Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲಾಜಗತ್ತು ಮುಂಬಯಿ ನೂತನ ಅಧ್ಯಕ್ಷರಾಗಿ ಲೀಲೇಶ್‌ ಶೆಟ್ಟಿ ಆಯ್ಕೆ
    ಮುಂಬೈ

    ಕಲಾಜಗತ್ತು ಮುಂಬಯಿ ನೂತನ ಅಧ್ಯಕ್ಷರಾಗಿ ಲೀಲೇಶ್‌ ಶೆಟ್ಟಿ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮುಂಬಯಿ: ಕಲಾಜಗತ್ತು ಮುಂಬಯಿ ಇದರ ನೂತನ ಅಧ್ಯಕ್ಷರಾಗಿ ಲೀಲೇಶ್‌ ಆರ್‌. ಶೆಟ್ಟಿ ಆಯ್ಕೆಯಾಗಿದ್ದಾರೆ. ಜೂ. 29ರಂದು ಸಾಂತಾಕ್ರೂಜ್‌ (ಪೂ.) ಪ್ರಭಾತ್‌ ಕಾಲನಿಯ ಪೇಜಾವರ ಮಠದಲ್ಲಿ ತೋನ್ಸೆ ವಿಜಯ ಕುಮಾರ್‌ ಶೆಟ್ಟಿ ನೇತೃತ್ವದ ಕಲಾಜಗತ್ತು ಮುಂಬಯಿ ಇದರ ವಿಶೇಷ ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

    Click Here

    Call us

    Click Here

    ಉಪಾಧ್ಯಕ್ಷರಾಗಿ ಕೃಷ್ಣರಾಜ್‌ ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ದಯಾಸಾಗರ್‌ ಚೌಟ, ಜತೆ ಕಾರ್ಯದರ್ಶಿಯಾಗಿ ಶಿವಾನಂದ ಶೆಟ್ಟಿ, ಗೌರವ ಕೋಶಾಧಿಕಾರಿಯಾಗಿ ಜಗದೀಶ್‌ ರಾವ್‌, ಜತೆ ಕೋಶಾಧಿಕಾರಿಯಾಗಿ ಚಂದ್ರಾವತಿ ವಸಂತ್‌ ಅವರನ್ನು ನೇಮಿಸಲಾಯಿತು.

    ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸುರೇಂದ್ರ ಕುಮಾರ್‌ ಹೆಗ್ಡೆ, ಕೃಷ್ಣರಾಜ್‌ ಶೆಟ್ಟಿ, ಪ್ರಭಾಕರ ಶೆಟ್ಟಿ, ಎನ್‌. ಪೃಥ್ವಿರಾಜ್‌ ಮುಂಡ್ಕೂರು, ಕೆ. ಆರ್‌. ವಿ. ಶೆಟ್ಟಿ, ಅಶು ಪಾಂಗಾಳ, ಜೂಲಿಯೆಟ್‌ ಪಿರೇರ, ಕುಶಲ್‌ ಕೆ. ಶೆಟ್ಟಿ, ಲಾರೆನ್ಸ್‌ ಡಿ’ಸೋಜಾ, ಶೇಖರ್‌ ಸಸಿಹಿತ್ಲು, ಸುಶೀಲಾ ದೇವಾಡಿಗ, ಜಯಂತಿ ದೇವಾಡಿಗ ಆಯ್ಕೆಯಾದರು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಕಲಾಜಗತ್ತು ಮುಂಬಯಿ ಇದರ ಸ್ಥಾಪಕಾಧ್ಯಕ್ಷ ತೋನ್ಸೆ ವಿಜಯಕುಮಾರ್‌ ಶೆಟ್ಟಿ ಅಭಿನಂದಿಸಿ ಶುಭಹಾರೈಸಿದರು.

    ಸಭೆಯಲ್ಲಿ ಸಂಸ್ಥೆಯ ಮುಂದಿನ ಯೋಜನೆಗಳ ಬಗ್ಗೆ ವಿಚಾರ-ವಿನಿಮಯ ನಡೆಯಿತು. ಕಳೆದ ನವೆಂಬರ್‌ನಲ್ಲಿ ನಡೆದ ವಿಜಯಕುಮಾರ್‌ ಶೆಟ್ಟಿ ಅವರ 60ನೇ ಜನ್ಮದಿನಾಚರಣೆಯ ಸಂಭ್ರಮದಲ್ಲಿ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್‌ಗಾಗಿ ಜರಗಿದ ರಂಗೋತ್ಸವ ಕಾರ್ಯಕ್ರಮದ ಯಶಸ್ಸಿನ ಹಿನ್ನೆಲೆಯಲ್ಲಿ ಮತ್ತೂಮ್ಮೆ ಅದೇ ರಂಗೋತ್ಸವ ಉಡುಪಿಯ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ರಾಜಕೀಯ ನೇತಾರ, ಸಮಾಜ ಸೇವಕ ಗುರ್ಮೆ ಸುರೇಶ್‌ ಶೆಟ್ಟಿ ಬಳ್ಳಾರಿ ನೇತೃತ್ವದಲ್ಲಿ ಅಕ್ಟೋಬರ್‌ 11ರಂದು ನಡೆಯಲಿದೆ. ನವೆಂಬರ್‌ನಲ್ಲಿ ಸಂಸ್ಥೆಯ 36ನೇ ವಾರ್ಷಿಕೋತ್ಸವ ಕುರ್ಲಾ (ಪೂ.) ಬಂಟರ ಭವನದಲ್ಲಿ ಜರಗಲಿದ್ದು, ಈ ಸಂದರ್ಭದಲ್ಲಿ ವಿಜಯ ಕುಮಾರ್‌ ಶೆಟ್ಟಿ ನಿರ್ದೇಶನದ ಎರಡು ನೂತನ ನಾಟಕಗಳು ತಂಡದ ಪ್ರಬುದ್ಧ ಕಲಾವಿದರಿಂದ ಪ್ರದರ್ಶನಗೊಳ್ಳಲಿದೆ. ಕಳೆದ ಕೆಲವು ವರ್ಷಗಳ ಹಿಂದೆ ಪರೇಲ್‌ ಕಾಮಾYರ್‌ ಮೈದಾನದಲ್ಲಿ ಕಲಾಜಗತ್ತು ಮುಂಬಯಿ ಬ್ಯಾನರ್‌ನಡಿ ಬೊಂಬಾಯಿಡ್‌ ತುಳುವೆರ್‌ ಎಂಬ ಹೊಸ ಕಲ್ಪನೆಯ ಅಭೂತಪೂರ್ವ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮದ ಯಶಸ್ಸಿನ ಕೀರ್ತಿಯ ಹಿನ್ನೆಲೆಯಲ್ಲಿ ಮತ್ತೂಮ್ಮೆ ಮುಂಬರುವ ಡಿಸೆಂಬರ್‌ನಲ್ಲಿ ನಗರದ ಡೊಂಬಿವಲಿಯ ಸಾವಿತ್ರಿಬಾಯಿ ಫುಲೆ ಸಭಾಗೃಹ ಮತ್ತು ಮೈದಾನದಲ್ಲಿ ತೋನ್ಸೆ ವಿಜಯ ಕುಮಾರ್‌ ಶೆಟ್ಟಿ ಅವರ ಹೊಸ ಪರಿಕಲ್ಪನೆಯ “ಹೊರನಾಡ ತುಳುವೆರೆ ವಿಶ್ವಸಮ್ಮೇಳನ’ ಎಂಬ ಜಾಗತಿಕ ಮಟ್ಟದ ತುಳು ಸಮ್ಮೇಳನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆರು ದಿನಗಳ ಕಾಲ ವೈವಿಧ್ಯಮಯವಾಗಿ ಜರಗಲಿದೆ. ಈ ಕಾರ್ಯಕ್ರಮದ ಮೊದಲ ಹಂತದ ಒಂದು ದಿನದ ಕಾರ್ಯಕ್ರಮ ಕಲ್ಯಾಣ್‌ ಸಮೀಪದ ಮುರ್ಬಾಡ್‌ನ‌ ಅಮ್ಮ ಚಾವಡಿ ವಠಾರದಲ್ಲಿ ಜರಗಲಿದ್ದು, ಉಳಿದ ಐದು ದಿನಗಳ ಕಾರ್ಯಕ್ರಮಗಳು ಡೊಂಬಿವಲಿಯಲ್ಲಿ ಜರಗಲಿವೆ ಎಂದು ಕಲಾಜಗತ್ತು ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದರು.

    ವೇದಿಕೆಯಲ್ಲಿ ಸುರೇಂದ್ರ ಕುಮಾರ್‌ ಹೆಗ್ಡೆ, ದಯಾಸಾಗರ್‌ ಚೌಟ, ಕೃಷ್ಣರಾಜ್‌ ಶೆಟ್ಟಿ, ಚಂದ್ರಾವತಿ ವಸಂತ್‌ ಉಪಸ್ಥಿತರಿದ್ದು, ಮಾತನಾಡಿ ಸಲಹೆ-ಸೂಚನೆಗಳನ್ನು ನೀಡಿ ಸಹಕರಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಅಭಿಮಾನಿಗಳು ಸೇರಿದಂತೆ ಸಿಎ ಸುಧೀರ್‌ ಎಲ್‌. ಶೆಟ್ಟಿ, ಕಲಾಸೌರಭದ ರೂವಾರಿ ಪದ್ಮನಾಭ ಸಸಿಹಿತ್ಲು, ಕವಿ ಲಕ್ಷ್ಮೀನಾರಾಯಣ ರೈ ಹರೇಕಳ, ಸಂಘಟಕ ಪ್ರಭಾಕರ ಬೆಳುವಾಯಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

    11/01/2023

    ಬಿಲ್ಲವ ಸೇವಾ ಸಂಘ ಮುಂಬಯಿ ನೂತನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಆಯ್ಕೆ

    26/09/2020

    ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

    23/07/2020
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.