Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊರ ಜಿಲ್ಲೆ ಸಂಚಾರಕ್ಕೆ ಅನುಮತಿಯಿಲ್ಲ. ಹೊರ ರಾಜ್ಯ ಸಂಚಾರಕ್ಕೆ ಸೇವಾಸಿಂಧು ನೊಂದಣಿ ಅಗತ್ಯ: ಉಡುಪಿ ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಹೊರ ಜಿಲ್ಲೆ ಸಂಚಾರಕ್ಕೆ ಅನುಮತಿಯಿಲ್ಲ. ಹೊರ ರಾಜ್ಯ ಸಂಚಾರಕ್ಕೆ ಸೇವಾಸಿಂಧು ನೊಂದಣಿ ಅಗತ್ಯ: ಉಡುಪಿ ಜಿಲ್ಲಾಧಿಕಾರಿ

    Updated:02/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೂಲಿ ಕಾರ್ಮಿಕರು, ಪ್ರವಾಸಿಗರು ಹಾಗೂ ಆರೋಗ್ಯ ಸಂಬಂಧಿ ಕಾರಣವನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಅಂತರ್ಜಿಲ್ಲಾ ಹಾಗೂ ಅಂತರಾಜ್ಯ ಪ್ರಯಾಣಕ್ಕೆ ಎ.17ರ ತನಕವೂ ಅವಕಾಶ ನೀಡಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.

    Click Here

    Call us

    Click Here

    ಬೇರೆ ಜಿಲ್ಲೆ ಹಾಗೂ ಬೇರೆ ರಾಜ್ಯಗಳಿಗೆ ತೆರಳಬೇಕಿರುವ ಕೂಲಿ ಕಾರ್ಮಿಕರು, ಆರೋಗ್ಯ ಮತ್ತು ಇನ್ನಿತರ ತುರ್ತು ಕಾರಣಕ್ಕಾಗಿ ತೆರಳಬೇಕಾದವರಿಗೆ ಮಾತ್ರ ಸದ್ಯ ಅನುಮತಿ ನೀಡಲಾಗುತ್ತದೆ. ಬೇರೆ ರಾಜ್ಯಕ್ಕೆ ತೆರಳಬೇಕಾದವರು ಹಾಗೂ ಬೇರೆ ರಾಜ್ಯದಿಂದ ಬರಬೇಕಾದವರು ಸೇವಾ ಸಿಂಧು ವೆಬ್‌ಸೈಟ್ ಮೂಲಕ ನೊಂದಣಿ ಮಾಡಿಕೊಳ್ಳುವುದು ಕಡ್ಡಾಯ. ಆ ಬಳಿಕ  ಅರ್ಜಿ ಪರಿಶೀಲಿಸಿ ಅವರಿಗೆ ಅನುಮತಿ ನೀಡಲಾಗುತ್ತದೆ. ಬದಲಾಗಿ ಜಿಲ್ಲಾಧಿಕಾರಿಗಳ ಕಛೇರಿ, ತಹಶೀಲ್ದಾರರ ಕಛೇರಿ ಎದುರು ಪಾಸ್‌ಗಾಗಿ ಕಾಯುವಂತಿಲ್ಲ ಎಂದವರು ತಿಳಿಸಿದ್ದಾರೆ.

    ಸೇವಾ ಸಿಂಧುವಿನಲ್ಲಿ ನೊಂದಣಿ ಹೇಗೆ? (ಹೊರ ರಾಜ್ಯ ಸಂಚಾರ ಮಾಡುವವರಿಗೆ)
    ಹೊರರಾಜ್ಯಗಳಿಂದ ಬರುವ ಮತ್ತು ಹೊರರಾಜ್ಯಗಳಿಗೆ ಹೋಗುವ ವಲಸೆ ಕಾರ್ಮಿಕರು, ಯಾತ್ರಿಕರು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರೆ ವ್ಯಕ್ತಿಗಳು ಲಾಕ್‌ಡೌನ್ ಕಾರಣದಿಂದಾಗಿ ಅವರ ಸ್ವಂತ ರಾಜ್ಯಗಳಿಗೆ ತೆರಳಲು ಸಾಧ್ಯವಾಗದೇ ಇಲ್ಲಿಯೇ ಉಳಿದಿದ್ದು, ಅಂತಹವರನ್ನು ಅವರ ರಾಜ್ಯಗಳಿಗೆ ಕಳುಹಿಸಿಕೊಡುವ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ತಿಳಿಸಲಾಗಿದೆ.

    ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸ್ತವ್ಯ ಇರುವ ಹೊರರಾಜ್ಯಗಳ ವಲಸೆ ಕಾರ್ಮಿಕರು, ಯಾತ್ರಿಕರು ,ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರೆ ವ್ಯಕ್ತಿಗಳನ್ನು ಅವರವರ ರಾಜ್ಯಗಳಿಗೆ ಹೋಗುವ ಹಿನ್ನೆಲೆಯಲ್ಲಿ ಇಂತಹವರು http://sevasindhu.karnataka.gov.in/ ರಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

    Click here

    Click here

    Click here

    Call us

    Call us

    ಆದುದರಿಂದ ಉಡುಪಿ ಜಿಲ್ಲೆಗೆ ಹೊರರಾಜ್ಯಗಳಿಂದ ಬರುವ ಮತ್ತು ಹೊರರಾಜ್ಯಗಳಿಗೆ ಹೋಗಲು ಇಚ್ಛಿಸುವವರು ಸದ್ರಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ವೆಬ್‌ಸೈಟ್‌ನಲ್ಲಿ ನಿಗಧಿತ ನಮೂನೆಯಲ್ಲಿ ಸಂಪೂರ್ಣ ಮಾಹಿತಿಯನ್ನು ದಾಖಲಿಸುವುದು ಗುರುತಿನ ಬಗ್ಗೆ Voter ID, Aadhar Card, Diving License, PAN Card, Passport ಇವುಗಳಲ್ಲಿ ಯಾವುದಾದರು ಒಂದು ದಾಖಲೆ ಹಾಗೂ ವ್ಯಕ್ತಿಯ ಭಾವಚಿತ್ರವನ್ನು (PDF Format) Upload ಮಾಡುವುದು. ಈ ಬಗ್ಗೆ ಯಾವುದಾದರೂ ಮಾಹಿತಿ / ಸಹಾಯ ಬೇಕಾಗಿದ್ದಲ್ಲಿ ಈ ಕೆಳಗಿನವರನ್ನು ಅಥವಾ Toll Free No: 1077 ನ್ನು ಅಥವಾ ನಾಗರಾಜ್ ರಾವ್, ಜಿಲ್ಲಾ ಅಂಕಿ ಸಂಖ್ಯಾ ಸಂಗ್ರಹಣಾಧಿಕಾರಿ ಮೊ – 9880278233 ಮತ್ತು ಪ್ರಮೋದ್ ಎಸ್ ಆರ್ ಇ District Project Manager ಮೊ – 9482641973 ಇವರನ್ನು ಸಂಪರ್ಕಿಸಬಹುದಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.