Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರವಾರ-ಬೆಂಗಳೂರು ರೈಲು ವೇಗ ಹೆಚ್ಚಳಕ್ಕೆ ಸಿಪಿಎಂ ಆಗ್ರಹ
    ಕುಂದಾಪ್ರದ್ ಸುದ್ಧಿ

    ಕಾರವಾರ-ಬೆಂಗಳೂರು ರೈಲು ವೇಗ ಹೆಚ್ಚಳಕ್ಕೆ ಸಿಪಿಎಂ ಆಗ್ರಹ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಕಾರವಾರ-ಬೆಂಗಳೂರು ರೈಲಿನ ವೇಗ ಹೆಚ್ಚಿಸುವಂತೆ ಹಾಗೂ ರಾತ್ರಿ ಪ್ರಯಾಣದ ರೈಲು ಸಂಖ್ಯೆ ಹೆಚ್ಚಿಸುವಂತೆ ಆಗ್ರಹಿಸಿ ಸಿಪಿಎಂ (ಐ) ಉಡುಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕುಂದಾಪುರದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನವನ್ನು ಮಾಜಿ ಶಾಸಕ ಹಾಗೂ ಸಿಪಿಎಂ (ಐ) ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಉದ್ಘಾಟಿಸಿದರು.

    Click Here

    Call us

    Click Here

    ಮಾರ್ಚ್‌ 15ರಿಂದ ಬೆಂಗಳೂರು-ಹಾಸನ ರೈಲುದಾರಿಯ 110 ಕಿ.ಮೀ.ನಲ್ಲಿ ಜೋಡಿ ರೈಲು ಹಾಕುವ ಮೂಲಕ ಕನಿಷ್ಠ ಎರಡು ಗಂಟೆ ಪ್ರಯಾಣ ಉಳಿತಾಯವಾಗುತ್ತದೆ ಎಂದು ವಿಭಾಗೀಯ ರೈಲ್ವೆ ಅಧಿಕಾರಿಗಳು ಹೇಳಿಕೆ ನೀಡಿದ್ದರೂ ಈವರೆಗೆ ಯಾಕೆ ಜಾರಿಯಾಗಿಲ್ಲ ಎಂದು ಪ್ರಶ್ನಿಸಿದ ಅವರು, ಉಡುಪಿ ಹಾಗೂ ಬೆಂಗಳೂರು ನಡುವೆ ಸಂಚರಿಸುವ ರೈಲು 15 ಗಂಟೆ ಯಾಕೆ ಸುತ್ತಬೇಕು. ಕಳೆದ ಬಜೆಟ್‌ನಲ್ಲಿ ಅಂದು ರೈಲ್ವೇ ಮಂತ್ರಿಯಾಗಿದ್ದ ಸದಾನಂದ ಗೌಡರು ಮಂಗಳೂರು-ಬೆಂಗಳೂರು ನಡುವೆ ಹೊಸ ರೈಲಿನ ಓಡಾಟ ಪ್ರಕಟಿಸಿದ್ದರೂ ಅದು ಹಗಲು ಸಂಚರಿಸುವುದರಿಂದ ಜಿಲ್ಲೆಗೆ ಹೆಚ್ಚಿನ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಈಗ ಚಲಿಸುತ್ತಿರುವ ರೈಲಿನ ವೇಗವನ್ನು ಹೆಚ್ಚಿಸಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಹಾಗೂ ರಾತ್ರಿ ಪ್ರಯಾಣದ ಇನ್ನೊಂದು ರೈಲು ಆರಂಭಿಸಬೇಕು ಎಂದು ಆಗ್ರಹಿಸಿದರು.

    ಈ ರೈಲು ಸಂಚಾರದ ಅವ್ಯವಸ್ಥೆಯ ಲಾಭವನ್ನು ಖಾಸಗಿ ಬಸ್ಸುಗಳು ಪಡೆದುಕೊಳ್ಳುವ ಮೂಲಕ ಜನರಿಗೆ ದುಬಾರಿ ದರದ ಉಡುಗೊರೆ ನೀಡುತ್ತಿದ್ದಾರೆ. ಆದ್ದರಿಂದ ಈ ಬೇಡಿಕೆ ಈಡೇರಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.

    ಈ ಸಂದರ್ಭ ಸಿಪಿಎಂ (ಐ) ಉಡುಪಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಸಿಪಿಎಂ ಮುಖಂಡರಾದ ಕೆ. ಶಂಕರ್‌, ಕುಂದಾಪುರ ವಲಯ ಕಾರ್ಯದರ್ಶಿ ಎಚ್‌. ನರಸಿಂಹ, ಬೈಂದೂರು ವಲಯ ಕಾರ್ಯದರ್ಶಿ ಸುರೇಶ್‌ ಕಲ್ಲಾಗರ, ದಾಸ ಭಂಡಾರಿ, ಮಹಾಬಲ ವಡೇರಹೋಬಳಿ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    thirteen + 18 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.