Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊರ ದೇಶ ಮತ್ತು ರಾಜ್ಯದಿಂದ ಬರುವವರ ಕ್ವಾರಂಟೈನ್‌ಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಹೊರ ದೇಶ ಮತ್ತು ರಾಜ್ಯದಿಂದ ಬರುವವರ ಕ್ವಾರಂಟೈನ್‌ಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ ಜಿ. ಜಗದೀಶ್

    Updated:08/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಗೆ ವಿದೇಶಗಳಿಂದ ಮತ್ತು ಹೊರಾಜ್ಯದಿಂದ ಬರುವವರ ಕ್ವಾರಂಟೈನ್ ಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕ್ವಾರಂಟೈನ್ ಗಾಗಿ ಜಿಲ್ಲೆಯ ಖಾಸಗಿ ಶಾಲಾ ಮತ್ತು ಕಾಲೇಜುಗಳ ತಮ್ಮ ವ್ಯಾಪ್ತಿಯ ಕಟ್ಟಡಗಳು ಮತ್ತು ಹಾಸ್ಟೆಲ್ ಗಳನ್ನು ಜಿಲ್ಲಾಡಳಿತ ಕೋರಿದ ಕೂಡಲೇ ಬಿಟ್ಟುಕೊಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

    Click Here

    Call us

    Click Here

    ಅವರು ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಮುಖ್ಯೋಪಧ್ಯಾಯರುಗಳ, ವಸತಿ ಶಾಲೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಇದುವರೆಗೂ ಕೋವಿಡ್-19 ವಿರುದ್ದ ಹೋರಾಟದಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಮುಂದೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವ ಜಿಲ್ಲೆಯ ಜನರಿಂದ , ಪ್ರಸ್ತುತ ಜಿಲ್ಲೆಯಲ್ಲಿನ ನಾಗರೀಕರನ್ನು ಕೋವಿಡ್ ನಿಂದ ರಕ್ಷಿಸುವುದು ಅತ್ಯಂತ ಸವಾಲಿನ ಕೆಲಸ, ಇದಕ್ಕಾಗಿ ವಿದೇಶದಿಂದ ಮತ್ತು ಹೊರರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಇದಕ್ಕಾಗಿ ಜಿಲ್ಲೆಯ ಸರಕಾರಿ ಹಾಸ್ಟೆಲ್ ಗಳು, ಖಾಸಗಿ ಹಾಸ್ಟಲ್ ಗಳು ಮತ್ತು ಶಾಲಾ ಕಾಲೇಜುಗಳನ್ನು, ವಸತಿ ಶಾಲೆಗಳನ್ನು ಬಳಸಿಕೊಳ್ಳಲಾಗುತ್ತಿದ್ದು, ಜಿಲ್ಲಾಡಳಿತ ಸೂಚಿಸ ಕೂಡಲೇ ಸಂಬಂದಪಟ್ಟ ಸಂಸ್ಥೆಗಳು , ಯಾವುದೇ ಸಬೂಬುಗಳನ್ನು ನೀಡದೇ ಕೂಡಲೇ ತಮ್ಮ ಕಟ್ಟಡವನ್ನು ಜಿಲ್ಲಾಡಳಿತಕ್ಕೆ ಬಿಟ್ಟು ಕೊಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಟ್ಟಡಕ್ಕೆ ಸಣ್ಣಪುಟ್ಟ ದುರಸ್ತಿಗಳಿದ್ದರೆ ತಕ್ಷಣ ಮಾಡಿಸುವಂತೆ ತಿಳಿಸಿದರು.

    ಕ್ವಾರಂಟೈನ್ ಗಾಗಿ ಬಳಸಕೊಳ್ಳುವ ಸರಕಾರಿ ಹಾಸ್ಟೆಲ್ ಗಳು, ಖಾಸಗಿ ಹಾಸ್ಟಲ್ ಗಳು ಮತ್ತು ಶಾಲಾ ಕಾಲೇಜುಗಳನ್ನು , ಕ್ವಾರಂಟೈನ್ ಮುಗಿದ ಕೂಡಲೇ ಸಂಪೂರ್ಣವಾಗಿ ಸ್ವಾನಿಟೈಸ್ ಮಾಡಿ, ಯಾವುದೇ ಸಂದರ್ಭದಲ್ಲಿ ಕೋವಿಡ್-19 ಕಂಡುಬರದ ರೀತಿಯಲ್ಲಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮರಳಿ ಬಿಟ್ಟು ಕೊಡಲಾಗುವುದು ಎಂದು ಜಿಲ್ಲಾಧಿಕರಿ ತಿಳಿಸಿದರು.

    ಈಗಾಗಲೇ ಜಿಲ್ಲೆಗೆ ಹೊರರಾಜ್ಯದಿಂದ ಬರಲು ಪ್ರಥಮ ಹಂತದಲ್ಲಿ ಸುಮಾರು 6,000 ಮಂದಿ ನೊಂದಾಯಿಸಿಕೊಂಡು ಕಾಯುತ್ತಿದ್ದು, ಇವರಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಕೂಡಲೇ ಜಿಲ್ಲೆಗೆ ಇವರ ಪ್ರವೇಶ ಆರಂಭವಾಗಲಿದೆ, ಮೊದಲಿಗೆ ಇವರನ್ನು ಜಿಲ್ಲಾ ಗಡಿಯಲ್ಲಿ ಆರೋಗ್ಯ ತಪಾಸಣೆ ಮಾಡಿ, ಪೊಲೀಸ್ ಎಸ್ಕಾರ್ಟ್ ನೊಂದಿಗೆ ಸಂಬಂದಪಟ್ಟ ತಾಲೂಕಿನ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗುವುದು, ಆರೋಗ್ಯ ಪರೀಕ್ಷೆಯಲ್ಲಿ ರೋಗ ಲಕ್ಷಣ ಕಂಡು ಬಂದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗುವುದು, ಹೋಟೆಲ್ ಗಳಲ್ಲಿ ಕ್ವಾರಂಟೈನ್ ಆಗಬಯಸುವವರು ಹೋಟೆಲ್ ನ ವೆಚ್ಚವನ್ನು ತಮ್ಮ ಖರ್ಚಿನಲ್ಲಿ ಭರಿಸಬೇಕು, ಜಿಲ್ಲಾಡಳಿತ ವ್ಯವಸ್ಥೆ ಮಾಡುವ ಕೇಂದ್ರಗಳಲ್ಲಿ ಉತ್ತಮ ರೀತಿಯಲ್ಲಿ ಉಚಿತ ಊಟೋಪಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದ ಜಿಲ್ಲಾಧಿಕಾರಿ ಜಿ.ಜಗದೀಶ್, ವಿದೇಶದಿಂದ ಬರುವವರನ್ನು ಪ್ರತ್ಯೆಕವಾಗಿ ಸಿಂಗಲ್ ರೂಂ ಗಳಲ್ಲಿ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ , ವಿದೇಶದಿಂದ ಮತ್ತು ಹೊರರಾಜ್ಯದಿಂದ ಜಿಲ್ಲೆಗೆ ಸುಮಾರು 20,000 ಮಂದಿ ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Call us

    Call us

    ಲಾಕ್‌ಡೌನ್ ಅವಧಿಯಲ್ಲಿ ಜಿಲ್ಲೆಯಲ್ಲಿದ್ದ ವಲಸೆ ಕಾರ್ಮಿಕರಿಗೆ ಅತ್ಯುತ್ತಮ ರೀತಿಯಲ್ಲಿ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಮತ್ತು ಲಾಕ್ ಡೌನ್ ನಿರ್ಭಂಧಗಳನ್ನು ಇಡೀ ರಾಜ್ಯದಲ್ಲೇ ಅತ್ಯಂತ ಶಿಸ್ತಿನಿಂದ ಅತ್ಯುತ್ತಮವಾಗಿ ಪಾಲಿಸಿದ ನಾಗರೀಕರು ಎಂಬ ಹೆಗ್ಗಳಿಕೆ ಜಿಲ್ಲೆಗೆ ಇದೆ, ಹೊರಗಿನಿಂದ ಬರುವ ವ್ಯಕ್ತಿಗಳಿಂದ ಜಿಲ್ಲೆಯ 13 ಲಕ್ಷ ಜನರನ್ನು ಕೋವಿಡ್ ಸೋಂಕು ಹರಡದ ಕುರಿತಂತೆ , ಜಿಲ್ಲಾಡಳಿದ ಎಲ್ಲಾ ಅಧಿಕಾರಿಗಳು ಉತ್ತಮ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಆಯೋಜಿಸಿ, ಯಾವುದೇ ಒತ್ತಡಗಳಿಗೆ ಮಣಿಯದೇ ಜಿಲ್ಲೆಯ ಜನರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡುವಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

    ಜಿಲ್ಲಾ ಕರೋನಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ 12 ಚೆಕ್ ಪೋಸ್ಟ್ ಗಳನ್ನು ಆರಂಬಿಸಲಾಗಿದ್ದು, ಹೊರಗಿನಿಂದ ಬರುವವರಿಗೆ ಚೆಕ್ ಪೊಸ್ಟ್ ಗಳಲ್ಲಿ ಆರೋಗ್ಯ ತಪಾಸಣೆ ನಡೆಸಿ ಪ್ರವೇಶ ನೀಡಲಾಗುತ್ತಿದೆ, ಕ್ವಾರಂಟೈನ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಸಂಬಂದಪಟ್ಟ ಸಂಸ್ಥೆಗಳ ಅಗತ್ಯ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

    ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿರುವ ಶಾಲೆ , ಕಾಲೇಜು ಮತ್ತು ಹಾಸ್ಟೆಲ್ ಗಳ ಹಾಗೂ ಹೋಟೆಲ್ ಗಳ ವಿವರಗಳನ್ನು ಸಂಗ್ರಹಿಸಿಕೊಂಡು, ಅಗತ್ಯವಿರುವಡೆಯಲ್ಲಿ ಎಲ್ಲಾ ಮೂಲಭೂತ ಅಗತ್ಯಗಳೊಂದಿಗೆ, ಜಿಲ್ಲಾಡಳಿತ ಸೂಚಿಸಿದ ಕೂಡಲೇ ಕ್ವಾರಂಟೈನ್ ಕೇಂದ್ರ ತೆರೆಯಲು ಸಿದ್ದವಾಗಿರುವಂತೆ ಡಿಸಿ ಜಿ.ಜಗದೀಶ್ ಸೂಚಿಸಿದರು.

    ಕೌರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು

    ಜಿಲ್ಲೆಗೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಈ ಕುರಿತು ಕ್ವಾರಂಟೈನ್ ಕೇಂದ್ರಗಳ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ , ಅಡ್ಡಿಪಡಿಸುವವರನ್ನು ಸೆಕ್ಷನ್ 188, 269, 270 ಪ್ರಕಾರ ಜೈಲುಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಕ್ವಾರಂಟೈನ್ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ನೀರಿನ ಸಮಸ್ಯೆಯಿದ್ದಲ್ಲಿ ಸಂಬಂದಪಟ್ಟ ಪಂಚಾಯತ್ ಮೂಲಕ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುವುದು, ಸಂಸ್ಥೆಯ ಸಿಬ್ಬಂದಿಗಳು ಅಗತ್ಯ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಲಾಗುವುದು, ಕೇಂದ್ರದ ನಿರ್ವಹಣೆಗೆ ಅಗತ್ಯವಿದ್ದಲ್ಲಿ ಅದೇ ಸಂಸ್ಥೆಯ ನೌಕರರನ್ನು ನಿಯೋಜಿಸಲಾಗುವುದು ಹಾಗೂ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು , ಎಲ್ಲಾ ಕ್ವಾರಂಟೈನ್ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿಹೆಚ್‌ಓ ಡಾ.ಸುದೀರ್ ಚಂದ್ರ ಸೂಡಾ, ಡಿಡಿಪಿಐ ಶೇಷಶಯನ ಕಾರಿಂಜ ಉಪಸ್ಥಿತರಿದ್ದರು. ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ, ವಸತಿಶಾಲೆಗಳ ಪ್ರಾಂಶುಪಾಲರು, ಮುಖ್ಯಸ್ಥರು ಉಪಸ್ಥಿತರಿದ್ದರು.

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d