Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರೋನಾ ವಾರಿಯರ್ಸ್‌ಗೆ ನಿವೃತ್ತ ಶಿಕ್ಷಕನಿಂದ ಒಂದು ತಿಂಗಳ ಪಿಂಚಣಿ ಮೀಸಲು
    ಅಮಾಸೆಬೈಲು

    ಕೊರೋನಾ ವಾರಿಯರ್ಸ್‌ಗೆ ನಿವೃತ್ತ ಶಿಕ್ಷಕನಿಂದ ಒಂದು ತಿಂಗಳ ಪಿಂಚಣಿ ಮೀಸಲು

    Updated:12/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೊರೊನಾ ಸೋಂಕು ವಿರುದ್ಧ ಹೋರಾಡುತ್ತಿರುವ ವಾರಿಯರ‍್ಸ್ ಸೇವೆಗೆ ಕಿರಿಮಂಜೇಶ್ವರದ ನಿವೃತ್ತ ಶಿಕ್ಷಕ ಕೆ. ಸದಾಶಿವ ಶ್ಯಾನುಭಾಗ್ ತಮ್ಮ ಒಂದು ತಿಂಗಳ ಪಿಂಚಣಿ ತೆಗೆದಿರಿಸಿದ್ದಾರೆ. ವಿವಿಧ ಸಂಘಟನೆಗಳು, ದಾನಿಗಳು ಅವರಿಗೆ ಆಹಾರ ಸಾಮಗ್ರಿಯ ಕಿಟ್ ವಿತರಿಸುತ್ತಿದ್ದರೆ, ಶ್ಯಾನುಭಾಗರು ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಮತ್ತು ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿಗೆ ನೀರಿನ ಬಾಟಲಿ ಮತ್ತು ಬಿಸ್ಕಿಟ್ ಕೊಡುತ್ತಿದ್ದಾರೆ. ಬೇಸಿಗೆಯ ಕಡು ಬಿಸಿಲಿನಲ್ಲಿ ಕರ್ತವ್ಯದ ನಿಮಿತ್ತ ಸುತ್ತಾಡಬೇಕಾಗಿರುವ ಅವರಿಗೆ ಈ ವಸ್ತುಗಳ ಅಗತ್ಯ ಹೆಚ್ಚಾಗಿದೆ ಎನ್ನುವುದು ಅವರ ನಿಲುವು.

    Click Here

    Call us

    Click Here

    ಹತ್ತು ದಿನಗಳ ಹಿಂದೆ ವಾರಾವಧಿಗಾಗುವ ಮೊದಲ ಕಂತಿನ ವಸ್ತುಗಳನ್ನು ವಿತರಿಸಿದ್ದ ಅವರು ಎರಡು ದಿನಗಳ ಹಿಂದೆ ಎರಡನೆ ಕಂತಿನ ವಿತರಣೆ ನಡೆಸಿದರು. ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ನಿಶಾ ಜೇಮ್ಸ್ ಮತ್ತು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಂಗೀತಾ ಅವುಗಳನ್ನು ಸ್ವೀಕರಿಸಿ, ಶ್ಯಾನುಭಾಗರಿಗೆ ಕೃತಜ್ಞತೆ ಸಲ್ಲಿಸಿದರು. ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ, ಸಾಮಾಜಿಕ ಕಾರ್ಯಕರ್ತ ರತನ್ ಬಿಜೂರು ಇದ್ದರು.

    ಸದಾಶಿವ ಶ್ಯಾನುಭಾಗ್ ತಮ್ಮದೇ ಶೈಲಿಯ ಸೇವಾಕ್ರಮಗಳಿಂದ ವಿಶಿಷ್ಟತೆ ಮೆರೆಯುವವರು. ಸಮುದಾಯದ ಸಮಾರಂಭಗಳಲ್ಲಿ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರಧಾನ ಪರಿಚಾರಕರಾಗಿ ದುಡಿಯುತ್ತಾರೆ. ಅತಿಥಿಗಳನ್ನು ವೈಯಕ್ತಿಕ ನೆಲೆಯಲ್ಲಿ ಗೌರವಿಸುತ್ತಾರೆ. ಪ್ರತಿವರ್ಷ ಇಲಾಖೆ ನಡೆಸುವ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸುವ ಶಿಕ್ಷಕರಲ್ಲಿ ಚೀಟಿ ಎತ್ತುವ ಮೂಲಕ ಅದೃಷ್ಟಶಾಲಿ ಗುರುಗಳನ್ನು ಆಯ್ಕೆ ಮಾಡಿ ಅವರನ್ನು ವಿಶೇಷವಾಗಿ ಸನ್ಮಾನಿಸುತ್ತಾರೆ. ಈಗ ತಮ್ಮ ವ್ಯಾಪ್ತಿಯ ಕೊರೊನಾ ವಾರಿಯರ‍್ಸ್‌ಗೆ ತಮ್ಮ ಪಾಲಿನ ಸೇವೆ ನೀಡುತ್ತಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ

    14/01/2026

    ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ

    14/01/2026

    ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    13/01/2026
    Leave A Reply Cancel Reply

    seventeen − 9 =

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ
    • ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ
    • ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.