Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶೈಕ್ಷಣಿಕ ವರ್ಷದಲ್ಲಿ ಸಿಲಬಸ್ ಕಡಿತಗೊಳಿಸಲು ಚಿಂತನೆ: ಸಚಿವ ಸುರೇಶ್ ಕುಮಾರ್
    ಉಡುಪಿ ಜಿಲ್ಲೆ

    ಶೈಕ್ಷಣಿಕ ವರ್ಷದಲ್ಲಿ ಸಿಲಬಸ್ ಕಡಿತಗೊಳಿಸಲು ಚಿಂತನೆ: ಸಚಿವ ಸುರೇಶ್ ಕುಮಾರ್

    Updated:09/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ: ಕೋವಿಡ್-19 ಕಾರಣದಿಂದ ಈ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವುದು ವಿಳಂಬವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪ್ರಸಕ್ತ ವರ್ಷದ ಶಾಲಾ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ತಿಳಿಸಿದರು.

    Click Here

    Call us

    Click Here

    ಅವರು ಮಂಗಳವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಉಡುಪಿ, ಉತ್ತರ ಕನ್ನಡ ಮತ್ತು ದ.ಕನ್ನಡ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಸಿಇಓ ಗಳು, ಡಿಡಿಪಿಐ ಗಳು ಮತ್ತು ಬಿಇಓ ಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಪೂರ್ವ ಸಿದ್ದತೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪ್ರಸಕ್ತ ಸಾಲಿನಲ್ಲಿ ಶಾಲಾ ಶೈಕ್ಷಣಿಕ ಅವಧಿ ಕಡಿಮೆಯಾಗಲಿದ್ದು, ಇದಕ್ಕಾಗಿ ಶಾಲಾ ಪಠ್ಯವನ್ನು ಕಡಿಮೆಗೊಳಿಸುವ ಕುರಿತಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳ ಮುಂದಿನ ತರಗತಿಗೆ ಅಗತ್ಯವಿರುವ ಪಠ್ಯದ ಕೊರತೆಯಾಗದಂತೆ , ಸೀಮಿತ ಅವಧಿಯೊಳಗೆ ಅತ್ಯಗತ್ಯ ಇರುವ ಪಠ್ಯ ಮಾತ್ರ ಒಳಗೊಳ್ಳುವಂತೆ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

    ಕೋವಿಡ್-19 ಅವಧಿಯಲ್ಲಿ ರಾಜ್ಯದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಚಂದನ ವಾಹಿನಿಯ ಮೂಲಕ ಪರೀಕ್ಷೆಗಾಗಿ ಪಠ್ಯದ ಪುರ್ನ ಮನನ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ರಾಜ್ಯದಲ್ಲಿ ಶಿಕ್ಷಣ ಇಲಾಖೆಗೆ ಸಂಬಂದಿಸಿದಂತೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಪತ್ಯೇಕ ಟಿವಿ ಚಾನೆಲ್ ಆರಂಭಿಸುವ ಚಿಂತನೆ ಇದ್ದು, ಈ ಕುರಿತಂತೆ ಕೇಂದ್ರ ಸಚಿವ ಅಜಿತ್ ಜಾವೆಡ್‌ಕರ್ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು.

    ಕೋವಿಡ್ ಅವಧಿಯಲ್ಲಿ ರಾಜ್ಯದ ಶಿಕ್ಷಕರು ಕಾನನ ಶಾಲೆ, ವಠಾರ ಶಾಲೆ, ಓಣಿ ಶಾಲೆ, ಓದಿನ ಮನೆ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಪಾಠ ಮಾಡಿದ್ದು, ಇದು ಶಿಕ್ಷಕರಲ್ಲಿನ ಸೃಜನ ಶೀಲತೆ, ಕತೃತ್ವ ಶಕ್ತಿ ಗುಣಗಳನ್ನು ತೋರಿಸುತತದೆ ಈ ಕುರಿತಂತೆ ಎಲ್ಲಾ ಶಿಕ್ಷಕರಿಗೆ ಧನ್ಯವಾದ ತಿಳಿಸುವುದಾಗಿ ಸಚಿವರು ಹೇಳಿದರು.

    Click here

    Click here

    Click here

    Click Here

    Call us

    Call us

    ರಾಜ್ಯದಲ್ಲಿ ಎಸ್.ಎಎಸ್.ಎಲ್.ಸಿ ಪರೀಕ್ಷೆ ನಡೆಸಲು ಸಂಬಂದಿಸಿದಂತೆ , ತೆಗೆದುಕೊಳ್ಳುವ ಮುಂಜಾಗ್ರತಾ ಕ್ರಮಗಳ ಕುರಿತು ಹೈಕೋರ್ಟ್ ಗೆ ಸಲ್ಲಿಸಿರುವ ವರದಿಯಂತೆ, ಥರ್ಮಲ್ ಸ್ಕ್ಯಾನರ್, ಮಾಸ್ಕ್, ಸ್ಯಾನಿಟೈಜರ್, ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷಾ ವಿಧಾನಗಳಿಗೆ ಯಾವುದೇ ಕುಂದು ಬಾರದ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಗರಿಷ್ಠ ಸುರಕ್ಷತೆಗೆ ಆದ್ಯತೆ ನೀಡಿದೆ, ಪರೀಕ್ಷೆ ಕುರಿತಂತೆ ಮಕ್ಕಳಿಗೆ ಹಿತಕರ ವಾತಾವರಣ ನಿರ್ಮಿಸಿ, ಯಾವುದೇ ಆತಂಕಕ್ಕೆ ಒಳಗಾಗದಂತೆ ಪರೀಕ್ಷೆ ಬರೆಯಲು ಶಿಕ್ಷಕರು ಪ್ರೋತ್ಸಾಹ ತುಂಬುವಂತೆ ಸಚಿವ ಸುರೇಶ್ ಕುಮಾರ್ ಹೇಳಿದರು.

    ರಾಜ್ಯದಲ್ಲಿ ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರುವ ಕಾರ್ಯಕ್ರಮವನ್ನು ಅಭಿಯಾನದ ರೀತಿಯಲ್ಲಿ ನಡೆಸಲಾಗುವುದು, ಪ್ರಸಕ್ತ ವರ್ಷದಲ್ಲಿ ಶಾಲಾ ಮಕ್ಕಳ ಹಾಜರಾತಿ ಗಣನೆಗೆ ತೆಗೆದುಕೊಂಡು ಶಾಲೆಗಳಲ್ಲಿನ ಹೆಚ್ವುವರಿ ಶಿಕ್ಷಕರ ವರ್ಗಾವಣೆ ಮಾಡುವುದಿಲ್ಲ ಎಂದು ಸಚಿವರು ತಿಳಿಸಿದರು.

    ಜಿಲ್ಲೆಯ ವಿವಿಧ ತಾಲೂಕುಗಳಿಂದ ಖಾಸಗಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು, ಜಿಲ್ಲಾ ಕೇಂದ್ರಕ್ಕೆ ಆಗಮಿಸುವವರಿಗೆ, ಜಿಲ್ಲೆಯಲ್ಲಿ ಉಳಿಯಲು ಹಾಸ್ಟಲ್ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

    ಸಭೆಯಲ್ಲಿ ಮುಜರಾಯಿ, ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಶಾಸಕರಾದ ರಘುಪತಿಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ,ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ದ.ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಸೆಲ್ವಮಣಿ, ಉ.ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ರೋಶನ್ , ಉಡುಪಿ ಎಸ್‌ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.

    ಇದನ್ನೂ ಓದಿ:
    ► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    twenty + 14 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.