Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೂಕ್ಷ್ಮ ಶಿಲಾಯುಗ ಸಂಸ್ಕೃತಿಯ ಕಲ್ಲಿನಾಯುಧಗಳು ಪತ್ತೆ
    ಊರ್ಮನೆ ಸಮಾಚಾರ

    ಸೂಕ್ಷ್ಮ ಶಿಲಾಯುಗ ಸಂಸ್ಕೃತಿಯ ಕಲ್ಲಿನಾಯುಧಗಳು ಪತ್ತೆ

    Updated:08/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ಇಡೂರು – ಕುಂಜಾಡಿ ಸಮೀಪದ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದ ಒಳಭಾಗದಲ್ಲಿರುವ ಒಂದು ದೊಡ್ಡ ಪಾರೆಯಲ್ಲಿ ಭಾನುವಾರ ದೊರೆತ ಸೂಕ್ಷ್ಮ ಶಿಲಾಯುಗ ಸಂಸ್ಕೃತಿಯ ಕಲ್ಲಿನಾಯುಧಗಳು ಪತ್ತೆಯಾಗಿದೆ. ಇತಿಹಾಸ ಸಂಶೋಧಕ ಟಿ. ಮುರುಗೇಶ್ ಇವುಗಳನ್ನು ಪತ್ತೆಹಚ್ಚಿದ್ದಾರೆ.

    Click Here

    Call us

    Click Here

    ಈ ಆಯುಧೋಪಕರಣಗಳಲ್ಲಿ, ಕೊರೆಯುಳಿಗಳು, ಬ್ಲೇಡ್ ಗಳು, ಫ್ಲೂಟೆಡ್ ಕೋರ್ ಗಳು, ಹೆರೆಗತ್ತಿಗಳು ಹಾಗೂ ಬಾಣದ ಮೊನೆಗಳು ಕಂಡುಬಂದಿವೆ. ಇವು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮತ್ತು ಮಾಣಿಗಳಲ್ಲಿ ದೊರೆತ ಕಲ್ಲಿನಾಯುಧಗಳನ್ನು ಹೋಲುತ್ತವೆ. ಈ ನಿವೇಶನಕ್ಕೆ ಸಮೀಪದಲ್ಲಿಯೇ ಇರುವ ಅವಲಕ್ಕಿ ಪಾರೆಯಲ್ಲಿ ಆದಿಮ ಕಾಲದ ಕುಟ್ಟು ಚಿತ್ರಗಳು ಕಂಡು ಬಂದಿವೆ.

    ಕಾಡಿನ ಮಧ್ಯೆ ಇರುವ ಈ ಸಮತಟ್ಟಾದ ಬಯಲು ಪಾರೆಗಳು, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ, ಹಂದಿ ಮುಂತಾದ ಪ್ರಾಣಿಗಳ ಮೇವು ಹಾಗೂ ಆಹಾರದ ತಾಣಗಳಾಗಿದ್ದು, ಮಾನವನ ಬೇಟೆಗೆ ಪ್ರಶಸ್ತವಾದ ಜಾಗಗಳಾಗಿದ್ದವು. ಇಂದಿಗೂ ಈ ಎಲ್ಲಾ ಪ್ರಾಣಿಗಳು ಈ ಪರಿಸರದಲ್ಲಿವೆ. ಈ ಸಂಶೋಧನೆಯಲ್ಲಿ ಕೊಲ್ಲೂರಿನ ಮುರುಳೀಧರ ಹೆಗಡೆ ಅವರು ಸಹಕರಿಸಿದ್ದರು
    ಎಂದು ಸಂಶೋಧಕ ಟಿ. ಮುರುಗೇಶ್  ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    3 + fourteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.