Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಲಾಕ್ ಡೌನ್: ನಿರ್ಬಂಧಗಳ ಪಾಲನೆ ತಪ್ಪಿದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ
    ಉಡುಪಿ ಜಿಲ್ಲೆ

    ಉಡುಪಿ ಲಾಕ್ ಡೌನ್: ನಿರ್ಬಂಧಗಳ ಪಾಲನೆ ತಪ್ಪಿದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೊರೊನಾ ನಿಯಂತ್ರಣ ಕುರಿತಂತೆ, ರಾಜ್ಯ ಸರ್ಕಾರ ಸೂಚಿಸಿರುವ ನಿರ್ಬಂಧಗಳನ್ನು ಉಡುಪಿ ಜಿಲ್ಲೆಯ ನಾಗರೀಕರು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಈ ನಿರ್ಬಂಧಗಳನ್ನು ಉಲ್ಲಂಘಿಸುವವರ ವಿರುದ್ದ ಕಾನೂನು ರೀತಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

    Click Here

    Call us

    Click Here

    ಅವರು ಮಂಗಳವಾರ, ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಗೆ ವಿದೇಶದಿಂದ ಬಂದಿರುವ ೯೦೦ ಜನರನ್ನು ಗುರುತಿಸಲಾಗಿದ್ದು, ಈ ಎಲ್ಲರ ಮನೆಗಳಿಗೆ ನೋಟೀಸ್ ಅಂಟಿಸಲಾಗಿದ್ದು, ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಪಾಲಿಸಲು ಸೂಚಿಸಲಾಗಿದ್ದು, ಪ್ರತಿದಿನ ದಿನಕ್ಕೆ 2 ಬಾರಿ ಗಸ್ತು ಪೊಲೀಸರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ತೆರಳಿ ಪರಿಶೀಲಿಸಲಿದ್ದಾರೆ ಅಲ್ಲದೇ ಈ ಮನೆಗಳ ಪಕ್ಕದವರಿಗೂ ಇವರ ಬಗ್ಗೆ ಮಾಹಿತಿ ನೀಡಿದ್ದು, ಮನೆಯಿಂದ ಹೊರಬಂದಲ್ಲಿ ಕೂಡಲೇ ಜಿಲ್ಲಾಡಳಿತದ ಉಚಿತ ಟೋಲ್ ಫ್ರೀ ನಂ.1077ಹಾಗೂ ಪೊಲೀಸ್ ಕಂಟ್ರೋಲ್ ರೂಮ್ 100 ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ, ಈ ನಿರ್ಬಂದ ಪಾಲಿಸದಿದ್ದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.

    ಜಿಲ್ಲೆಯಲ್ಲಿ ದಿನನಿತ್ಯದ ದಿನಸಿ ವಸ್ತುಗಳು ದೊರೆಯಲಿದ್ದು, ಸಾರ್ವಜನಿಕರು ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವುದನ್ನು ನಿರ್ಬಂದಿಸಿದೆ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಮನೆಯಿಂದ ಮನೆಯಿಂದ ಹೊರಬರಲು ಅವಕಾಶವಿದೆ, ತರಕಾರಿ , ಹಣ್ಣು ಮುಂತಾದ ಅಗತ್ಯ ವಸ್ತುಗಳ ಕೃತಕ ಅಭಾವ ಸೃಷ್ಠಿಸಿ, ಹೆಚ್ಚಿನ ಬೆಲೆಗೆ ಮಾರುವವರ ವಿರುದ್ದ ಸಹ ಕಠಿಣ ಕ್ರಮ ಕೈಗೊಳ್ಳ ಲಾಗುವುದು ಎಂದ ಎಚ್ಚರಿಸಿದ ಜಿಲ್ಲಾಧಿಕಾರಿ, ಜಿಲ್ಲಗೆ ಹೊರ ಜಿಲ್ಲೆಯಿಂದ ಬರುವ ದಿನಸಿ ಮತ್ತು ತರಕಾರಿ ವಾಹನಗಳ ಚಾಲಕರ ಆರೋಗ್ಯವನ್ನು ಪರಿಶೀಲಿಸಿ ಜಿಲ್ಲೆಯೊಳಗೆ ಪ್ರವೇಶ ನೀಡಲಾಗುವುದು , ವ್ಯಾಪಾರಿಗಳು ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಗ್ರಾಹಕರಿಂದ 6 ಅಡಿ ಅಂತರದಲ್ಲಿ ವ್ಯವಹಾರ ನಿರ್ವಹಿಸುವಂತೆ ಹಾಗೂ ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅನುಮತಿ ಇದ್ದು, ಗ್ರಾಹಕರು ಕುಳಿತು ತಿನ್ನುವುದಕ್ಕೆ ಅವಕಾಶವಿಲ್ಲ ಇದನ್ನು ಉಲ್ಲಂಘಿಸಿದಲ್ಲಿ ಗ್ರಾಹಕರು ಮತ್ತು ಸಂಬಂದಪಟ್ಟ ಹೊಟೆಲ್ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಸೂಚಿಸಿದರು.

    ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೋನ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ, ಒಂದು ವೇಳ ಕಂಡುಬಂದಲ್ಲಿ ಜಿಲ್ಲಾಸ್ಪತ್ರೆಯನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿ , ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು ಅದರ ಹೊರತು ಬೇರೆ ಯಾವುದೇ ರೋಗಿಗಳಿಗೆ ಅಲ್ಲಿ ಚಿಕಿತ್ಸೆ ನೀಡುವುದಿಲ್ಲ, ಕರೋನಾ ರೋಗಿಗಳೊಂದಿಗೆ ನೇರ ಸಂಪರ್ಕ ಹೊಂದಿರುವ ಕೊರೋನಾ ಶಂಕಿತರನ್ನು ಐಸೋಲೇಶನ್ ನಲ್ಲಿಡಲು ಉದ್ಯಾವರದ ಎಸ್.ಡಿ.ಎಂ ಕಾಲೇಜಿನಲ್ಲಿ 150 ಬೆಡ್ ಗಳ ವ್ಯವಸ್ಥೆ ಮಾಡಿದ್ದು, ಇನ್ನೂ ಅಗತ್ಯ ಬಿದ್ದಲ್ಲಿ ಕೆಎಂಸಿ ಯಲ್ಲಿ ೧೦೦ ಬೆಡ್ ಗಳ ವ್ಯವಸ್ಥೆ ಮತ್ತು ನಗರದ ನೂತನ ಗ್ರಂಥಾಲಯ ಕಟ್ಟಡದಲ್ಲಿ ಸಹ ಅಗತ್ಯ ವ್ಯವಸ್ಥೆ ನಿರ್ಮಾಣ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

    Click here

    Click here

    Click here

    Click Here

    Call us

    Call us

    ಈಗಾಗಲೇ ಕೆಲವೊಂದು ಅಂಗಡಿಗಳು, ವಾಣಿಜ್ಯ ಸಂಸ್ಥೆ, ಕೈಗಾರಿಕೆಗಳ ವ್ಯವಹಾರವನ್ನು ಸ್ಥಗಿತಗೊಳಿಸಿದ್ದು, ಅಂತಹ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನಸಹಿತ ರಜೆ ನೀಡುವಂತೆ ಮತ್ತು ಅವರನ್ನು ಉದ್ಯೋಗದಿಂದ ವಜಾಗೊಳಿಸಂತೆ ಸಂಬಂಧಪಟ್ಟ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

    ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಕ್‌ಗಳ ತಮ್ಮ ಸೇವೆಯನ್ನು ಸ್ಥಗಿತಗೊಳಿಸದಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಅವಶ್ಯಕ ಸೇವೆ ಹೊರತುಪಡಿಸಿ ಇತರೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಕಚೇರಿಗೆ ಬರುವ ಅಗತ್ಯವಿಲ್ಲ ಆದರೆ ಕೇಂದ್ರಸ್ಥಾನದಲ್ಲಿ ಲಭ್ಯರಿದ್ದು ತುರ್ತು ಸಂದರ್ಭದಲ್ಲಿ ಹಾಜರಾಗುವಂತೆ ಸೂಚಿಸಿದರು.

    ಮಲ್ಪೆ ಬಂದರಿನಲ್ಲಿ ಸಮುದ್ರಕ್ಕೆ ಹೋಗಿರುವ ಬೋಟುಗಳು ಮಾತ್ರ ವಾಪಸ್ ಬರುತ್ತಿದ್ದು, ಹೊಸ ಬೋಟುಗಳು ಸಮುದ್ರಕ್ಕೆ ತೆರಳಲು ಅವಕಾಶವಿಲ್ಲ ಈಗಾಗಲೇ ಬೋಟುಗಳಿಗೆ ನೀಡಲಾಗುವ ಇಂದನ ಸಬ್ಸಿಡಿಯನ್ನು ಸಸ್ಪೆಂಡ್ ಮಾಡಲಾಗಿದೆ, ಮಲ್ಪೆ ಬಂದರಿನ ಕಾರ್ಯ ಚಟುವಟಿಕೆಗಳಿಗೆ ಇಂದು ಕೊನೆಯ ದಿನವಾಗಿದ್ದು, ಸರಕಾರದ ಆದೇಶವನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ಮಾತನಾಡಿ, ಸಾರ್ವಜನಿಕರು ಈ ಅವಧಿಯಲ್ಲಿ ಪೊಲೀಸರೊಂದಿಗೆ ಅನವಶ್ಯಕ ವಾದ ಮಾಡಬೇಡಿ , ಸರಕಾರದ ನಿಬಂದಗಳನ್ನು ಪಾಲಿಸಿ, ನಿಮ್ಮ ಆರೋಗ್ಯದ ದೃಷ್ಠಿಯಿಂದ ಈ ನಿರ್ಬಂದಗಳನ್ನು ವಿಧಿಸಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ದ ಕಾನೂನಿನಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಡಿಹೆಚ್‌ಓ ಡಾ. ಸುಧೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    18 − 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.