Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕು ಆಸ್ಪತ್ರೆ ಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ. ಸೇವೆಗಳು ಕೋಟಕ್ಕೆ ಶಿಫ್ಟ್: ಡಿಸಿ
    ಊರ್ಮನೆ ಸಮಾಚಾರ

    ಕುಂದಾಪುರ ತಾಲೂಕು ಆಸ್ಪತ್ರೆ ಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ. ಸೇವೆಗಳು ಕೋಟಕ್ಕೆ ಶಿಫ್ಟ್: ಡಿಸಿ

    Updated:02/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ಭಾಗದಲ್ಲಿ ಕೋವಿಡ್ ಪಾಸಿಟಿವ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗುತ್ತಿದೆ. ಆಸ್ಪತ್ರೆಯ ಸೇವೆಗಳನ್ನು ತ್ಕಾಲಿಕವಾಗಿ ಕೋಟ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಹಳೆಯ ವಿನಯ ಆಸ್ಪತ್ರೆಯಲ್ಲಿ ಒಪಿಡಿಯನ್ನು ಆರಂಭಿಸುತ್ತಿದ್ದು, ಗರ್ಭಿಣಿಯರು ಹಾಗೂ ಬಾಣಂತಿರಯನ್ನು ಕೋಟ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

    Click Here

    Call us

    Click Here

     

    ಅವರು ಮಂಗಳವಾರ ಕುಂದಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಮಾತನಾಡಿ, ಕಳೆದ ಎರಡು ದಿನಗಳಲ್ಲಿ ಬಾಕಿ ಇದ್ದ 3000 ವರದಿಗಳು ಬಂದಿದ್ದು, ಹಾಗಾಗಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಿದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 400 ಬೆಡ್ ಆಸ್ಪತ್ರೆಯನ್ನು ಮಾಡಲು ಯೋಜಿಸಲಾಗಿದೆ. ಕುಂದಾಪುರದಲ್ಲಿ ಈಗಾಗಲೇ 120 ಬೆಡ್ ಕೋವಿಡ್ ಆಸ್ಪತ್ರೆಯಿದ್ದು, ಅದನ್ನು ಪೂರ್ಣಪ್ರಮಾಣದಲ್ಲಿ ಕೋವಿಡ್ ಆಸ್ಪತ್ರೆ ಮಾಡಲಾಗುವುದು. ಆದರ್ಶ ಆಸ್ಪತ್ರೆಯಲ್ಲಿ 65 ಬೆಡ್ ಇದೆ. ಬೈಂದೂರು ತಾಲೂಕಿನಲ್ಲಿಯೂ ಹೆಚ್ಚಿನ ಪ್ರಕರಣ ವರದಿಯಾಗುತ್ತಿರುವುದರಿಂದ ಕೊಲ್ಲೂರು ಲಲಿತಾಂಬಿಕಾ ಗೆಸ್ಟ್ ಹೌಸನ್ನು ಕೋವಿಡ್ ಆಸ್ಪತ್ರೆಯಾಗಿ ಮಾಡಲಾಗುತ್ತಿದೆ. ಕೋರೋನಾ ಲಕ್ಷಣಗಳನ್ನು ಇಲ್ಲದೇ ಪಾಸಿಟಿವ್ ಬರುವವರನ್ನು ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

    ಹೋಂ ಕ್ವಾರಂಟೈನ್ ಇರುವವರು ಎಲ್ಲೆಂದರಲ್ಲಿ ತಿರುಗಾಡಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಲಾಗುತ್ತದೆ. ವರದಿ ನೆಗೆಟಿವ್ ಬರುವ ತನಕವೂ ಅವರು ಹಾಗೂ ಅವರ ಮನೆಯವರು ಜಾಗೃತಿಯಿಂದ ಇರಬೇಕು. ಇಲ್ಲದಿದ್ದರೆ ಪ್ರಾಥಮಿಕ ಸಂಪರ್ಕ ಹುಡುಕುವುದು ಕಷ್ಟವಾಗುತ್ತದೆ ಎಂದಿವರು ಅವರು ಕೋವಿಡ್ ಸಮುದಾಯಕ್ಕೆ ಹರಡಬಾರದು ಎಂಬ ಉದ್ದೇಶದಿಂದ ಕಂಟೈನ್’ಮೆಂಟ್ ಝೋನ್ ಮಾಡಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದಿದ್ದಾರೆ.

    ಪಾಸಿಟಿವ್ ಹೆಚ್ಚಿಗೆ ಬರುವುದು ನಿರೀಕ್ಷಿತ: ಹಾಲಾಡಿ
    ಜಿಲ್ಲೆಯಲ್ಲಿ ಹೆಚ್ಚಿನ ಕೊರೋನಾ ಪಾಸಿಟಿವ್ ಬರುವ ನಿರೀಕ್ಷೆ ಮೊದಲೇ ಇತ್ತು. ಹಾಗಾಗಿ ಅದಕ್ಕೆ ಅಗತ್ಯವಾದ ತಯಾರಿಯನ್ನು ಮಾಡಿಕೊಳ್ಳಲಾಗಿತ್ತು. ಸರಕಾರ ಐಸಿಎಂಆರ್ ನಿರ್ದೇಶನದಂತೆ ಕ್ವಾರಂಟೈನ್ ಅವಧಿ ಕಡಿಮೆಗೊಳಿಸಿದೆ. ಅದರಂತೆ ಸರಕಾರಿ ಕ್ವಾರಂಟೈನ್ ಇದ್ದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದರಿಗೆ ಚಿಕಿತ್ಸೆ ನೀಡಲು ಎಲ್ಲಾ ತಯಾರಿಯನ್ನು ಜಿಲ್ಲಾಡಳಿತ ಮಾಡಲಿದೆ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.

    Click here

    Click here

    Click here

    Call us

    Call us

    ಇದನ್ನೂ ಓದಿ:
    ► ಹೆಚ್ಚುತ್ತಿರುವ ಕೊರೋನಾ ಸೋಂಕು, ಆತಂಕ. ಜಿಲ್ಲಾಡಳಿತದ ಕೈಮೀರುತ್ತಿದೆಯೇ ಕೊರೋನಾ ನಿಯಂತ್ರಣ? – https://kundapraa.com/?p=38142 .
    ► ಕೊರೋನಾ ಮಹಾಸ್ಪೋಟ: ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 210 ಪಾಸಿಟಿವ್? – https://kundapraa.com/?p=38160 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.