Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರ ಪುನರಾರಂಭ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರ ಪುನರಾರಂಭ

    Updated:12/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಮೇ.13ರಿಂದ ಬಸ್ ಸಂಚಾರ ಪುನರಾರಂಭಿಸಲಾಗುತ್ತಿದ್ದು, ಕೆಲವು ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು ರಸ್ತೆಗಿಳಿಯಲಿವೆ.

    Click Here

    Call us

    Click Here

    ಬಸ್‌ನಲ್ಲಿ 50 ಪ್ರತಿಶತಕ್ಕಿಂತ ಹೆಚ್ಚಿನ ಜನರನ್ನು ಕರೆದೊಯ್ಯುವಂತಿಲ್ಲ. ಸಾರ್ವಜನಿಕರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

    ಕೋವಿಡ್ 19 ಲಾಕ್‌ಡೌನ್ ಪ್ರಯುಕ್ತ ಸ್ಥಗಿತಗೊಂಡಿದ್ದ ಬಸ್ ಸಂಚಾರವನ್ನು ಪುನರಾರಂಭಿಸುವ ಬಗ್ಗೆ ಘಟಕ ವ್ಯವಸ್ಥಾಪಕರು, ಕೆಎಸ್‌ಆರ್‌ಟಿಸಿ ಉಡುಪಿ ಮತ್ತು ಮಾಲಕರು, ಭಾರತಿ ಮೋಟಾರ್ಸ್, ಉಡುಪಿ ಇವರು ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಮಾರ್ಗಗಳಲ್ಲಿ ಬಸ್ಸು ಸಂಚಾರ ಪ್ರಾರಂಭಿಸುವ ಕುರಿತು , ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

    ಈ ಬಗ್ಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಂದ ಕಛೇರಿಗಳಿಗೆ ಬರಲು ಬಸ್ಸಿನ ವ್ಯವಸ್ಥೆ ಮಾಡುವಂತೆ ಮನವಿಗಳು ಸ್ವೀಕೃತವಾಗಿರುತ್ತವೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಕಛೇರಿಗೆ ಸಾರ್ವಜನಿಕರಿಂದ ಮನವಿಗಳು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಓಡಾಟ ನಡೆಸಲು ಅನುಕೂಲವಾಗುವ ಸಲುವಾಗಿ ಏSಖಖಿಅ/ಖಾಸಗಿ ಬಸ್ಸುಗಳು ಬೆಳಿಗ್ಗೆ 7 ಗಂಟೆಯಿAದ ಸಂಜೆ 7 ಗಂಟೆಯವರೆಗೆ ಸಂಚರಿಸಲು ಈ ಕಳಗೆ ತಿಳಿಸಿರುವ ಷರತ್ತುಗಳನ್ನು ವಿಧಿಸಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ಸುಗಳಿಗೆ ಅನುಮತಿ ನೀಡಲಾಗಿದೆ.

    ಉಡುಪಿಯಿಂದ ಕುಂದಾಪುರ 4 ಬಸ್ ಗಳು, ಹೆಬ್ರಿಗೆ 1, ಕಾರ್ಕಳಕ್ಕೆ 3, ಕಾಪು ಮಲ್ಲಾರು ಗೆ 1, ಮಣಿಪಾಲಕ್ಕೆ 2, ಬಾರ್ಕೂರು-ಸಿದ್ಧಾಪುರಕ್ಕೆ 2, ಅಲೆವೂರು ಗೆ 1, ಮಲ್ಪೆ ಗೆ 1, ಹೂಢೆ ಗೆ 1 , ಬ್ರಹ್ಮಾವರಕ್ಕೆ 2 ಬಸ್ ಹಾಗೂ ಕುಂದಾಪುರದಿಂದ ಬೈಂದೂರುಗೆ 2 ಬಸ್‌ಗಳು ಸಂಚರಿಸಲು ಅನುಮತಿ ನೀಡಲಾಗಿದೆ.

    Click here

    Click here

    Click here

    Call us

    Call us

    ಬಸ್ ಸಂಚರಿಸಲು ಕೆಳಕಂಡ ಷರತ್ತುಗಳೊಂದಿಗೆ ಅನುಮತಿ ನೀಡಲಾಗಿದೆ.
    ಘಟಕ ವ್ಯವಸ್ಥಾಪಕರು ಕೆಎಸ್‌ಆರ್‌ಟಿಸಿ ಉಡುಪಿ ಇವರು ಮನವಿಯಲ್ಲಿ ಕೋರಿರುವ ಮಾರ್ಗಗಳಲ್ಲಿ ಬಸ್ ಸಂಚರಿಸಲು ಅನುಮತಿ ನೀಡಲಾಗಿದೆ. ಖಾಸಗಿ ಬಸ್ ಮಾಲಕರು ಪರವಾನಿಗೆಯಲ್ಲಿ ನೀಡಿದ (ಎಲ್ಲಾ ಷರತ್ತುಗಳು) ಪರವಾನಿಗೆಯ ಮಾರ್ಗ ಮತ್ತ ವೇಳಾಪಟ್ಟಿಯಂತ ಸಂಚರಿಸುವುದು , ಬಸ್ಸುಗಳ ಆಸನ ಸಾಮರ್ಥ್ಯದ ಶೇಕಡಾ 50 ರಷ್ಟು ಪ್ರಯಾಣಿಕರನ್ನು ಮಾತ್ರ ಸಾಗಿಸಬಹುದು, ನಿಂತು ಪ್ರಯಾಣಿಸಲು ಅವಕಾಶವಿಲ್ಲ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆ ತನಕ ಕಾರ್ಯಾಚರಣೆ ಮಾಡಬಹುದು. ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ನಿಗದಿಪಡಿಸಿದ ಟಿಕೆಟ್ ದರವನ್ನು ಮಾತ್ರ ಪಡೆಯಬೇಕು, ಸಂಚರಿಸುವ ಖಾಸಗಿ ಬಸ್ಸುಗಳ ಸಂಪೂರ್ಣ ವಿವರಗಳನ್ನು ಪ್ರಾದೇಶಿಕ ಸಾರಿಗೆ ಕಛೇರಿ ಉಡುಪಿಗೆ ಒದಗಿಸಬೇಕು. ದಿನದ ಸಂಚಾರದ ಆರಂಭದ ಮೊದಲು, ಪ್ರತೀ ಟ್ರಿಪ್ ಹಾಗೂ ದಿನದ ಸಂಚಾರ ಮುಗಿದ ನಂತರ ಬಸ್ಸುಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು, ಬಸ್ಸುಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಸಾರ್ವಜನಿಕ ಅಂತರ ಕಾಯ್ದುಕೊಂಡು ಪ್ರಯಾಣಿಸುವಂತೆ ನೋಡಿಕೊಳ್ಳುವುದು, ಬಸ್ಸಿನ ಸಿಬ್ಬಂದಿಗಳು ಮಾಸ್ಕ್, ಗೌಸ್ ಮತ್ತು ಸ್ಯಾನಿಟೈಸರ್‌ಗಳನ್ನು ಕಡ್ಡಾಯವಾಗಿ ಬಳಸತಕ್ಕದ್ದು. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಮಾತ್ರ ಬಸ್ ಸಂಚರಿಸಲು ಅನುಮತಿ ನೀಡಿದ್ದು ಅಂತರ್ ಜಿಲ್ಲಾ ಬಸ್ ಸಂಚಾರವನ್ನು ನಿಷೇಧಿಸಿದೆ. ಉಡುಪಿ ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳ ನಿರ್ದೇಶನಗಳ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d