ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೊರೋನಾ ವೈರಸ್ ಭೀತಿಯಿಂದ ದೇಶವೇ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಕುಂದಾಪುರದ ವೇದ ಗಣಿತ ಅಧ್ಯಯನ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ಪರಿಹಾರ ನಿಧಿ(ಪಿ.ಎಂ. ಕೇರ್ಸ್)ಗೆ 5 ಲಕ್ಷ ರೂ. ದೇಣಿಗೆಯನ್ನು ವೇದ ಗಣಿತ ಅಧ್ಯಯನ ವೇದಿಕೆ ನಿರ್ದೇಶಕ ಡಾ. ಎಸ್. ಎನ್. ಪಡಿಯಾರ್ ಅವರು ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಚೇಂಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರರಾದ ದಿನಕರ ಶೆಣೈ, ಪತ್ರಕರ್ತ ಸಂತೋಷ ಕೋಣಿ ಉಪಸ್ಥಿತರಿದ್ದರು.