ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಪ್ರಗತಿಯಲ್ಲಿ ರಾಜಗೋಪುರ ನಿರ್ಮಾಣ ಕಾಮಗಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ರಾಜಗೋಪುರ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಂಗಳವಾರ ದೇವಸ್ಥಾನದ ರಾಜಗೋಪುರದ ದಾನಿ, ಉದ್ಯಮಿ ಯು. ಬಿ. ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ವೀಕ್ಷಿಸಿದರು.

Call us

Click Here

ಕರಾವಳಿಯ ಪ್ರಸಿದ್ಧ ದೇವಸ್ಥಾನಗಳಲ್ಲೊಂದಾದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಪಾರ ಭಕ್ತವೃಂದವಿದೆ. ದೇವಸ್ಥಾನದ ರಾಜಗೋಪುರವು ಅಂದಾಜು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಲಾಕ್‌ಡೌನ್ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಕಾಮಗಾರಿ ಇದೀಗ ಮತ್ತೆ ಭರದಿಂದ  ಸಾಗುತ್ತಿದೆ. ಈ ಸಂದರ್ಭ ಯು. ಬಿ. ಶೆಟ್ಟಿ ಅವರು ಇಂಜಿನಿಯರ್ ಅಶೋಕ್ ಅವರಿಂದ ಕಾಮಗಾರಿಯ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ:
► ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ರಾಜಗೋಪುರ ನಿರ್ಮಾಣಕ್ಕೆ ಶಂಕುಸ್ಥಾಪನೆ – https://kundapraa.com/?p=35146 .

Leave a Reply