ಉಡುಪಿ-ಮಂಗಳೂರು ಸಂಚಾರಕ್ಕೆ ಪಾಸ್ ಬೇಕಿಲ್ಲ, ನಿರ್ಬಂಧ ತೆರವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ನಡುವೆ ಸಂಚಾರಕ್ಕೆ ಅಂತರ್ಜಿಲ್ಲಾ ಪಾಸ್ ಪಡೆಯದೇ, ಆಯಾ ಸಂಸ್ಥೆಗಳ ಗುರುತು ಪತ್ರದೊಂದಿಗೆ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯ ತನಕ ಸಂಚರಿಸಬಹುದು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ.

Call us

Click Here

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಒಂದೇ ಘಟಕವಾಗಿ ಪರಿಗಣಿಸಲಾಗಿದೆ. ಹಾಗಾಗಿ ಈಗಾಗಲೇ ಅನುಮತಿಸಲಾಗಿರುವ ಚಟುವಟಿಕೆಗಳನ್ನು ಕೈಗೊಳ್ಳಲು ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯ ತನಕ ವ್ಯಕ್ತಿಗಳು ಕೆಲಸ ಮಾಡುತ್ತಿರುವ ಸಂಸ್ಥೆಯಿಂದ ನೀಡಲಾಗುವ ಪತ್ರ, ಹಾಗೂ ಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದ್ದು, ಪ್ರತ್ಯೇಕ ಪಾಸ್ ಅಗತ್ಯವಿರುವುದಿಲ್ಲ. ಸಂಜೆ 7 ರಿಂದ ಬೆಳಿಗ್ಗೆ 7ರ ತನಕದ ಕರ್ಪ್ಯೂ ಅವಧಿಯಲ್ಲಿ ಈ ಹಿಂದೆ ಅಗತ್ಯ ಚಟುವಟಿಕೆಗಳಿಗೆ ನೀಡಲಾಗಿರುವ ಪಾಸ್‌ನ್ನೇ ಮಾನ್ಯ ಮಾಡಲಾಗಿದೆ. ಉಡುಪಿ ಮಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳ ಸಂಚಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ. /ಕುಂದಾಪ್ರ ಡಾಟ್ ಕಾಂ ಸುದ್ದಿ/

ಇದನ್ನೂ ಓದಿ:
► ಉಡುಪಿ ಜಿಲ್ಲೆಯಲ್ಲಿ ಫೇಸ್ ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ರೂ.100 ದಂಡ – https://kundapraa.com/?p=37467 .
► ಮುಂಬೈಯಿಗರು ಉಡುಪಿ ಜಿಲ್ಲೆಗೆ ಆಗಮಿಸಲು ಅನುಮತಿ. ಸೇವಾಸಿಂಧು ಪಾಸ್, ಕ್ವಾರಂಟೈನ್ ಕಡ್ಡಾಯ – https://kundapraa.com/?p=37387 .
► ಅಂತರಾಜ್ಯ ಸಂಚಾರಕ್ಕೆ ಸೇವಾಸಿಂಧುವಿನಲ್ಲಿ ನೊಂದಣಿ ಅಗತ್ಯ – https://kundapraa.com/?p=37276 .

 

Click here

Click here

Click here

Click Here

Call us

Call us

Leave a Reply