2 ತಿಂಗಳ ಪಡಿತರ ಒಟ್ಟಿಗೆ ವಿತರಿಸಿ, ಓಟಿಪಿ ಕಡ್ಡಾಯವಲ್ಲ: ಸಚಿವ ಕೋಟ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಪಡಿತರ ವಿತರಣೆ ಆರಂಭವಾಗಲಿದ್ದು, ಕೊರೋನಾ ಹಿನ್ನಲೆಯಲ್ಲಿ ಎರಡು ತಿಂಗಳ ಪಡಿತರವನ್ನು ಒಂದೇ ಬಾರಿಗೆ ವಿತರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಬಂದರು, ಮೀನುಗಾರಿಕೆ ಹಾಗೂ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Call us

Click Here

ಅವರು ಮಂಗಳವಾರ, ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿನ ಅಂತ್ಯೋದಯ, ಬಿಪಿಎಲ್ ಮತ್ತು ಆಹಾರ ಪಡೆಯಲು ನೊಂದಾಯಿಸಿರುವ ಎಪಿಲ್ ಕಾರ್ಡ್‌ದಾರರಿಗೆ ಸರಕಾರದ ಸೂಚನೆಯಂತೆ, ಎರಡು ತಿಂಗಳ ಪಡಿತರವನ್ನು ವಿತರಿಸುವಂತೆ ಸೂಚಿಸಿದ ಸಚಿವ ಕೋಟ, ಪಡಿತರ ಪಡೆಯಲು ಒಟಿಪಿ ಸಂಖ್ಯೆಯನ್ನು ಕಡ್ಡಾಯಗೊಳಿಸಿದೇ, ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿಕೊಂಡು ಪಡಿತರ ವಿತರಿಸಿ, ಪಡಿತರ ವಿತರಣೆಯಲ್ಲಿ ಜನಸಂದಣಿ ತಪ್ಪಿಸಲು, ಪ್ರತಿ ಅಂಗಡಿಯಲ್ಲಿ, ದಿನದಲ್ಲಿ ನಿಗದಿತ ಸಂಖ್ಯೆಯ ಪಡಿತರದಾರರಿಗೆ ಮಾತ್ರ ಅಂಗಡಿಗೆ ಬರುವಂತೆ ಮಾಹಿತಿ ನೀಡಿ, ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ವಿತರಿಸುವಂತೆ ಸೂಚಿಸಿದ ಅವರು, ಎಲ್ಲಾ ತಾಲೂಕುಗಳ ತಹಸೀಲ್ದಾರರು ಪಡಿತರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಉಸ್ತುವಾರಿ ವಹಿಸಿಕೊಳ್ಳುವಂತೆ ಸೂಚಿಸಿದರು.

ಶಾಲೆಗಳಲ್ಲಿ ಉಳಿದಿರುವ ಬಿಸಿಯೂಟದ ಅಕ್ಕಿಯನ್ನು ವಿದ್ಯಾರ್ಥಿಗಳ ಪೋಷಕರಿಗೆ ನೀಡುವಂತೆ ಮತ್ತು ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡಲಾಗುವ ಕಿಟ್ ಗಳನ್ನು ಅವರ ಮನೆಗೆಳಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಸಚಿವ ಕೋಟ ಸೂಚಿಸಿದರು.

ಜಿಲ್ಲೆಯಲ್ಲಿ ಕೊರೋನ ಪತ್ತೆ ಹಚ್ಚುವ ಲ್ಯಾಬ್ ತೆರೆಯಲು ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯಗಳಿದ್ದು, ಕೂಡಲೇ ಲ್ಯಾಬ್ ಗೆ ಅನುಮತಿ ನೀಡುವಂತೆ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಸಚಿವ ಕೋಟ ತಿಳಿಸಿದರು.

Click here

Click here

Click here

Click Here

Call us

Call us

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ದಿನಸಿ ವಸ್ತುಗಳ ಖರೀದಿಗೆ ಬೆಳಗ್ಗೆ 7 ರಿಂದ 11ರ ವರೆಗೆ ಸಮಯ ನಿಗಧಿಪಡಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಖರೀದಿಸುವಂತೆ ಸೂಚನೆ ನೀಡಿದ್ದು, ಯಾವುದೇ ಸಮಸ್ಯೆಗಳಿಲ್ಲ, ಜಿಲ್ಲೆಯಲ್ಲಿರುವ ನಿರಾಶ್ರಿತರಿಗೆ ಅಗತ್ಯ ಆಹಾರ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ, 3 ತಾಲೂಕುಗಳಲ್ಲಿ ಶಂಕಿತ ಕೊರೋನಾ ರೋಗಿಗಳನ್ನು ದಾಖಲು ಮಾಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಉಡುಪಿಯ ಡಾ.ಟಿ.ಎಂ.ಎ ಪೈ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ 19 ಪೀಡಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ, ಜಿಲ್ಲೆಗೆ ಇನ್ಪೋಸಿಸ್ ವತಿಯಿಂದ 80 ಲಕ್ಷ ರೂ ವೆಚ್ಚದಲ್ಲಿ ಅಗತ್ಯವಿರುವ ಸುರಕ್ಷಾ ಉಪಕರಣಗಳ ಸರಬರಾಜು ಆಗುತ್ತಿದೆ ಹಾಗೂ ಸ್ಥಳಿಯ ದಾನಿಗಳ ನೆರವಿನಿಂದ ಆಹಾರ ಕಿಟ್ ಗಳು ಮತ್ತು ಅಗತ್ಯ ವಸ್ತುಗಳ ನೆರವು ದೊರೆಯುತ್ತಿದೆ ಎಂದು ತಿಳಿಸಿದರು.

ಡಿಹೆಚ್‌ಓ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿ ಜಿಲ್ಲೆಯಲ್ಲಿ ಇದುವರೆಗೆ 2309 ಮಂದಿಯನ್ನು ಪರೀಕ್ಷಿಸಿದ್ದು, 1056 ರ ಜನರಿಗೆ ಹೋಂ ಕ್ವಾರಟೈಂನ್ ವಿಧಿಸಿದ್ದು, 1072 ಜನ 14 ದಿನದ ಮತ್ತು 127 ಜನ 28 ದಿನದ ಕ್ವಾರಟೈಂನ್ ಅವಧಿ ಪೂರೈಸಿದ್ದು, 140 ಜನ ಶಂಕಿತರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, 126 ಮಂದಿಯ ವರದಿ ಬಂದಿದ್ದು, 123 ನೆಗೆಟಿವ್ ಮತ್ತು 3 ಪಾಸಿಟಿವ ವರದಿ ಬಂದಿದೆ 14ಮಂದಿಯ ವರದಿ ಬರಲು ಬಾಕಿ ಇದೆ, ಪಾಸಿಟಿವ್ ವರದಿ ಬಂದಿರುವ 3 ರೋಗಿಗಳನ್ನು ಕೆಎಂಸಿಯಲ್ಲಿ ದಾಖಲಿಸಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಇದೆ ಎಂದರು.

ಸಭೆಯಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಉಡುಪಿ ಶಾಸಕ ರಘುಪತಿ ಭಟ್ , ಕಾಪು ಶಾಸಕ ಲಾಲಾಜಿ ಮೆಂಡನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿ.ಪಂ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್ ಹಾಗೂ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ಮತ್ತು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಎಪ್ರಿಲ್ ಹಾಗೂ ಮೇ ತಿಂಗಳ ಮಾಹೆಯ ಪಡಿತರವನ್ನು ಒಮ್ಮೆಗೆ ಪಡಿತರ ಆಂತ್ಯೋದಯ / ಬಿಪಿಎಲ್ ಪಡಿತರ ಚೀಟಿದಾರರಿಗೆ ದಿನಾಂಕ:01.04.2020ರಿಂದ ಜಿಲ್ಲೆಯಲ್ಲಿರುವ ಎಲ್ಲಾ ಒಟ್ಟು 292 ಸೊಸೈಟಿ /ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಮಾಡುವಂತೆ ತಿಳಿಸಲಾಗಿದೆ. ಸದ್ರಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಮಾಡುವಾಗ ಈ ಕೆಳಗೆ ತಿಳಿಸಿರುವ ಕ್ರಮಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

1. ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿಯ ಲೆಕ್ಕದಲ್ಲಿ ಪ್ರತಿ ದಿನ 50 ರಿಂದ 100 ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ನೀಡುವ ಬಗ್ಗೆ ಸದ್ರಿಯವರಿಗೆ ಮಂಚಿತವಾಗಿ ಬೇರೆ ಬೇರೆ ಸಮಯ ನಿಗದಿಪಡಿಸಿ ದೂರವಾಣಿಗಳ ಮೂಲಕ ಸಂದೇಶವನ್ನು ನೀಡಿ ಜನ ಸಂದಣಿಯಾಗದಂತೆ ಪಡಿತರವನ್ನು ಪಡೆಯಲು ತಿಳಿಸುವುದು ಹಾಗೂ ಜನಸಂದಣಿ ಆಗದಂತೆ ತಡೆಯುವುದು.

2. ಹೊರ ಜಿಲ್ಲೆಯ ಪಡಿತರ ಚೀಟಿದಾರರಿಗೆ (Portability ) ವ್ಯವಸ್ಥೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ವಿತರಿಸುವುದು.

3. ಪಡಿತರ ವಿತರಣೆಯ ಸಮಯದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಗುರುತುಗಳನ್ನು ಮಾಡುವುದರೊಂದಿಗೆ, ಪಡಿತರವನ್ನು ತೆಗೆದುಕೊಳ್ಳಲು ಬರುವವರಿಗೆ ಸ್ಯಾನಿಟೈಜರ್ಸ್/ಸಾಬೂನು ಮತ್ತು ನೀರಿನ ವ್ಯವಸ್ಥೆ ಮಾಡುವಂತೆ ಮತ್ತು ಈ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ಆಯಾ ತಾಲೂಕುಗಳಿಗೆ ಸಂಬಂಧಪಟ್ಟ ತಹಶೀಲ್ದಾರರು ಗಮನಹರಿಸುವುದು. ಈ ಬಗ್ಗೆ ಸುರಕ್ಷತೆಯ ದೃಷ್ಟಿಯಿಂದ ಇವುಗಳನ್ನು ಪರಿಶೀಲಿಸಲು ಓರ್ವ ಸಂಬಂಧಪಟ್ಟ ಅಧಿಕಾರಿಯನ್ನು ನೇಮಿಸುವುದು.

4. ಪಡಿತರ ವಿತರಣೆಯ ಸಮಯದಲ್ಲಿ ಔಖಿP ಬರದೇ ಇದ್ದಲ್ಲಿ ಅದಕ್ಕೆ ಕಾಯದೆ ರಿಜಿಸ್ಟರ್ ನಲ್ಲಿ ಇಟಿಣಡಿಥಿ ಮಾಡಿ ವಿತರಣೆ ಮಾಡುವುದು ಯಾವುದೇ ಕಾರಣಕ್ಕೂ ಪಡಿತರ ನೀಡುವಾಗ ವಿಳಂಬವಾಗದಂತೆ ನೋಡಿಕೊಳ್ಳುವುದು.

5. ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳನ್ನು ಹಾಗೂ ಸುರಕ್ಷಿತ ಕ್ರಮಗಳ ನಿಯಮಗಳನ್ನು ಪಾಲಿಸದಿದ್ದಲ್ಲಿ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳಲಾಗುವುದು .

6. ಯಾವುದೇ ಕಾರಣಕ್ಕೂ ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲು ಸಮನ್ವಯಸಾದಿಸಲು ಆಯಾ ತಾಲೂಕುಗಳಿಗೆ ಸಂಬಂಧಪಟ್ಟ ತಹಶೀಲ್ದಾರರಿಗೆ ಸೂಚಿಸಿದೆ.

ಪಡಿತರ ವಿತರಣೆಯ ಸಮಯದಲ್ಲಿ ಈ ಮೇಲೆ ತಿಳಿಸಿರುವ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

 

Leave a Reply