ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ನವೀಕೃತ ಗರ್ಭಗುಡಿ ಸಮರ್ಪಣೆ ಹಾಗೂ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಕಾರ್ಯಕ್ರಮವು ಎಪ್ರಿಲ್ 05ರಿಂದ ನಡೆಯಬೇಕಿದ್ದು, ಈ ನಡುವೆ ಸರಕಾರ ಲಾಕ್ಡೌನ್ ಆದೇಶ ನೀಡಿರುವುದರಿಂದ ಗರಡಿಯ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಕಾರ್ಯಕ್ರಮದ ಮುಂದಿನ ದಿನಾಂಕವನ್ನು ತಂತ್ರಿಗಳು, ಊರ ಗ್ರಾಮಸ್ಥರು ಸೇರಿ ನಿರ್ಣಯಿಸಿ ಭಕ್ತರಿಗೆ ತಿಳಿಸಲಾಗುವುದು ಎಂದು ಗರಡಿಯ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಕಟಣೆ ತಿಳಿಸಿದೆ.