Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ ಮಾದರಿ ಶಿಕ್ಷಕ ಬಾಬು ಶೆಟ್ಟಿ
    ವಿಶೇಷ ವರದಿ

    ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ ಮಾದರಿ ಶಿಕ್ಷಕ ಬಾಬು ಶೆಟ್ಟಿ

    Updated:10/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ಈ ಭಾರಿ ಲಾಕ್‌ಡೌನ್‌ನಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಲಾಗಿತ್ತು. ಆದರೆ ತನ್ನ ವಿದ್ಯಾರ್ಥಿಗಳ ಕಲಿಕೆಗೆ ತೊಡಕಾಗಬಾರದೆಂಬ ಈ ಶಿಕ್ಷಕನ ಸದಾಶಯ ಮಾತ್ರ ಪೋಸ್ಟ್‌ಪೋನ್ ಆಗಿರಲಿಲ್ಲ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದುದಲ್ಲದೇ ಅವರ ಮನೆಗಳಿಗೂ ತೆರಳಿ ಮಾರ್ಗದರ್ಶನ ಮಾಡಿದ್ದ ಹೆಸ್ಕತ್ತೂರು ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಬಾಬು ಶೆಟ್ಟಿ ಅವರ ವೃತ್ತಿಪರತೆಗೆ ಶಿಕ್ಷಣ ಸಚಿವರೇ ಭೇಷ್ ಎಂದಿದ್ದಾರೆ.

    Click Here

    Call us

    Click Here

    ಲಾಕ್‌ಡೌನ್‌ನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ:
    ಹೆಸ್ಕುತ್ತೂರು ಶಾಲೆಯಲ್ಲಿ ಒಟ್ಟು 43 ಮಕ್ಕಳಿದ್ದು, ಲಾಕ್‌ಡೌನ್ ಹಿನ್ನೆಲೆಯಲ್ಲಿ ಶಾಲೆ ರಜೆಯಿದ್ದರೂ ಬಾಬು ಶೆಟ್ಟಿಯವರು ಎಸ್‌ಎಸ್‌ಎಲ್‌ಸಿ ವಿದಾರ್ಥಿಗಳ ಸಂಪರ್ಕದಲ್ಲಿದ್ದು, ಮನೆ ಮನೆಗೆ ತೆರಳಿ ಮಾದರಿ ಪ್ರಶ್ನೆ ಪತ್ರಿಕೆ ನೀಡಿ ಪರೀಕ್ಷೆ ಮಾಡುತ್ತಿದ್ದರು. ಪೋಷಕರಿಂದ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಚಾರಿಸುತ್ತಿದ್ದ ಅವರು ಒಂದೊಂದು ಮಕ್ಕಳ ಮನೆಗೆ ಮೂರ‍್ನಾಲ್ಕು ಬಾರಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಪರೀಕ್ಷೆಯ ಸಮಯದಲ್ಲಿ ಪರಿಪಾಠವನ್ನು ಅವರು ಹಲವು ವರ್ಷದಿಂದ ಮುಂದುವರಿಸುತ್ತಿದ್ದು, ಲಾಕ್‌ಡೌನ್ ಅವಧಿಯಾಗಿದ್ದರಿಂದ ಹೆಚ್ಚಿನ ಸಮಯ ಅದಕ್ಕೆ ಮೀಸಲಿರಿಸಿದ್ದರು. ಕುಂದಾಪ್ರ ಡಾಟ್ ಕಾಂ ವರದಿ.

    ವಿದ್ಯಾರ್ಥಿಗಳು ಫೇಲ್ ಆಗಿದ್ದೇ ಇಲ್ಲ:
    ಬಾಬು ಶೆಟ್ಟಿ ಅವರು ಶಿಕ್ಷಕ ವೃತ್ತಿಗೆ ಸೇರಿದ್ದು 23 ವರ್ಷಗಳ ಹಿಂದೆ. ಕಾವಡಿ ಸರಕಾರಿ ಪ್ರೌಢಶಾಲೆ, ಮಣೂರು ಹಾಗೂ ಕೋಣಿ ಪ್ರೌಢಶಾಲೆಯಲ್ಲಿ ಶಿಕ್ಷಕರಾದ್ದರು. ಬಳಿಕ ಎರಡು ವರ್ಷ ಬ್ರಹ್ಮಾವರದಲ್ಲಿ ಬಿಆರ್‌ಸಿ ಆಗಿಯೂ ಸೇವೆ ಸಲ್ಲಿಸಿದ್ದ ಅವರು, ಕಳೆದ ಹನ್ನೊಂದು ವರ್ಷದಿಂದ ಹೆಸ್ಕುತ್ತೂರು ಶಾಲೆಯಲ್ಲಿ ಪ್ರಭಾರ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಷ್ಟು ವರ್ಷಗಳ ಸೇವಾ ಅವಧಿಯಲ್ಲಿ ಅವರು ರಜೆ ತೆಗೆದುಕೊಂಡಿದ್ದೇ ವಿರಳ. ಶನಿವಾರ ಮಧ್ಯಾಹ್ನ ಸಹ ತರಗತಿಗಳನ್ನು ನಡೆಸುತ್ತಿದ್ದರು. ಅವರು ಗಣಿತ ವಿಷಯ ಕಲಿಸುತ್ತಿದ್ದು, ಇದೂವರಗೆ ಪಾಠ ಹೇಳಿದ ವಿದ್ಯಾರ್ಥಿಯೂ ಗಣಿತದಲ್ಲಿ ಫೇಲಾಗಿದ್ದಿಲ್ಲ. ಅವರು ಬಂದಾಗಿನಿಂದಲೂ ಹೆಸ್ಕುತ್ತೂರು ಪ್ರೌಢಶಾಲೆ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100ಕ್ಕೆ 100 ಫಲಿತಾಂಶ ಪಡೆಯುತ್ತಾ ಬಂದಿದೆ.

    5 ಭಾರಿ ಸಾಧಕ ಶಿಕ್ಷಕ ಪ್ರಶಸ್ತಿ ಪಡೆದಿದ್ದರು, ಸಚಿವರಿಂದಲೂ ಮೆಚ್ಚುಗೆ:
    ಬಾಬು ಶೆಟ್ಟಿ ಅವರಿಗೆ ಒಂದು ಭಾರಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಐದು ಭಾರಿ ಸಾಧಕ ಶಿಕ್ಷಕ ಪ್ರಶಸ್ತಿ ದೊರೆತಿದೆ. ಹತ್ತಾರು ಸಂಘ ಸಂಸ್ಥೆಗಳಿಂದ ಪ್ರಶಸ್ತಿ, ಗೌರವಗಳು ಸಂದಿದೆ. ಜಪ್ತಿಯವರಾದ ಬಾಬು ಶೆಟ್ಟಿ ಅವರು ಸದ್ಯ ವಕ್ವಾಡಿಯಲ್ಲಿ ಮಡದಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಇವರ ಶಿಕ್ಷಣ ಪ್ರೀತಿ ಮೆಚ್ಚಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸುವ ಜೊತೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿಯೂ ಈ ವಿಚಾರ ಹಂಚಿಕೊಂಡಿದ್ದಾರೆ/ಕುಂದಾಪ್ರ ಡಾಟ್ ಕಾಂ ವರದಿ/

    Click here

    Click here

    Click here

    Call us

    Call us

      • ಅತ್ಯಂತ ಬಡ ಕುಟುಂಬದ ಹಿನ್ನೆಲೆಯಿಂದ ಬಂದು ಶಿಕ್ಷಕನಾಗಿದ್ದು, ಯಾರೂ ಶಿಕ್ಷಣದಿಂದ ವಂಚಿತರಾಗಬಾರದೆನ್ನುವುದು ನನ್ನ ಕಾಳಜಿ. ಒಳ್ಳೆಯ ಕೆಲಸ ಮಾಡಿದರೆ ಸಮಾಜ ಖಂಡಿತವಾಗಿಯೂ ಗುರುತಿಸುತ್ತೆ ಎನ್ನುವುದಕ್ಕೆ ಇದೇ ಸಾಕ್ಷಿ. ಶಿಕ್ಷಣ ಸಚಿವರ ಪ್ರಶಂಸೆ ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡಲು ಸ್ಪೂರ್ತಿ ನೀಡಿದೆ. – ಬಾಬು ಶೆಟ್ಟಿ, ಪ್ರಭಾರ ಮುಖ್ಯಶಿಕ್ಷಕ, ಹೆಸ್ಕುತ್ತೂರು ಸರ್ಕಾರಿ ಪ್ರೌಢಶಾಲೆ
    • ಕಳೆದ 23 ವರ್ಷಗಳಿಂದ ತನ್ನ ತರಗತಿಯ ಮಕ್ಕಳು ನೂರಕ್ಕೆ ನೂರು ತೇರ್ಗಡೆಯಾಗುತ್ತಿರುವ ಸಂಗತಿ ಬಹಳ ಹೆಮ್ಮೆಯಿಂದ, ವಿನೀತನಾಗಿ ಹಂಚಿಕೊಂಡರು. ಬಾಬು ಶೆಟ್ಟಿಯವರಂತಹ ಶಿಕ್ಷಕರೇ ನಮ್ಮ ಶಾಲೆಗಳ ವಿಶ್ವಾಸಾರ್ಹತೆ ಹೆಚ್ಚಿಸುತ್ತಿದ್ದಾರೆ. ಉಡುಪಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ದತೆ ಸಮಯ ಅವರ ಪರಿಚಯವಾಗಿದ್ದು, ಅವರ ಶಿಕ್ಷಣ ಪ್ರೇಮ ಅಭಿನಂದನಾರ್ಹ – ಸುರೇಶ್ ಕುಮಾರ್, ರಾಜ್ಯ ಶಿಕ್ಷಣ ಸಚಿವ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d