ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರ ಪುನರಾರಂಭ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮೇ.13ರಿಂದ ಬಸ್ ಸಂಚಾರ ಪುನರಾರಂಭಿಸಲಾಗುತ್ತಿದ್ದು, ಕೆಲವು ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು ರಸ್ತೆಗಿಳಿಯಲಿವೆ.

Call us

Click Here

ಬಸ್‌ನಲ್ಲಿ 50 ಪ್ರತಿಶತಕ್ಕಿಂತ ಹೆಚ್ಚಿನ ಜನರನ್ನು ಕರೆದೊಯ್ಯುವಂತಿಲ್ಲ. ಸಾರ್ವಜನಿಕರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಕೋವಿಡ್ 19 ಲಾಕ್‌ಡೌನ್ ಪ್ರಯುಕ್ತ ಸ್ಥಗಿತಗೊಂಡಿದ್ದ ಬಸ್ ಸಂಚಾರವನ್ನು ಪುನರಾರಂಭಿಸುವ ಬಗ್ಗೆ ಘಟಕ ವ್ಯವಸ್ಥಾಪಕರು, ಕೆಎಸ್‌ಆರ್‌ಟಿಸಿ ಉಡುಪಿ ಮತ್ತು ಮಾಲಕರು, ಭಾರತಿ ಮೋಟಾರ್ಸ್, ಉಡುಪಿ ಇವರು ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಮಾರ್ಗಗಳಲ್ಲಿ ಬಸ್ಸು ಸಂಚಾರ ಪ್ರಾರಂಭಿಸುವ ಕುರಿತು , ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಈ ಬಗ್ಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಂದ ಕಛೇರಿಗಳಿಗೆ ಬರಲು ಬಸ್ಸಿನ ವ್ಯವಸ್ಥೆ ಮಾಡುವಂತೆ ಮನವಿಗಳು ಸ್ವೀಕೃತವಾಗಿರುತ್ತವೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಕಛೇರಿಗೆ ಸಾರ್ವಜನಿಕರಿಂದ ಮನವಿಗಳು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಓಡಾಟ ನಡೆಸಲು ಅನುಕೂಲವಾಗುವ ಸಲುವಾಗಿ ಏSಖಖಿಅ/ಖಾಸಗಿ ಬಸ್ಸುಗಳು ಬೆಳಿಗ್ಗೆ 7 ಗಂಟೆಯಿAದ ಸಂಜೆ 7 ಗಂಟೆಯವರೆಗೆ ಸಂಚರಿಸಲು ಈ ಕಳಗೆ ತಿಳಿಸಿರುವ ಷರತ್ತುಗಳನ್ನು ವಿಧಿಸಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ಸುಗಳಿಗೆ ಅನುಮತಿ ನೀಡಲಾಗಿದೆ.

ಉಡುಪಿಯಿಂದ ಕುಂದಾಪುರ 4 ಬಸ್ ಗಳು, ಹೆಬ್ರಿಗೆ 1, ಕಾರ್ಕಳಕ್ಕೆ 3, ಕಾಪು ಮಲ್ಲಾರು ಗೆ 1, ಮಣಿಪಾಲಕ್ಕೆ 2, ಬಾರ್ಕೂರು-ಸಿದ್ಧಾಪುರಕ್ಕೆ 2, ಅಲೆವೂರು ಗೆ 1, ಮಲ್ಪೆ ಗೆ 1, ಹೂಢೆ ಗೆ 1 , ಬ್ರಹ್ಮಾವರಕ್ಕೆ 2 ಬಸ್ ಹಾಗೂ ಕುಂದಾಪುರದಿಂದ ಬೈಂದೂರುಗೆ 2 ಬಸ್‌ಗಳು ಸಂಚರಿಸಲು ಅನುಮತಿ ನೀಡಲಾಗಿದೆ.

Click here

Click here

Click here

Click Here

Call us

Call us

ಬಸ್ ಸಂಚರಿಸಲು ಕೆಳಕಂಡ ಷರತ್ತುಗಳೊಂದಿಗೆ ಅನುಮತಿ ನೀಡಲಾಗಿದೆ.
ಘಟಕ ವ್ಯವಸ್ಥಾಪಕರು ಕೆಎಸ್‌ಆರ್‌ಟಿಸಿ ಉಡುಪಿ ಇವರು ಮನವಿಯಲ್ಲಿ ಕೋರಿರುವ ಮಾರ್ಗಗಳಲ್ಲಿ ಬಸ್ ಸಂಚರಿಸಲು ಅನುಮತಿ ನೀಡಲಾಗಿದೆ. ಖಾಸಗಿ ಬಸ್ ಮಾಲಕರು ಪರವಾನಿಗೆಯಲ್ಲಿ ನೀಡಿದ (ಎಲ್ಲಾ ಷರತ್ತುಗಳು) ಪರವಾನಿಗೆಯ ಮಾರ್ಗ ಮತ್ತ ವೇಳಾಪಟ್ಟಿಯಂತ ಸಂಚರಿಸುವುದು , ಬಸ್ಸುಗಳ ಆಸನ ಸಾಮರ್ಥ್ಯದ ಶೇಕಡಾ 50 ರಷ್ಟು ಪ್ರಯಾಣಿಕರನ್ನು ಮಾತ್ರ ಸಾಗಿಸಬಹುದು, ನಿಂತು ಪ್ರಯಾಣಿಸಲು ಅವಕಾಶವಿಲ್ಲ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆ ತನಕ ಕಾರ್ಯಾಚರಣೆ ಮಾಡಬಹುದು. ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ನಿಗದಿಪಡಿಸಿದ ಟಿಕೆಟ್ ದರವನ್ನು ಮಾತ್ರ ಪಡೆಯಬೇಕು, ಸಂಚರಿಸುವ ಖಾಸಗಿ ಬಸ್ಸುಗಳ ಸಂಪೂರ್ಣ ವಿವರಗಳನ್ನು ಪ್ರಾದೇಶಿಕ ಸಾರಿಗೆ ಕಛೇರಿ ಉಡುಪಿಗೆ ಒದಗಿಸಬೇಕು. ದಿನದ ಸಂಚಾರದ ಆರಂಭದ ಮೊದಲು, ಪ್ರತೀ ಟ್ರಿಪ್ ಹಾಗೂ ದಿನದ ಸಂಚಾರ ಮುಗಿದ ನಂತರ ಬಸ್ಸುಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು, ಬಸ್ಸುಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಸಾರ್ವಜನಿಕ ಅಂತರ ಕಾಯ್ದುಕೊಂಡು ಪ್ರಯಾಣಿಸುವಂತೆ ನೋಡಿಕೊಳ್ಳುವುದು, ಬಸ್ಸಿನ ಸಿಬ್ಬಂದಿಗಳು ಮಾಸ್ಕ್, ಗೌಸ್ ಮತ್ತು ಸ್ಯಾನಿಟೈಸರ್‌ಗಳನ್ನು ಕಡ್ಡಾಯವಾಗಿ ಬಳಸತಕ್ಕದ್ದು. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಮಾತ್ರ ಬಸ್ ಸಂಚರಿಸಲು ಅನುಮತಿ ನೀಡಿದ್ದು ಅಂತರ್ ಜಿಲ್ಲಾ ಬಸ್ ಸಂಚಾರವನ್ನು ನಿಷೇಧಿಸಿದೆ. ಉಡುಪಿ ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳ ನಿರ್ದೇಶನಗಳ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

 

Leave a Reply