Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುಂಬೈ ಬಿಲ್ಲವರ ಅಸೋಸಿಯೇಶನ್‌‌: ಶೈಕ್ಷಣಿಕ ನೆರವು ವಿತರಣೆ
    ಮುಂಬೈ

    ಮುಂಬೈ ಬಿಲ್ಲವರ ಅಸೋಸಿಯೇಶನ್‌‌: ಶೈಕ್ಷಣಿಕ ನೆರವು ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮುಂಬೈ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ನಲಸೋಪರ-ವಿರಾರ್‌ ಸ್ಥಳೀಯ ಕಚೇರಿಯ ವತಿಯಿಂದ ಶೈಕ್ಷಣಿಕ ನೆರವು ವಿತರಣೆ ಸಮಾರಂಭ ಜೂ. 28ರಂದು ನಲಸೋಪರ (ಪೂ.) ಆಚೋಲೆ ಗಣಪತಿ ಮಂದಿರದ ಸಭಾಗೃಹದಲ್ಲಿ ಜರಗಿತು.

    Click Here

    Call us

    Click Here

    ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಗಣೇಶ್‌ ವಿ. ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
    ವೇದಿಕೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದ ಶ್ರೀನಿವಾಸ ನಾಯ್ಡು ಮಾತ ನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರದ್ಧೆ, ಏಕಾಗ್ರತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಬಿಲ್ಲವರ ಅಸೋಸಿ ಯೇಶನ್‌ನ ಸಮಾಜಪರ ಯೋಜನೆಗಳ ಸದುಪಯೋಗವನ್ನು ಸಮಾಜ ಬಾಂಧವರು ಪಡೆದುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳಿಗೆ ನನ್ನ ಪ್ರೋತ್ಸಾಹ, ಸಹಕಾರ ಸದಾವಿರುತ್ತದೆ.

    ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಥೆಯ ಋಣ ತೀರಿಸುವ ಕಾರ್ಯದಲ್ಲಿ ಮುಂದಾಗಬೇಕು ಎಂದರು.
    ಮತ್ತೋರ್ವ ಅತಿಥಿ ಕೇಂದ್ರ ಕಚೇರಿಯ ಜತೆ ಕಾರ್ಯದರ್ಶಿ ಧನಂಜಯ ಕೋಟ್ಯಾನ್‌ ಮಾತನಾಡಿ, ಅಸೋಸಿಯೇಶನ್‌ನ ವಿದ್ಯಾ ಉಪಸಮಿತಿಯು ವಿದ್ಯಾಭ್ಯಾಸಕ್ಕಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಸಭೆಯ ಮುಂದಿಟ್ಟರು. ಸಂಸ್ಥೆಯ ಯೋಜನೆಗಳ ಪ್ರಯೋಜನವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದರು.

    ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ಜಗದೀಶ್‌ ಆರ್‌. ಅಮೀನ್‌, ಗೌರವ ಕಾರ್ಯದರ್ಶಿ ಆನಂದ ಸಿ. ಕೋಟ್ಯಾನ್‌, ಗೌರವ ಕೋಶಾಧಿಕಾರಿ ಪ್ರಮೋದ್‌ ಎಸ್‌. ಸುವರ್ಣ ಉಪಸ್ಥಿತರಿದ್ದರು.
    ಯುವಾಭ್ಯುದಯ ಸಮಿತಿಯ ಕಾರ್ಯದರ್ಶಿ ಸದಾಶಿವ ಕರ್ಕೇರ ಮಾತ ನಾಡಿ, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಮಾಜಪರ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಬೇಕು ಎಂದು ಹೇಳಿದರು.

    ಕಾರ್ಯಾಧ್ಯಕ್ಷ ಗಣೇಶ್‌ ವಿ. ಸುವರ್ಣ ಮಾತನಾಡಿ, ಸಮಾಜ ಬಾಂಧವರಿಗೆ ಹಾಗೂ ನೆರೆದ ವಿದ್ಯಾರ್ಥಿಗಳಿಗೆ ಸ್ಥಳೀಯ ಕಚೇರಿಯ ಎಲ್ಲಾ ಕಾರ್ಯಕ್ರಮಗಳಿಗೆ ಬಂದು ಸಹಕರಿಸಬೇಕು. ನಮ್ಮ ಸಮಾಜದ ಸಂಸ್ಕೃತಿಯನ್ನು ಪಾಲಕರು ಮಕ್ಕಳಿಗೆ ಕಲಿಸಬೇಕು. ಸಮಿತಿಯ ಸದಸ್ಯರು ನಮ್ಮ ಕಾರ್ಯಕ್ರಮಗಳನ್ನು ಸಮಾಜ ಬಾಂಧವರ ಮನೆ-ಮನಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಸಮಿತಿಯ ಸ್ಥಾಪಕ ಸದಸ್ಯರು, ಮಹಿಳೆಯರು, ವಿದ್ಯಾರ್ಥಿಗಳು, ಸಮಾಜ ಬಾಂಧವರು ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿ ಆನಂದ ಸಿ. ಕೋಟ್ಯಾನ್‌ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

    11/01/2023

    ಬಿಲ್ಲವ ಸೇವಾ ಸಂಘ ಮುಂಬಯಿ ನೂತನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಆಯ್ಕೆ

    26/09/2020

    ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

    23/07/2020

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d