Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಮಾಗ್ರಿ, ಆಹಾರ ಹಂಚುವಿಕೆಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಜಿ.ಜಗದೀಶ್
    ಉಡುಪಿ ಜಿಲ್ಲೆ

    ಸಾಮಾಗ್ರಿ, ಆಹಾರ ಹಂಚುವಿಕೆಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಜಿ.ಜಗದೀಶ್

    Updated:05/04/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯಾದ್ಯಂತ ಲಾಕ್‌ಡೌನ್ ಘೋಷಿಸಿದ್ದು, ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್ 144(3) ರಂತೆ ನಾಗರೀಕರ ಸಂಚಾರವನ್ನು ನಿಬಂಧಿಸಿ ಆದೇಶವನ್ನು ಹೊರಡಿಸಲಾಗಿದೆ.

    Click Here

    Call us

    Click Here

    ಜಿಲ್ಲಾಡಳಿತಕ್ಕೆ ದೈನಂದಿನ ದಿನಸಿ/ಅವಶ್ಯಕ ಸಾಮಾಗ್ರಿಗಳನ್ನು ಸ್ವಇಚ್ಛೆಯಿಂದ ನೀಡಬಯಸುವ ದಾನಿಗಳು / ಸಂಘ ಸಂಸ್ಥೆಗಳು/ ಸಾರ್ವಜನಿಕರು ಆಯಾ ತಾಲ್ಲೂಕಿನ ತಹಶೀಲ್ದಾರರಿಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಘಂಟೆ ಯವರೆಗೆ ನೀಡಬಹುದು ಎಂದು ಈಗಾಗಲೇ ತಿಳಿಸಲಾಗಿದೆ.

    ಆದರೂ ಕೆಲವೊಂದು ವ್ಯಕ್ತಿಗಳು / ಸಂಸ್ಥೆಗಳು ಮನೆ ಮನೆಗೆ ನೇರ ತೆರಳಿ ದೈನಂದಿನ ದಿನಸಿ/ ಅವಶ್ಯಕ ಸಾಮಾಗ್ರಿಗಳನ್ನು ಯಾವುದೇ ಅನುಮತಿ ಇಲ್ಲದೆ ಹಾಗೂ ಯಾವುದೇ ಸಾಮಾಜಿಕ ಅಂತರವನ್ನು ಕಾಪಾಡದೇ ಗುಂಪು ಗುಂಪಾಗಿ ಐದಕ್ಕಿಂತ ಹೆಚ್ಚು ಜನರು ಒಟ್ಟಾಗಿ ತೆರಳಿ ಸಾಮಾಗ್ರಿಗಳನ್ನು ಹಂಚುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಪದೇ ಪದೇ ದೂರುಗಳು ಬರುತ್ತಿವೆ.

    ಇದರಿಂದಾಗಿ ಲಾಕ್‌ಡೌನ್ / ನಿಷೇಧಾಜ್ಞೆಯ ಉಲ್ಲಂಘನೆಯಾಗುತ್ತದೆ ಅಲ್ಲದೇ ಲಾಕ್‌ಡೌನ್ ನ ಮೂಲ ಉದ್ದೇಶವೇ ಬುಡಮೇಲಾಗುತ್ತದೆ ಹಾಗೂ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತಿದೆ. ಇಂತಹ ವಿಪತ್ತಿನ ಸಮಯದಲ್ಲಿ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಸಂಘ ಸಂಸ್ಥೆಗಳು ಜಿಲ್ಲಾಡಳಿತದ ಸಲಹೆ ಸೂಚನೆಗಳನ್ನು ಪಾಲಿಸಿ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

    ಆದುದರಿಂದ , ಸ್ವಇಚ್ಛೆಯಿಂದ ದಿನಸಿ ಸಾಮಾಗ್ರಿ/ ಅವಶ್ಯಕ ಸಾಮಾಗ್ರಿಗಳನ್ನು ನೀಡಬಯಸುವ ದಾನಿಗಳು / ಸಂಘ ಸಂಸ್ಥೆಗಳು/ ಸಾರ್ವಜನಿಕರು ಕಡ್ಡಾಯವಾಗಿ ಸಾಮಾಗ್ರಿಗಳನ್ನು ನೇರವಾಗಿ ವಿತರಣೆ ಮಾಡದೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರಿಗೆ ಹಸ್ತಾಂತರಿಸುವಂತೆ ಕೋರಲಾಗಿದೆ. ಯಾವುದೇ ಪೂರ್ವಾನುಮತಿ ಇಲ್ಲದೆ ಮನೆ ಮನೆಗೆ ತೆರಳಿ ದಿನಸಿ ಸಾಮಾಗ್ರಿ/ ಅವಶ್ಯಕ ಸಾಮಾಗ್ರಿಗಳನ್ನು ಹಂಚುವುದನ್ನು ನಿ?ಧಿಸಿದ್ದು, ಉಲ್ಲಂಘನೆ ಮಾಡಿದಲ್ಲಿ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Click Here

    Call us

    Call us

    ಆಹಾರ ಹಂಚುವಿಕೆಗೆ ಅನುಮತಿ ಅಗತ್ಯ:
    ಕೆಲವೊಂದು ವ್ಯಕ್ತಿಗಳು / ಸಂಸ್ಥೆಗಳು ನಗರಸಭೆ/ ಪುರಸಭೆ /ಪಟ್ಪಣ ಪಂಚಾಯತ್/ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ್ತು ಅದರಿಂದ ಹೊರಗಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಯಾವುದೇ ಅನುಮತಿ ಪಡೆಯದೇ ತಯಾರಿಸಿದ ಆಹಾರ ಪೊಟ್ಟಣಗಳನ್ನು ಬೀದಿಯಲ್ಲಿ/ ಮನೆ ಮನೆಗೆ ವಿತರಿಸುತ್ತಿರುವುದು ಗಮನಕ್ಕೆ ಬಂದಿರುತ್ತದೆ.

    ವಿತರಣೆ ಸಂಧರ್ಭದಲ್ಲಿ 5 ಕ್ಕಿಂತ ಜಾಸ್ತಿ ಜನರು ಗುಂಪು ಗುಂಪಾಗಿ /ಒಟ್ಟಾಗಿ ಸೇರಿ ಯಾವುದೇ ಸಾಮಾಜಿಕ ಅಂತರವನ್ನು ಕಾಪಾಡದೇ ವಿತರಿಸುತ್ತಿದ್ದಾರೆ. ಅಲ್ಲದೆ ಒಂದು ಊರಿನಿಂದ ಇನ್ನೊಂದು ಊರಿಗೆ ವಾಹನದಲ್ಲಿ ಗುಂಪಾಗಿ ತೆರಳಿ ಯಾವುದೇ ಸಾಮಾಜಿಕ ಅಂತರ ಹಾಗೂ ಲಾಕ್ ಡೌನ್‌ನ ನಿಯಮಗಳನ್ನು ಪಾಲನೆ ಮಾಡದೇ ಆಹಾರ ಪೊಟ್ಟಣಗಳನ್ನು ಹಂಚುತ್ತಿರುವ ಬಗ್ಗೆ ಅನೇಕ ದೂರುಗಳು ಸ್ವೀಕೃತವಾಗುತ್ತಿವೆ. ಇದರಿಂದಾಗಿ ಲಾಕ್‌ಡೌನ್ /ನಿ?ಧಾಜ್ಞೆಯ ಉಲ್ಲಂಘನೆಯಾಗುತ್ತದೆ ಅಲ್ಲದೇ ಲಾಕ್‌ಡೌನ್‌ನ ಮೂಲ ಉದ್ದೇಶವೇ ಬುಡಮೇಲಾಗುತ್ತದೆ ಹಾಗೂ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತಿದೆ. ಇಂತಹ ವಿಪತ್ತಿನ ಸಮಯದಲ್ಲಿ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಸಂಘ ಸಂಸ್ಥೆಗಳು ನಿಯಮಗಳನ್ನು ಪಾಲಿಸಿ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

    ಬೇಯಿಸಿ ತಯಾರಿಸಿದ ಆಹಾರ ಪೊಟ್ಟಣಗಳನ್ನು ವಿತರಿಸಲು ಇಚ್ಚಿಸುವ ವ್ಯಕ್ತಿಗಳು/ಸಂಘ ಸಂಸ್ಥೆಗಳು ಸಂಬಂಧಪಟ್ಟ ತಹಶೀಲ್ದಾರರಿಂದ ಕಡ್ಡಾಯವಾಗಿ ಅನುಮತಿ ಪಡೆದಿರತಕ್ಕದ್ದು, ಹೀಗೆ ಅನುಮತಿ ಪಡೆಯುವ ಪೂರ್ವದಲ್ಲಿ ಅವರು ತಯಾರಿಸುವ ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಶುಚಿತ್ವದ ಬಗ್ಗೆ ಕಡ್ಡಾಯವಾಗಿ ತಾಲೂಕು ಆರೋಗ್ಯ ಇಲಾಖೆಯಿಂದ ನಿಯೋಜಿತರಾದ ಅಧಿಕಾರಿ/ಸಿಬ್ಬಂದಿಯವರಿಂದ ಪರೀಕ್ಷೆಗೆ ಒಳಪಡಿಸತಕ್ದದ್ದು.

    ತಾಲೂಕು ಆರೋಗ್ಯಾಧಿಕಾರಿಗಳಿಂದ ಈ ಉದ್ದೇಶಕ್ಕೆ ನಿಯೋಜಿತರಾದವರು ಈ ಕೆಳಗಿನ ಅಂಶಗಳ ಪರಿಶೀಲನೆ ನಡೆಸತಕ್ಕದ್ದು.
    1) ಆಹಾರ ತಯಾರಿಸುವ ಸ್ಥಳದಲ್ಲಿನ ಶುಚಿತ್ವ/ಸ್ವಚ್ಚತೆ.
    2) ಆಹಾರ ತಯಾರಿಸುವಲ್ಲಿ ಇರುವ ಸ್ಥಳವಕಾಶ ಹಾಗೂ ಸಾಮಾಜಿಕ ಅಂತರ ಕಾಪಾಡುವಿಕೆ
    3) ಆಹಾರ ತಯಾರಿಸುವ ಸ್ಥಳದಲ್ಲಿನ ಊಥಿgieಟಿe ಕಂಡೀ?ನ್.
    4) ಆಹಾರ ತಯಾರಿಕಾ ಸಿಬ್ಬಂದಿ/ ಜನರ ವೈಯಕ್ತಿಕ ಆರೋಗ್ಯ ಸ್ಥಿತಿ
    5) ಆಹಾರ ತಯಾರಿಸುವ ಸ್ಥಳದ ಪರಿಸರದಲ್ಲಿ ಸ್ವಚ್ಚತೆ/ಶುಚಿತ್ವ
    6) ಆಹಾರ ಸಮಾಗ್ರಿಗಳ ಪ್ಯಾಕೇಜಿಂಗ್ ವಿಧಾನ ಹಾಗೂ ಸಾಗಾಟದ ವ್ಯವಸ್ಥೆ ಆರೋಗ್ಯಕರ / ಸಮರ್ಪಕವಾಗಿದೆಯೇ?
    7) ಆಹಾರ ತಯಾರಿಕೆಗೆ ಗುಣಮಟ್ಟದ ಆಹಾರ ಧಾನ್ಯ / ವಸ್ತುಗಳನ್ನು ಬಳಸುತ್ತಿದ್ದಾರೆ.

    ಆಹಾರ ವಿತರಿಸುವವರು ತಮ್ಮ ನಗರಸಭೆ/ ಪುರಸಭೆ /ಪಟ್ಪಣ ಪಂಚಾಯತ್/ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾತ್ರ ವಿತರಿಸತಕ್ಕದ್ದು. ತಮ್ಮ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಿಂದ ಹೊರಗೆ ಬೇಯಿಸಿದ ಆಹಾರವನ್ನು ವಿತರಿಸುವಂತಿಲ್ಲ. ಮೇಲ್ಕಾಣಿಸಿದ ಯಾವುದೇ ?ರತ್ತುಗಳನ್ನು ಉಲ್ಲಂಘನೆ ಮಾಡಿ ಬೇಯಿಸಿದ ಆಹಾರ ಪದಾರ್ಥಗಳನ್ನು ವಿತರಿಸಿದಲ್ಲಿ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

    ಈ ನಿರ್ದೇಶನಗಳನ್ನು ಉಲ್ಲಂಘಿಸಿದ ಯಾವುದೇ ವ್ಯಕ್ತಿ ಯಾ ಸಂಘ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಪ್ರಕರಣಗಳನ್ನು ದಾಖಲಿಸಲು ದೂರನ್ನು ನೀಡುವ ಅಧಿಕಾರವನ್ನು ಆಯಾ ತಹಶೀಲ್ದಾರರಿಗೆ / ನಗರಸಭಾ ಆಯುಕ್ತರು,/ ಮುಖ್ಯಾಧಿಕಾರಿ ಪುರಸಭೆ /ಪಟ್ಪಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟಂತೆ ಆಯಾ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರಿಗೆ ಪ್ರತ್ಯಾಯೋಜಿಸಿದೆ. ಸಂದರ್ಭಾನುಸಾರ ಈ ಅಧಿಕಾರವನ್ನು ಯಾವ ಅಧಿಕಾರಿಯು ಉಲ್ಲಂಘನೆಯನ್ನು ಪತ್ತೆ ಹಚ್ಚುತ್ತಾರೋ ಅವರು ಬಳಸತಕ್ಕದ್ದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    five + 16 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.