Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚೆಕ್‌ಪೋಸ್ಟ್ ತಪ್ಪಿಸಿ ಜಿಲ್ಲೆಯೊಳಗೆ ಬಂದವರ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಚೆಕ್‌ಪೋಸ್ಟ್ ತಪ್ಪಿಸಿ ಜಿಲ್ಲೆಯೊಳಗೆ ಬಂದವರ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಜಿ. ಜಗದೀಶ್

    Updated:14/04/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯ ಪ್ರಜ್ಞಾವಂತ ನಾಗರೀಕರ ಸಹಕಾರದೊಂದಿಗೆ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವುದರಲ್ಲಿ ಆದಷ್ಟು ಮಟ್ಟಿಗೆ ಪ್ರಗತಿಯನ್ನು ಕಂಡಿದ್ದೇವೆ. ಆದರೆ ಕೆಲವು ಜನ ಅನಗತ್ಯವಾಗಿ ಹೊರಗಡೆ ತಿರುಗಾಡುವುದು, ಲಾಕ್ ಡೌನ್ ಮೂಲ ಉದ್ದೇಶವನ್ನು ಅರಿತುಕೊಳ್ಳದೇ ಅದನ್ನು ಧಿಕ್ಕರಿಸುವುದು ಕಂಡು ಬಂದಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಂಡು ಈಗಾಗಲೇ 413 ಕ್ಕೂ ಹೆಚ್ಚು ವಾಹನಗಳನ್ನು ಮುಟ್ಟುಗೋಳು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ.

    Click Here

    Call us

    Click Here

    ಗಡಿಗಳು ಬಂದ್:
    ಉಡುಪಿ ಜಿಲ್ಲೆಯ ಗಡಿಗಳನ್ನು ಈಗಾಗಲೇ ಬಂದ್ ಮಾಡಿ, ಬೇರೆ ಜಿಲ್ಲೆಗಳನ್ನು ಸಂಪರ್ಕಿಸುವ ಚೆಕ್ ಪೋಸ್ಟ್ ಗಳಲ್ಲಿ ದಿನದ ೨೪ ಗಂಟೆ ಬಂದೋಬಸ್ತ್ ಮಾಡಲಾಗಿದೆ. ತೀರ ತುರ್ತು ವೈದ್ಯಕೀಯ ಅಗತ್ಯದ ವಾಹನ ಹಾಗೂ ಅಗತ್ಯ ವಸ್ತುಗಳ ಸಾಗಾಟ ವಾಹನಗಳನ್ನು ಮಾತ್ರ ಬಿಡಲಾಗುತ್ತಿದೆ. ಆದರೆ ಮುಂಬೈ, ಬೆಂಗಳೂರು, ಭಟ್ಕಳ, ಹೈದ್ರಾಬಾದ್, ಮೈಸೂರು ಮುಂತಾದ ಕಡೆಗಳಿಂದ ಈ ಚೆಕ್ ಪೋಸ್ಟ್ ಗಳನ್ನು ತಪ್ಪಿಸಿ, ಜನರು ಒಳ ಬರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಅಂತಹವರನ್ನು ಗುರುತಿಸಿ ಕ್ವಾರಂಟೈನ್ ನಲ್ಲಿ ಇಡಬೇಕಾದ ಅವಶ್ಯಕತೆ ಇದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಗಡಿ ತಪ್ಪಿಸಿ ಬಂದವರ ಮಾಹಿತಿ ನೀಡಿ:
    ಜಿಲ್ಲೆಯ ಸಾರ್ವಜನಿಕರು ಈ ತರಹ ಗಡಿ ತಪ್ಪಿಸಿ ಎಪ್ರಿಲ್ 1 ರ ನಂತರ ಜಿಲ್ಲೆಯೊಳಗೆ ಬಂದಿರುವರ ವಿವರವಾದ (ವಿಳಾಸ, ಮೊಬೈಲ್ ಸಂಖ್ಯೆ, ಬಂದ ದಿನಾಂಕ, ಎಲ್ಲಿಂದ ಬಂದಿದ್ದಾರೆ) ಮಾಹಿತಿಯನ್ನು , ಚಂದ್ರಶೇಖರ ನಾಯ್ಕ್, ಉಪ ನಿರ್ದೇಶಕರು ಕೃಷಿ ಇಲಾಖೆ,( 82779 32501), ಕೃಷ್ಣ ಹೆಬ್ಸೂರ್, ಕಾರ್ಯ ನಿರ್ವಾಹಕ ಇಂಜಿನಿಯರ್ , ಕೆ.ಆರ್.ಐ.ಡಿ.ಎಲ್ (94495 34792), ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವಜನ ಮತ್ತು ಕ್ರೀಡಾ ಇಲಾಖೆ(98454 32303) ಈ ಅಧಿಕಾರಿಗಳಿಗೆ ನೀಡಲು ಅಥವಾ ವಾಟ್ಸಾಪ್ ಮಾಡಲು ಕೋರಿದೆ.

    ಗಡಿ ತಪ್ಪಿಸಿ ಬಂದವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಕ್ವಾರಂಟೈನ್ ನಲ್ಲಿ ಇಡಲು ಅUತ ಕ್ರಮ ಕೈಗೊಳ್ಳಲಾಗುವುದು, ಆದ್ದರಿಂದ ಸಾರ್ವಜನಿಕರು ಗಡಿ ತಪ್ಪಿಸಿ ಬಂದವರ ಮಾಹಿತಿ ನೀಡಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

    Click here

    Click here

    Click here

    Call us

    Call us

    ಗುಣಮುಖರಾಗಿದ್ದ 2ನೇ ಕೊರೋನಾ ಸೋಂಕಿತ ಬಿಡುಗಡೆ:
    ಉಡುಪಿ ಜಿಲ್ಲೆಯಲ್ಲಿ ಒಟ್ಟು 3 ಕೊರೋನಾ ಸೋಂಕಿತ ಪ್ರಕರಣ ದಾಖಲಾಗಿದ್ದು, ಮೂರು ಪ್ರಕರಣದ ವ್ಯಕ್ತಿಗಳು ಗುಣಮುಖರಾಗಿದ್ದಾರೆ. ಮೊದಲನೇ ಸೋಂಕಿತ ವ್ಯಕ್ತಿ ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಆಗಿದ್ದರೇ, 2ನೇ ವ್ಯಕ್ತಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d