Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆಲಸ ನೀಡುವುದಾಗಿ ಹೇಳಿ ಮಹಿಳೆಗೆ ವಂಚನೆ
    ಅಪಘಾತ-ಅಪರಾಧ ಸುದ್ದಿ

    ಕೆಲಸ ನೀಡುವುದಾಗಿ ಹೇಳಿ ಮಹಿಳೆಗೆ ವಂಚನೆ

    Updated:10/07/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಅರಣ್ಯ ಇಲಾಖೆಯ ಹಾಗೂ ಕೇಂದ್ರ ಸರಕಾದ ಹೆಸರಿನಲ್ಲಿ ಸುಳ್ಳು ದಾಖಲೆ ಹಾಗೂ ಮೊಹರು ಹಾಗೂ ವೆಬ್ಸೈಟ್ ಸೃಷ್ಟಿಸಿ ಸುಳ್ಳು ಉದ್ಯೋಗ ಮಾಹಿತಿಯನ್ನು ನೀಡಿ ಮಹಿಳೆಯೋರ್ವರನ್ನು ವಂಚಿಸಿದ ಘಟನೆ ಬೈಂದೂರಿನ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಿರಿಮಂಜೇಶ್ವರ ನಿವಾಸಿ ನಾಗರತ್ನ ವಂಚನೆಗೊಳಗಾದ ಮಹಿಳೆ.

    Click Here

    Call us

    Click Here

    ಘಟನೆಯ ವಿವರ:
    ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡಲು ಪುರುಷ/ಮಹಿಳೆಯರು ಬೇಕಾಗಿದ್ದಾರೆ ಎಂಬುದಾಗಿ ಪತ್ರಿಕೆಯಲ್ಲಿ ಜಾಹಿರಾತನ್ನು ನೀಡಿದ್ದರು. ಜಾಹೀರಾತಿನಲ್ಲಿರುವ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಂಡ ನಾಗರತ್ನ ನೇಮಕಾತಿಗೆ ತರಬೇತಿಗಾಗಿ ಹಾಗೂ ವಿಮೆಗಾಗಿ ಸತತ ಹಣವನ್ನು ಜಮೆ ಮಾಡಿದ್ದು ಕೊನೆಯಲ್ಲಿ ಅನುಮಾನ ಬಂದು ಇಲಾಖೆಯಲ್ಲಿ ಈ ವಂಚನೆ ವಿಷಯ ಬೆಳಕಿಗೆ ಬಂದಿದೆ.

    ನಾಗರತ್ನ ಅವರು ಗೌತಮ್‌ ಕುಮಾರ್‌ ಎನ್ನುವವನ ಖಾತೆಗೆ ರೂ. 2ಸಾವಿರ ಹಣವನ್ನು ಜಮೆ ಮಾಡಿದ ಬಳಿಕ ನೇಮಕಾತಿ ಪತ್ರ ಅಂಚೆ ಮೂಲಕ ಬಂದಿದ್ದು 7 ದಿನಗಳ ತರಬೇತಿ ಇರುತ್ತದೆ ಎಂದು ನಮೂದು ಮಾಡಲಾಗಿತ್ತು. ನಂತರ ಕರೆಮಾಡಿದ ಆಕೆಗೆ ವಿಚಾರಿಸಿದಾಗ ತರಬೇತಿ ಸಮಯದಲ್ಲಿ ಮೊಬೈಲ್‌ , ಲ್ಯಾಪ್‌ಟಾಪ್‌ ಇತ್ಯಾದಿ ವಸ್ತುಗಳನ್ನು ನೀಡಲು ಇರುವುದರಿಂದ ಜಾಮೀನು ನೀಡಲು 19,500ಧಿ ರೂ. ಖಾತೆಗೆ ಜಮೆ ಮಾಡಬೇಕು, ತರಬೇತಿ ಮುಗಿದ ಬಳಿಕ ಹಣವನ್ನು ವಾಪಾಸ್ಸು ನೀಡುವುದಾಗಿ ತಿಳಿಸಿದ್ದರು. ಅದರಂತೆ ಆಕೆ ಖಾತೆಗೆ ಹಣ ಜಮೆ ಮಾಡಿರುತ್ತಾರೆ. ನಂತರ ವಿಮೆಗೆ ಎಂದು 20,500 ರೂ. ಹಣವನ್ನು ಮತ್ತೆ ಖಾತೆಗೆ ಜಮೆ ಮಾಡಿದ್ದರು. ಈ ಬಗ್ಗೆ ಹಣವನ್ನು ಸ್ವೀಕರಿಸಿದ ಬಗ್ಗೆ ದಾಖಲಾತಿಯನ್ನೂ ಈ ಮೈಲ್‌ ಮೂಲಕ ಕಳುಹಿಸಿದ್ದರು. ನಂತರ ಕೆಲಸ ಕೊಡಬೇಕಾದರೆ 60ಸಾವಿರ ರೂ.ಕಟ್ಟಬೇಕಾಗುತ್ತದೆ ಎಂದು ತಿಳಿಸಿದಾಗ ಅನುಮಾನಗೊಂಡ ನಾಗರತ್ನ ಅವರು ಬೈಂದೂರಿನ ಅರಣ್ಯ ಇಲಾಖೆಯಲ್ಲಿ ಈ ಬಗ್ಗೆ ವಿಚಾರಿಸಿದ್ದರು. ಆಗ ಆರೋಪಿಗಳು ನೀಡಿದ ನೇಮಾಕಾತಿ ಪತ್ರ ಸುಳ್ಳು ಎಂಬುದಾಗಿ ತಿಳಿದು ಬಂದಿದೆ.

    ವಂಚನೆ ಮಾಡಿದ ಆರೋಪಿಗಳಾದ ಗೌತಮ್‌ ಕುಮಾರ್‌ ಹಾಗೂ ಪವನ್‌ ಕುಮಾರ್‌ ಅವರ ವಿರುದ್ಧ ವಂಚನೆಗೊಳಗಾದ ನಾಗರತ್ನ ಬೈಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Byndoor
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಖಂಬದಕೋಣೆ ಸೊಸೈಟಿ: ನಿವೃತ್ತ ಶಾಖಾ ವ್ಯವಸ್ಥಾಪಕರಿಗೆ ಬೀಳ್ಕೊಡುಗೆ, ಸನ್ಮಾನ

    20/05/2026

    ಮಕ್ಕಳಿಗೆ ಪೋಷಕರೇ ಮಾದರಿ – ಪ್ರಾಶಸ್ತನ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸುನಿಲ್ ಹೆಚ್. ಜಿ

    17/04/2026

    ಎ.19ರಂದು ಹಳಗೇರಿ ಶ್ರೀ ಕೊಕ್ಕೇಶ್ವರ ವನದುರ್ಗಾ ದೇವಾಸ್ಥಾನದ ವರ್ಧಂತ್ಯುತ್ಸವ

    16/04/2026
    Leave A Reply Cancel Reply

    seven − 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.