕೌಂಟರ್ ಸ್ಪೆಶಲಿಸ್ಟ್ ದಯಾ ನಾಯಕ್ ಸಸ್ಪೆಂಡ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮುಂಬೈ: ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂಬ ಹಿನ್ನೆಲೆಯಲ್ಲಿ ನಾಗಪುರ್ ಕ್ಕೆ ತೆರಳಲು ನಿರಾಕರಿಸಿದ ಎನ್ ಕೌಂಟರ್ ಸ್ಪೆಶಲಿಸ್ಟ್ ಎಂದೇ ಹೆಸರು ಗಳಿಸಿದ್ದ ಮುಂಬೈ ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕನ್ನಡಿಗ ದಯಾ ನಾಯಕ್ ಅವರನ್ನು ಮಹಾರಾಷ್ಟ್ರ ಸರ್ಕಾರ ಪೊಲೀಸ್ ಸೇವೆಯಿಂದ ಅಮಾನತು ಮಾಡಿದೆ.

    Click Here

    Call us

    Click Here

    ನನ್ನ ಕುಟುಂಬಕ್ಕೆ ಮೊದಲ ಆದ್ಯತೆ ಹಾಗಾಗಿ ನಾನು ನಾಗ್ಪುರಕ್ಕೆ ತೆರಳಲ್ಲ ಎಂದು ದಯಾ ಪ್ರತಿಭಟಿಸಿದ್ದರು. ಹಾಗಾಗಿಯೇ ಗುರುವಾರ ದಯಾ ನಾಯಕ್ ಅವರಿಗೆ ಅಮಾನತು ಮಾಡಿರುವ ಆದೇಶ ಬಂದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

    ದಯಾ ನಾಯಕ್ ಅವರನ್ನು ಕಳೆದ ವರ್ಷ ನಾಗ್ಪುರಕ್ಕೆ ವರ್ಗಾಯಿಸಲಾಗಿತ್ತು. ಆದರೆ ತನ್ನ ಹಾಗೂ ತನ್ನ ಹೆಂಡತಿ, ಮಕ್ಕಳಿಗೆ ಜೀವ ಬೆದರಿಕೆ ಇದ್ದು, ತಾವು ನಾಗ್ಪುರದಲ್ಲಿ ಕರ್ತವ್ಯ ನಿರ್ವಹಿಸಲಾರೆ ಎಂದು ಮಹಾರಾಷ್ಟ್ರ ಸರ್ಕಾರ ಮತ್ತು ರಾಜ್ಯ ಡಿಜಿಪಿ ಗಮನಕ್ಕೆ ತಂದಿದ್ದರು. ಆದರೆ ಅವರನ್ನು ಯಾವ ಕಾರಣದ ಮೇಲೆ ಅಮಾನತು ಮಾಡಲಾಗಿದೆ ಎಂಬ ಬಗ್ಗೆ ವಿವರ ನೀಡಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಿರಾಕರಿಸಿರುವುದಾಗಿ ವರದಿ ವಿವರಿಸಿದೆ.

    ಏತನ್ಮಧ್ಯೆ ಮಹಾರಾಷ್ಟ್ರ ಸರ್ಕಾರ, ಹಿರಿಯ ಪೊಲೀಸ್ ಅಧಿಕಾರಿಗಳು ದಯಾ ನಾಯಕ್ ಅವರನ್ನು ಅಮಾನತಿನಲ್ಲಿಡಲು ಮುಂದಾಗಿದೆ. ದಯಾ ನಾಯಕ್ ಮತ್ತು ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂಬ ನೆಲೆಯಲ್ಲಿ 1997ರಿಂದ 2006ರವರೆಗೆ ಭದ್ರತೆ ನೀಡಲಾಗಿತ್ತು.

    ದಯಾ ನಾಯಕ್ ಎನ್ ಕೌಂಟರ್ ಗೆ ಸುಮಾರು 80 ಮಂದಿ ಬಲಿಯಾಗಿದ್ದರು. ಇದರಿಂದಾಗಿ ದಯಾ ನಾಯಕ್ ತಮ್ಮನ್ನು ತಾವೇ ಹೆಚ್ಚು ಬಿಂಬಿಸಿಕೊಂಡಿದ್ದರು, ಅಲ್ಲದೇ ಇದರಿಂದ ತನಗೂ, ತನ್ನ ಕುಟುಂಬಕ್ಕೂ ಬೆದರಿಕೆ ಇದೆ ಎಂದು ಹೇಳಿದ್ದರು. ಬಳಿಕ ಮಹಾರಾಷ್ಟ್ರ ಸರ್ಕಾರ ದಯಾ ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು.

    Click here

    Click here

    Click here

    Call us

    Call us

    ದಯಾ ನಾಯಕ್ ಅಕ್ರಮ ಆಸ್ತಿ ಹೊಂದಿರುವುದಾಗಿ ಮಾಜಿ ಪತ್ರಕರ್ತ ಕೇತನ್ ತಿರೋಡ್ಕರ್ ಆರೋಪಿಸಿ ದೂರು ನೀಡಿದ್ದರು. ಆ ನಿಟ್ಟಿನಲ್ಲಿ 2006ರಲ್ಲಿ ಭ್ರಷ್ಟಾಚಾರ ನಿಗ್ರಹ ದಳ ದಯಾ ನಾಯಕ್ ಅವರನ್ನು ಬಂಧಿಸಿತ್ತು. 2010ರಲ್ಲಿ ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ನಾಯಕ್ ಮೇಲಿನ ಎಲ್ಲಾ ಆರೋಪಗಳನ್ನು ವಜಾಗೊಳಿಸಿತ್ತು. ಬಳಿಕ 2012ರಲ್ಲಿ ದಯಾ ನಾಯಕ್ ಅವರನ್ನು ಸೇವೆಗೆ ಮಹಾರಾಷ್ಟ್ರ ಸರ್ಕಾರ ನೇಮಿಸಿತ್ತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

    11/01/2023

    ಬಿಲ್ಲವ ಸೇವಾ ಸಂಘ ಮುಂಬಯಿ ನೂತನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಆಯ್ಕೆ

    26/09/2020

    ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

    23/07/2020

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d