Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವರದಿಗಾರನೆಂದು ಮಾವನಿಗೆ ಬೆದರಿಕೆ ಹಾಕಿದ ಕತರ್ನಾಕ್ ಅಳಿಯ
    ಅಪಘಾತ-ಅಪರಾಧ ಸುದ್ದಿ

    ವರದಿಗಾರನೆಂದು ಮಾವನಿಗೆ ಬೆದರಿಕೆ ಹಾಕಿದ ಕತರ್ನಾಕ್ ಅಳಿಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: “ನಾನು ಸುವರ್ಣ ಸುದ್ದಿ ವಾಹಿನಿಯ ವರದಿಗಾರ ಮಾತನಾಡುತ್ತಿರುವುದು. ನಿಮ್ಮ ಅಸಲಿ ಬಂಡವಾಳದ ವೀಡಿಯೋ ನನ್ನ ಬಳಿಯಿದ್ದು ಅದನ್ನು ಸುವರ್ಣ ವಾಹಿನಿಯಲ್ಲಿ ಬಿತ್ತರಿಸಿ ಮಾನ ಮರ್ಯಾದೆಯನ್ನು ಹರಾಜು ಮಾಡುತ್ತೇನೆ. 2 ಲಕ್ಷ ರೂಪಾಯಿಯನ್ನು ಸೋಮವಾರ ಕುಂದಾಪುರದ ಮಣಿಪಾಲ ಬೇಕರಿ ಬಳಿ ತೆಗೆದುಕೊಂಡು ಬಾ ಇಲ್ಲದಿದ್ದರೆ ನಿನ್ನ ಮಗನನ್ನು ಕೊಲೆ ಮಾಡುತ್ತೇನೆ” ಹೀಗೆ ತನ್ನ ಸ್ವಂತ ಮಾವನಿಗೆ ಬೆದರಿಗೆ ಹಾಕಿ ಹಣ ಎಗರಿಸಲು ಹೊರಟಿದ್ದ ಅಳಿಯ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಉಪ್ಪುಂದದ ಪ್ರದೀಪ ಖಾರ್ವಿ (23) ಸಿಸಿಬಿ ಪೊಲೀಸರು ಬಂಧಿಸಿದ ಬಿದ್ದ ನಕಲಿ ವರದಿಗಾರ. .

    Click Here

    Call us

    Click Here

    ಘಟನೆಯ ವಿವರ:
    ತ್ರಾಸಿಯಲ್ಲಿ ಬೋಟ್‌ಗಳಿಗೆ ಜಿಪಿಎಸ್ ಅಳವಡಿಸುವ ಅಂಗಡಿ ಹೊಂದಿದ್ದ ಪ್ರದೀಪ ಖಾರ್ವಿ ಶನಿವಾರ ಬೆಳಗ್ಗೆ 12ಗಂಟೆ ಸುಮಾರಿಗೆ ತನ್ನ ಸ್ವಂತ ಮಾವನಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ, ಉಪ್ಪುಂದ ಕರ್ಕಿಕಳಿ ನಿವಾಸಿ ಅಣ್ಣಪ್ಪ ಖಾರ್ವಿ ಎಂಬುವವರಿಗೆ ದೂರವಾಣಿ ಕರೆ ಮಾಡಿ ತಾನು ಸುವರ್ಣ ನ್ಯೂಸ್ ವರದಿಗಾರನಾಗಿದ್ದು ತಮ್ಮ ಬಗ್ಗೆ ಇರುವ ವೀಡಿಯೊ ತುಣುಕೊಂದು ನನ್ನ ಬಳಿ 2 ಲಕ್ಷ ನೀಡದಿದ್ದರೇ ಅದನ್ನು ವಾಹಿನಿಯಲ್ಲಿ ಬಿತ್ತರಿಸುವುದಾಗಿ ಬೆದರಿಸಿದ್ದ. ಮತ್ತೆ ಜುಲೈ6ರಂದು ಬೆಳಿಗ್ಗೆ 10:00 ಗಂಟೆಯಿಂದ ಸತತ 10 ಸಲ ಕರೆ ಮಾಡಿ ನೀನು 2 ಲಕ್ಷ ರೂಪಾಯಿಯನ್ನು ಕೊಡದೇ ಇದ್ದಲ್ಲಿ ನಿನ್ನನ್ನು ಹಾಗೂ ನಿನ್ನ ಮಗನನ್ನು ಕೊಂದು ಬಿಸಾಡುತ್ತೇನೆ ಎಂದು ಧಮಕಿ ಹಾಕಿದ್ದ.

    ಆರೋಪಿ ಪ್ರದೀಪ್ ಖಾರ್ವಿಯು ಆತನ ಬಳಿಯಲ್ಲಿದ್ದ ಸುಳ್ಳು ಸಿಡಿಯನ್ನು ಉಪಯೋಗಿಸಿ ಮಾನ ಮರ್ಯಾದೆಯನ್ನು ತೆಗೆಯಬಹುದು ಮತ್ತು ತನ್ನ ಮಗನಿಗೆ ಅಪಾಯ ತಂದೊಡ್ಡಬಹುದು ಎಂದು ಹೆದರಿದ ಅಣ್ಣಪ್ಪ ಖಾರ್ವಿ ಒಂದೂವರೇ ಲಕ್ಷ ಹಣ ನೀಡಲು ಒಪ್ಪಿಕೊಂಡಿದ್ದರು. ಆದರೆ ಬಳಿಕ ಪೊಲೀಸರಿಗೂ ಬೆದರಿಕೆ ಕರೆ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದರು.

    ಮಾತಿನಂತೆ ಹಣ ನೀಡಲು ಬರುವ ಅಣ್ಣಪ್ಪ ಖಾರ್ವಿಯವರಿಗೆ ವಿಡಿಯೋ ಸಿಡಿ ನೀಡಲು ಕುಂದಾಪುರಕ್ಕೆ ಬಂದಿದ್ದ ಯುವಕನೋರ್ವ ಪೊಲೀಸ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ. ಪೊಲೀಸರು ಆತನನ್ನು ವಿಚಾರಣೆ ನಡೆಸಿದಾಗ ಈ ಸಂಚಿನ ಮುಖ್ಯ ರೂವಾರಿ ಪ್ರದೀಪ್ ಖಾರ್ವಿ ಮಣಿಪಾಲದಲ್ಲಿ ಇರುವುದು ತಿಳಿದುಬಂತು. ಕೂಡಲೇ ಸಿಸಿಬಿ ಪೊಲೀಸರು ಮಣಿಪಾಲದಲ್ಲಿದ್ದ ಆರೋಪಿ ಪ್ರದೀಪನನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕಾರನ್ನೂ ವಶಪಡಿಸಿಕೊಂಡಿದ್ದಾರೆ.

    ತನ್ನ ಸ್ವಂತ ಅಳಿಯನ ಈ ಕೃತ್ಯವನ್ನು ಕಂಡು ಮಾವ ಅಣ್ಣಪ್ಪ ಖಾರ್ವಿ ದಂಗಾಗಿ ಹೋಗಿದ್ದಾರೆ. ಮಾವ ತನಗೆ ಹಣ ನೀಡಲು ಸತಾಯಿಸುತ್ತಿದ್ದರು ಆದ್ದರಿಂದ ಈ ರೀತಿ ಮಾಡಬೇಕಾಯಿತು ಎಂದು ಅಳಿಯ ಪ್ರದೀಪ ಹೇಳಿಕೊಂಡಿದ್ದಾನೆ. ಈತನ ಬಗ್ಗೆ ಹಲವು ಬಾರಿ ಕಳ್ಳತನ, ಮೋಸದ ಆರೋಪಗಳು ಈ ಹಿಂದೆ ಕೇಳಿಬಂದಿದ್ದವು. ಒಂದು ಪ್ರಕರಣದಲ್ಲಿ ಅಣ್ಣಪ್ಪ ಖಾರ್ವಿಯೇ ಈತನನ್ನು ಪೊಲೀಸರಿಂದ ರಾಜಿ ಮಾಡಿಸಿದ್ದರೆನ್ನಲಾಗಿದೆ. ಸುವರ್ಣ ನ್ಯೂಸ್ ಹೆಸರು ಹೇಳಿಕೊಂಡಿದ್ದರಿಂದ ವಿಷಯ ಹೇಗೋ ವಾಹಿನಿಯ ಬೆಂಗಳೂರಿನ ಕಛೇರಿಗೆ ತಲುಪಿ, ಉಡುಪಿಯಲ್ಲಿನ ಅಸಲಿ ವರದಿಗಾರ ಬರುವಂತಾಗಿತ್ತು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d