Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂ 8ರಿಂದ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನಕ್ಕೆ ಅವಕಾಶ, ದರ್ಶನಕ್ಕೆ ಸಮಯ ನಿಗದಿ
    ಊರ್ಮನೆ ಸಮಾಚಾರ

    ಜೂ 8ರಿಂದ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನಕ್ಕೆ ಅವಕಾಶ, ದರ್ಶನಕ್ಕೆ ಸಮಯ ನಿಗದಿ

    Updated:07/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸೋಮವಾರದಿಂದ ರಾಜ್ಯಾದ್ಯಂತ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿಯೂ ಸೋಮವಾರದಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲು ಭರದ ಸಿದ್ಧತೆಗಳು ನಡೆಯುತ್ತಿದೆ.

    Click Here

    Call us

    Click Here

    ನಾಳೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದ್ದು, ಬೆಳಿಗ್ಗೆ 5 ಗಂಟೆಗೆ ಬಾಗಿಲು ತೆರೆಯಲಿದೆ. ಬೆಳಿಗ್ಗೆ 5:30ರಿಂದ 7:30ರ ತನಕ ಭಕ್ತಾದಿಗಳಿಗೆ ಮೊದಲ ಹಂತದಲ್ಲಿ ದರ್ಶನಕ್ಕೆ ವ್ಯವಸ್ಥೆ, ಮತ್ತೆ ಬೆಳಿಗ್ಗೆ 10:30ರಿಂದ 1:30 ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯ ತನಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    ಸರ್ಕಾರ ಹಾಗೂ ಜಿಲ್ಲಾಡಳಿತ ಸೂಚಿಸಿರುವ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲು ನೌಕರರು ಹಾಗೂ ಹೊರ ಗುತ್ತಿಗೆ ಯವರಿಗೆ ತರಬೇತಿ ನೀಡಲಾಗಿದೆ. ದೇವಸ್ಥಾನ ಪ್ರವೇಶ ಮಾಡುವ ಮೊದಲು ಕೈ ಕಾಲು ತೊಳೆದು ಬಳಿಕ ಭಕ್ತರು ಸ್ಯಾನಿಟೈಸ್ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ. ದೇವಳದ ಎದುರಿನ ಮುಖ್ಯದ್ವಾರದಿಂದ ಒಳ ಪ್ರವೇಶಿಸಿ, ಆನೆ ಬಾಗಿಲಿನ ಮೂಲಕ ಹೊರಕ್ಕೆ ತೆರಳಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದೇವಳದ ಬಲಿಪೀಠದ ಎದುರು ನಿಂತು ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಳಕ್ಕೆ ಪ್ರವೇಶಿಸಲು ಅವಕಾಶವಿಲ್ಲ. ದೇವಳದಲ್ಲಿ ಯಾವುದೇ ಪೂಜೆ ಹಾಗೂ ಸಂಕಲ್ಪಗಳಿಗೆ ಅವಕಾಶವಿಲ್ಲ. ಸೇವೆ ಮಾಡಬಯಸುವವರು ಹಣ ಪಾವತಿ ಮಾಡಿದಲ್ಲಿ ಆನ್ ಲೈನ್ ಸೇವಾದಾರರಿಗೆ ಕಳುಹಿಸುವಂತೆ ಅಂಚೆ ಮೂಲಕ ಕುಂಕುಮ ಪ್ರಸಾದ ಕಳುಹಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

    ► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 .

    Click here

    Click here

    Click here

    Call us

    Call us

    • ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನಿಗದಿಪಡಿಸಿದ ಸಮಯದಲ್ಲಿ ದರ್ಶನ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಧ್ವನಿ ವರ್ಧಕದ ಮೂಲಕ ಭಕ್ತರನ್ನು ಎಚ್ಚರಿಸಲಾಗುವುದು. ಹಂತ ಹಂತವಾಗಿ ಅನ್ನದಾನಕ್ಕೆ ವ್ಯವಸ್ಥೆ ಮಾಡಲಾಗುವುದು. – ಅರವಿಂದ ಸುತ್ತಗುಂಡಿ, ದೇವಳದ ಕಾರ್ಯನಿರ್ವಹಣಾಧಿಕಾರಿ
    • ಇಷ್ಟು ದಿನ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಜು.8ರಿಂದ ಅವಕಾಶವಿದ್ದು ದೇವಸ್ಥಾನ ತೆರೆಯುವ ಕಾರಣಕ್ಕೆ ಭಕ್ತರು ಒಮ್ಮೆಲೆ ಮುಗಿಬೀಳಬಾರದು. ದಿನವೂ ದರ್ಶನಕ್ಕೆ ಅವಕಾಶವಿರುವುದರಿಂದ ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರ ಪಾಲಿಸಿ ದೇವಳಕ್ಕೆ ತೆರಳಬೇಕು ಸರಕಾರದ ನಿರ್ದೇಶನಗಳನ್ನು ಪಾಲಿಸಿ ಎಚ್ಚರದಿಂದಿರುವುದು ಅಗತ್ಯ. – ಬಿ. ಎಂ. ಸುಕುಮಾರ ಶೆಟ್ಟಿ, ಶಾಸಕರು, ಬೈಂದೂರು ವಿಧಾನಸಭಾ ಕ್ಷೇತ್ರ

    ಇದನ್ನೂ ಓದಿ:
    ► ಉಡುಪಿ ಜಿಲ್ಲೆ: ಭಾನುವಾರ 13 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38382 .
    ► ಕೋವಿಡ್-19 ಚಿಕಿತ್ಸೆಗೆ ಜಿಲ್ಲಾಡಳಿತ ಹಣ ಪಡೆಯುತ್ತಿದೆ ಎಂದು ಆರೋಪಿಸಿದ್ದವನ ಬಂಧನ – https://kundapraa.com/?p=38373 .
    ► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 .
    ► ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್ – https://kundapraa.com/?p=38333 .
    ► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.