Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋವಿಡ್ ಪ್ರಕರಣ ನಿಭಾಯಿಸುವಲ್ಲಿ ಬೈಂದೂರು ತಾಲೂಕಿನಲ್ಲಿ ನಿರ್ಲಕ್ಷ್ಯ ಧೊರಣೆ: ಬ್ಲಾಕ್ ಕಾಂಗ್ರೆಸ್ ನಿಯೋಗ ಖಂಡನೆ
    ಊರ್ಮನೆ ಸಮಾಚಾರ

    ಕೋವಿಡ್ ಪ್ರಕರಣ ನಿಭಾಯಿಸುವಲ್ಲಿ ಬೈಂದೂರು ತಾಲೂಕಿನಲ್ಲಿ ನಿರ್ಲಕ್ಷ್ಯ ಧೊರಣೆ: ಬ್ಲಾಕ್ ಕಾಂಗ್ರೆಸ್ ನಿಯೋಗ ಖಂಡನೆ

    Updated:04/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ತಾಲೂಕಿನಲ್ಲಿ ಕೋವಿಡ್-19 ಪ್ರಕರಣಗಳನ್ನು ನಿಭಾಯಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, ಇಲಾಖೆಗಳ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿರುವುದಲ್ಲದೇ, ಆತಂಕದ ನಡುವೆ ಬದುಕುವಂತಾಗಿದೆ ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ನಿಯೋಗ ಆರೋಪಿಸಿದೆ.

    Click Here

    Call us

    Click Here

    ಗುರುವಾರ ಬೈಂದೂರು ತಹಶೀಲ್ದಾರ್ ಬಸಪ್ಪ ಪಿ. ಪೂಜಾರ್ ಅವರನ್ನು ಭೇಟಿ ಮಾಡಿ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಆಗುತ್ತಿರುವ ಗೊಂದಲಗಳ ಬಗ್ಗೆ ಮನವರಿಕೆ ಮಾಡಿತು.

    ಈ ಸಂದರ್ಭ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸುವ ರೀತಿಯೇ ಗೊಂದಲಮಯವಾಗಿದೆ. ಕೋವಿಡ್ ವರದಿಯಲ್ಲಿ ನೆಗೆಟಿವ್ ಬಂದವರ ಮಾಹಿತಿಯನ್ನು ಅವರಿಗೆ ತಿಳಿಸುತ್ತಿಲ್ಲ. ಪಾಟಿಸಿವ್ ಬಂದಿರುವ ಬಗ್ಗೆ ತಿಳಿಸಿದ ಮೇಲೆ ಕೂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ೨-೩ ದಿನ ತೆಗೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಪಾಸಿಟಿವ್ ಬಂದವರ ಮನೆಗೆ ತೆರಳಿ ಕರೆದೊಯ್ಯುವ ಬದಲಿಗೆ ಹೈವೆಗೆ ಬಂದು ನಿಂತುಕೊಳ್ಳುವಂತೆ ಹೇಳಲಾಗುತ್ತಿದೆ. ಆರೋಗ್ಯ ಇಲಾಖೆಯ ಈ ನಿರ್ಧಾರ ಕ್ರೂರವಾದದ್ದು ಎಂದ ಅವರು, ಪಾಸಿಟಿವ್ ಬಂದವರ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್‌ಡೌನ್ ಮಾಡಬೇಕು ಎಂಬ ನಿಯಮವಿದ್ದರೂ ವಿಳಂಬ ನೀತಿ ಅನುಸರಿಸುತ್ತಿದ್ದು, ಇಡೀ ಪರಿಸರ ಆತಂಕಕ್ಕೆ ಒಳಗಾಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

    ಮುಂಬೈ ಹಾಗೂ ಹೊರರಾಜ್ಯಗಳಿಂದ ಬರುವವರಿಗೆ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು. ಅಗತ್ಯಬಿದ್ದರೆ ಸಂಘ ಸಂಸ್ಥೆಗಳ ಮೂಲಕ ನೆರವು ನೀಡಲು ನಾವು ಸಿದ್ದರಿದ್ದೇವೆ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Call us

    Call us

    ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ ಲಾಕ್‌ಡೌನ್ ಆರಂಭದ ಸಂದರ್ಭ ಎಲ್ಲಾ ಇಲಾಖೆಗಳ ನಡುವೆ ಸಮನ್ವಯತೆ ಇತ್ತು. ಆದರೆ ಬರಬರುತ್ತಾ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದ್ದೆ. ಪಾಸಿಟಿವ್ ಬರುವವರನ್ನು ಲಘುವಾಗಿ ಪರಿಗಣಿಸಿ ಇಡಿ ಪರಿಸರ ಜನರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಲಾಗುತ್ತಿದೆ. ಕೆಲವೆಡೆ ಗರ್ಭೀಣಿಯರ ಕೋವಿಡ್ ಟೆಸ್ಟ್ ವರದಿ ಈವರೆಗೆ ದೊರೆಯದೇ ಇರುವುದರಿಂದ ಅವರು ಮೆಡಿಕಲ್ ಚೆಕಪ್‌ಗಾಗಿ ಆಸ್ಪತ್ರೆಗೆ ತೆರಳಲು ತೊಂದರೆಯಾಗುತ್ತಿದೆ. ಗಂಭೀರ ಆರೋಗ್ಯ ಸಮಸ್ಯೆ ಉಳ್ಳವರಿಗೂ ಕೋವಿಡ್ ಟೆಸ್ಟ್ ವರದಿ ಬರುವುದು ಬಾಕಿ ಇರುವುದರಿಂದ ಅವರ ಚಿಕಿತ್ಸೆಗೂ ತೊಂದರೆಯಾಗಿದೆ. ವರದಿ ವಿಳಂಬ ಕಾರಣದಿಂದ ಬೇರೆ ಆರೋಗ್ಯ ಸಮಸ್ಯೆ ಉಲ್ಭಣಿಸಿದರೆ ಇದಕ್ಕೆ ಹೊಣೆ ಯಾರು ಎಂದವರು ಪ್ರಶ್ನಿಸಿದರು.

    ಈ ಬಗ್ಗೆ ಬೈಂದೂರು ತಹಶೀಲ್ದಾರ್ ಪ್ರತಿಕ್ರಿಯಿಸಿ ಕ್ವಾರಂಟೈನಿನಲ್ಲಿ ಇರುವ ಕೆಲವರು ಮೊಬೈಲ್ ಸಂಖ್ಯೆ ತಪ್ಪಾಗಿ ನೀಡಿರುವುದರಿಂದ ಅವರಿಗೆ ನೆಗಿಟಿವ್ ಇರುವುದು ತಿಳಿಸಲಾಗುತ್ತಿಲ್ಲ. ಮುಂಬೈನಿಂದ ಬರುವವರಿಗೆ ಗ್ರಾಮ ಮಟ್ಟದಲ್ಲಿಯೇ ಏಳು ಕ್ವಾರಂಟೈನ್ ಮಾಡಿ ಅಲ್ಲಿಯೇ ಊಟ-ತಿಂಡಿ ವ್ಯವಸ್ಥೆ ಮಾಡುವ ನಿರ್ಣಯ ತೆಗೆದುಕೊಳ್ಳಲಾಗಿದೆ. ಆರೋಗ್ಯ ಇಲಾಖೆ ಪಾಸಿಟಿವ್ ಇರುವ ವ್ಯಕ್ತಿಗಳನ್ನು ಗುರುತಿಸಿ ಮಾಹಿತಿ ನೀಡಿದರೆ ಮಾತ್ರ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಅಲ್ಲಿಗೆ ತೆರಳಿ ಸೀಲ್‌ಡೌನ್ ಮಾಡುತ್ತಾರೆ. ಕೆಲವೆಡೆ ವಿಳಂಬವಾಗಿದೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಒಂದು ವಾರದೊಳಗೆ ಗೊಂದಲಗಳಿಗೆ ತೆರೆ ಎಳೆಯದಿದ್ದರೆ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ನಿಯೋಗ ತಿಳಿಸಿದೆ.

    ಈ ಸಂದರ್ಭ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಾದ ಮೋಹನ ಪೂಜಾರಿ ಉಪ್ಪುಂದ, ನಾಗರಾಜ ಗಾಣಿಗ ಬಂಕೇಶ್ವರ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಉಪ್ಪುಂದ ಇದ್ದರು.

    ಇದನ್ನೂ ಓದಿ:
    ► ಕ್ವಾರಂಟೈನ್ ಸಮಯದಲ್ಲಿ ತಪ್ಪು ವಿಳಾಸ ನೀಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38242 .
    ► ಉಡುಪಿ ಜಿಲ್ಲೆ: ಬುಧವಾರ 62 ಕೊರೋನಾ ಪಾಸಿಟಿವ್ – https://kundapraa.com/?p=38228 .
    ► ಉಡುಪಿ ಜಿಲ್ಲೆಯಲ್ಲಿ ಶೀಘ್ರ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್: ಡಾ. ಸುಧಾಕರ್ – https://kundapraa.com/?p=38214 .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.