Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತುರ್ತು ಅಗತ್ಯಗಳಿಗಷ್ಟೇ ಜಿಲ್ಲೆಯ ಗಡಿ ಪ್ರವೇಶಿಸಲು ಅವಕಾಶ: ಸಚಿವ ಕೋಟ ಶ್ರೀನಿವಾಸ ಪೂಜಾರಿ
    ಊರ್ಮನೆ ಸಮಾಚಾರ

    ತುರ್ತು ಅಗತ್ಯಗಳಿಗಷ್ಟೇ ಜಿಲ್ಲೆಯ ಗಡಿ ಪ್ರವೇಶಿಸಲು ಅವಕಾಶ: ಸಚಿವ ಕೋಟ ಶ್ರೀನಿವಾಸ ಪೂಜಾರಿ

    Updated:18/04/20201 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟಲು ಕೈಗೊಂಡಿರುವ ಕ್ರಮಗಳು ಹಾಗೂ ಅನುಸರಿಸಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಶನಿವಾರ ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮುಜರಾಯಿ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

    Click Here

    Call us

    Click Here

     

    ಈ ಸಂದರ್ಭ ಅವರು ಅಧಿಕಾರಿಗಳಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡರು. ಮಳೆಗಾಲ ಆರಂಭವಾಗುವ ಹಿನ್ನೆಲೆಯಲ್ಲಿ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ವಿನಾಯಿತಿ. ಈಗಾಗಲೇ ಬೆಳೆದಿರುವ ಬೆಳೆಗಳ ಸಾಗಾಟಕ್ಕೂ ಯಾವುದೇ ಅಡ್ಡಿಪಡಿಸದಿರುವುದು, ತಾಲೂಕಿನಲ್ಲಿ ರಾಜ್ಯ ಸರಕಾರದ ಆದೇಶದಂತೆ ಅಗತ್ಯವಿರುವ ಎಪಿಎಲ್ ಕುಟುಂಬಗಳಿಗೂ ಅಕ್ಕಿ ನೀಡುವುದು. ವಲಸೆ ಕಾರ್ಮಿಕರಿಗೆ ಊಟ ವಸತಿ, ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ ಸರಕಾರದಿಂದ ದೊರೆಯಬೇಕಾದ ಸವಲತ್ತುಗಳು ಶೀಘ್ರ ದೊರೆಯುವಂತೆ ಮಾಡುವುದು, ಭದ್ರತೆಗೆ ಒತ್ತು ನೀಡುವುದು ಹಾಗೂ ವಿನಾಯಿತಿ ಇರುವಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುವುದು ಸೇರಿದಂತೆ ಹಲವು ವಿಷಯಗಳು ಸಭೆಯಲ್ಲಿ ಚರ್ಚೆಯಾದವು.

    ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಯಾವುದೇ ಗಡಿಯಲ್ಲಿ ಆರೋಗ್ಯ ಸಮಸ್ಯೆ, ಕುಟುಂಬಿಕರ ಮರಣ, ತುಂಬು ಗರ್ಭಿಣಿಯರು ಬಂದರೆ ಅಂಥ ಸಂದರ್ಭವನ್ನು ಹೊರತುಪಡಿಸಿ ಮತ್ಯಾರನ್ನೂ ಒಳಕ್ಕೆ ಬಿಡಲಾಗುತ್ತಿಲ್ಲ. ಚಿಕಿತ್ಸೆಗೆ ತೆರಳುವವರಿಗೆ ಅಡ್ಡಿಪಡಿಸುವುದಿಲ್ಲ. ಒಳದಾರಿಯಲ್ಲಿ ಬೇರೆ ಜಿಲ್ಲೆಗಳಿಂದ ಪ್ರವೇಶ ಮಾಡುವುದು ಅಪರಾಧವಾಗಿದ್ದು, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಹಾಗೆ ಪ್ರವೇಶ ಮಾಡಿದ್ದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ. ಆಶಾ ಕಾರ್ಯಕರ್ತರು, ವೈದ್ಯರು, ಪೊಲೀಸರು, ಆರೋಗ್ಯ ಹಾಗೂ ಕಾನೂನು ಸುವಸ್ಥೆಗೆ ಕಾಯ್ದುಕೊಳ್ಳುವಲ್ಲಿ ಅಡ್ಡಿಪಡಿಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನದ ಯಕ್ಷಗಾನ ಮೇಳಗಳ ಕಲಾವಿದರ ಸಂಬಳ ಕಡಿತ ಮಾಡದಂತೆ ಆದೇಶ ಮಾಡಲಾಗಿದೆ. ಸಾಲಿಗ್ರಾಮ ಹಾಗೂ ಪೆರ್ಡೂರು ಮೇಳಕ್ಕೂ ದೇವಸ್ಥಾನಕ್ಕೂ ನೇರ ಸಂಬಂಧವಿಲ್ಲದ ಕಾರಣ ಪರ್ಯಾಯ ವ್ಯವಸ್ಥೆಯ ಬಗ್ಗೆ ಯೋಚಿಸಲಾಗುತ್ತದೆ. ಡೇರೆ ಮೇಳದ ಕಲಾವಿದರು ಮನವಿ ಸಲ್ಲಿಸಿದ್ದು, ಪರಿಶೀಲನೆ ಮಾಡಲಾಗುತ್ತದೆ ಎಂದ ಅವರು ಮೀನುಗಾರರ ಉಳಿತಾಯ ಪರಿಹಾರ ನಿಧಿ ಕಳೆದ ಮೂರು ವರ್ಷದಿಂದ ಬಂದಿರಲಿಲ್ಲ. ಒಂದು ತಿಂಗಳ ಹಿಂದೆ ಕೇಂದ್ರ ಸರ್ಕಾದ ಜೊತೆ ಚರ್ಚೆ ಮಾಡಿ, 5.5 ಕೋಟಿ ಪರಿಹಾರ ಹಣ ಬಿಡುಗಡೆ ಮಾಡಿದೆ. ಮೀನುಗಾರರ ಉಳಿತಾಯದ ಹಣದೊಂದಿಗೆ, ಕೇಂದ್ರ, ರಾಜ್ಯ ಸರ್ಕಾರವೂ ಅಷ್ಟೇ ಹಣ ಸೇರಿಸಿ ಪಾವತಿ ಮಾಡಲಿದೆ ಎಂದರು. ಲಾಕ್‌ಡೌನ್ ಹೊರತಾಗಿ ಈಗಾಗಲೇ ಮದುವೆ ದಿನಾಂಕ ನಿಗದಿಯಾಗಿದ್ದರೆ, ೮ ಜನರಷ್ಟೇ ಇದ್ದು ಮದುವೆ ಮಾಡಬಹುದು ಎಂದರು.

    ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ತಾಪಂ ಕುಂದಾಪುರ ಇಓ ಕೇಶವ ಶೆಟ್ಟಿಗಾರ್, ಬೈಂದೂರು ಇಓ ಭಾರತಿ ಇದ್ದರು. ಸಭೆಯಲ್ಲಿ ಇವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. /ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Call us

    Call us

    ಇದನ್ನೂ ಓದಿ:
    ► ಉಡುಪಿ ಸದ್ಯಕ್ಕೆ ಕೊರೋನಾ ಮುಕ್ತ ಜಿಲ್ಲೆ. ಮೂವರು ಆಸ್ಪತ್ರೆಯಿಂದ ಡಿಸ್ಚಾರ್ಜ್ – https://kundapraa.com/?p=36996 .

     

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    1 Comment

    1. Jejo on 18/04/2020 9:54 pm

      Dear sir please allow emergency Telecom service

      Reply
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.