Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೋಟಗಾರಿಕಾ ಇಲಾಖೆ: ನರೇಗಾ, ವಿವಿಧ ಯೋಜನೆಗಳ ಪ್ರಯೋಜನ ಪಡೆಯಿರಿ
    ಉಡುಪಿ ಜಿಲ್ಲೆ

    ತೋಟಗಾರಿಕಾ ಇಲಾಖೆ: ನರೇಗಾ, ವಿವಿಧ ಯೋಜನೆಗಳ ಪ್ರಯೋಜನ ಪಡೆಯಿರಿ

    Updated:13/05/20201 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: 2020-21ನೇ ಸಾಲಿಗೆ ತೋಟಗಾರಿಕೆ ಇಲಾಖೆಯ ಮುಖಾಂತರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉಡುಪಿ ಜಿಲ್ಲೆಯ ೧೫೮ ಗ್ರಾಮಪಂಚಾಯತ್ ಮಟ್ಟದಲ್ಲಿ, ಗೇರು, ಅಡಿಕೆ, ಕಾಳು ಮೆಣಸು, ಕೊಕೋ, ನುಗ್ಗೆ ಬೆಳೆ ಪ್ರದೇಶಗಳ ವಿಸ್ತರಣೆ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿರುತ್ತದೆ.

    Click Here

    Call us

    Click Here

    ಕಳೆದ ವ?ದಿಂದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಉಡುಪಿ ಮಲ್ಲಿಗೆ ಬೆಳೆ ಪ್ರದೇಶ ವಿಸ್ತರಣೆ ಕಾಮಗಾರಿಯನ್ನು ಸೇರ್ಪಡೆ ಮಾಡಿದ್ದು 5 ಸೆಂಟ್ ಪ್ರದೇಶದಲ್ಲಿಯೂ, ಮಲ್ಲಿಗೆ ಬೆಳೆ ಪ್ರದೇಶ ವಿಸ್ತರಣೆ ಕಾರ್ಯಕ್ರಮವನ್ನು ಕೈಗೊಳ್ಳಲು ಅವಕಾಶವಿದ್ದು, ಸಣ್ಣ., ಅತೀ ಸಣ್ಣ ರೈತರು, ಮಹಿಳಾ ಫಲಾನುಭವಿಗಳೂ ಸಹಾ ತಮ್ಮ ಕೃಷಿ ಜಮೀನಿನಲ್ಲಿ ಹೊಸದಾಗಿ ಮಲ್ಲಿಗೆ ಗಿಡ ನಾಟಿ ಕಾರ್ಯವನ್ನು ಕೈಗೊಳ್ಳಲು ಅವಕಾಶವಿರುತ್ತದೆ,

    ಅಡಿಕೆ, ತೆಂಗು, ಕಾಳುಮೆಣಸು ತೋಟ ಪುನಶ್ಚೇತನ ಕಾರ್ಯಗಳಿಗೆ ಸಹಾ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅವಕಾಶವಿದ್ದು ಆಸಕ್ತರು ಪ್ರಯೋಜನ ಪಡೆದುಕೊಳ್ಳಲು ಕೋರಿದೆ.

    ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಅನುಷ್ಠಾನಕ್ಕಾಗಿ ಉದ್ಯೋಗ ಚೀಟಿ ಕಡ್ಡಾಯವಾಗಿದ್ದು ಹತ್ತಿರದ ಗ್ರಾಮ ಪಂಚಾಯತ್‌ಗಳಲ್ಲಿ ಕಾಮಗಾರಿಗಾಗಿ ಹಾಗೂ ಉದ್ಯೋಗ ಬೇಡಿಕೆಗಾಗಿ ಸಂಪರ್ಕಿಸಬಹುದಾಗಿರುತ್ತದೆ,

    ವೈಯಕ್ತಿಕ ಕಾಮಗಾರಿಗಳಲ್ಲಿ ಬೋರ್‌ವೆಲ್ ಮರುಪೂರಣ ಕಾಮಗಾರಿಯನ್ನು ಇಲಾಖೆ ಮುಖಾಂತರ ಕೈಗೊಳ್ಳಬಹುದಾಗಿದ್ದು ಬೆಳೆ ಪ್ರದೇಶ ವಿಸ್ತರಣೆ ಕಾಮಗಾರಿಯನ್ನು 0.20ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚಿನ ಸ್ಥಳದಲ್ಲಿ ಕೈಗೊಂಡ ರೈತರು ಹನಿ ನೀರಾವರಿ ಘಟಕವನ್ನೂ ಕೂಡ ಅಳವಡಿಸಿಕೊಂಡರೆ ಇಲಾಖೆಯ ಯೋಜನೆಯ ಮುಖಾಂತರ ಸಹಾಯಧನ ನೀಡಲು ಅವಕಾಶವಿರುತ್ತದೆ.

    Click here

    Click here

    Click here

    Call us

    Call us

    ಅಡಿಕೆ, ತೆಂಗು, ಕಾಳುಮೆಣಸು, ಮಲ್ಲಿಗೆ ಗಿಡಗಳನ್ನು ರೈತರು ಖರೀದಿಸಲು ಇಚ್ಛಿಸಿದಲ್ಲಿ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಗಿಡಗಳ ಲಭ್ಯತೆ ಇದು ಉದ್ಯೋಗ ಖಾತರೀ ಯೋಜನೆಯ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಗಿಡಗಳನ್ನು ಮಾರಾಟ ಮಾಡಲಾಗುವುದು.

    2020-21ನೇ ಸಾಲಿಗೆ ತೋಟಗಾರಿಕೆ ಇಲಾಖೆಯ ಮುಖಾಂತರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಒಟ್ಟು 280 ಪ್ರದೇಶ ವಿಸ್ತರಣೆ ಕಾಮಗಾರಿ, ೫೦ ತೆಂಗು ಪುನಶ್ಚೇತನ ಕಾಮಗಾರಿ, 34 ಬೋರ್‌ವೆಲ್ ಮರುಪೂರಣ ಕಾಮಗಾರಿಗಳಿಗೆ ರೂ 127.99 ಲಕ್ಷ ಗುರಿ ನಿಗದಿಯಾಗಿರುತ್ತದೆ, ಪ್ರದೇಶ ವಿಸ್ತರಣೆ ಕಾಮಗಾರಿಗಳಲ್ಲಿ, ರೂ 28 ಲಕ್ಷ ಹನಿನೀರಾವರಿ ಅಳವಡಿಕೆಗಾಗಿ ಇಲಾಖೆ ಗುರಿ ನಿಗದಿಪಡಿಸಿದ್ದು ರೈತರು ಪ್ರಯೋಜನ ಪಡೆಯಲು ಕೋರಿದೆ.

    ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸುವಂತೆ (ಕಾರ್ಕಳ 9481440812, ಉಡುಪಿ 9900046117, ಕುಂದಾಪುರ 9900565469 ) ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ:
    ► ಹೂವಿನ ಬೆಳೆಗಾರರಿಗೆ ನಷ್ಠ ಪರಿಹಾರ ಪಾವತಿಸುವ ಬಗ್ಗೆ ರೈತರಿಗೆ ಮಾರ್ಗಸೂಚಿ – https://kundapraa.com/?p=37537 .

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    1 Comment

    1. Sanjeeva Naik on 14/05/2020 12:19 pm

      ಒಳ್ಳೆ ಕೆಲಸ

      Reply

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d