Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪತ್ರಕರ್ತರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು: ಡಾ. ಅಲಕಾನಂದ ರಾವ್
    ಉಡುಪಿ ಜಿಲ್ಲೆ

    ಪತ್ರಕರ್ತರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು: ಡಾ. ಅಲಕಾನಂದ ರಾವ್

    Updated:01/07/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ: ಕೋವಿಡ್-19 ವಿರುದ್ದದ ಹೋರಾಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ರೀತಿಯಲ್ಲಿ, ಸಮಾಜದಲ್ಲಿ ಕೊರೋನಾ ಕುರಿತಂತೆ ಜಾಗೃತಿ ಮೂಡಿಸುತ್ತಿರುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿ ಡಾ| ಅಲಕಾನಂದ ರಾವ್ ಹೇಳಿದ್ದಾರೆ.

    Click Here

    Call us

    Click Here

    ಅವರು ಬುಧವಾರ, ಉಡುಪಿಯ ಆಯುಷ್ ಇಲಾಖೆಯಲ್ಲಿ , ಕರ್ನಾಟಕ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ನಡೆದ, ವೈದ್ಯರ ದಿನಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪತ್ರಕರ್ತರಿಗೆ ಕೋವಿಡ್-19 ಗೆ ಸಂಬಂಧಿಸಿದ ರೋಗ ನಿರೋಧಕ ಶಕ್ತಿ ವೃದ್ಧಿಸುವ ಆಯುಷ್ ಮಾತ್ರೆ ಹಾಗೂ ಚ್ಯವನಪ್ರಾಶ ವಿತರಿಸಿ ಮಾತನಾಡಿದರು.

    ಕೋರೋನಾ ವಿರುದ್ದ ಹೋರಾಟದಲ್ಲಿ, ಆಯುರ್ವೇದ ವೈದ್ಯರು ಕೂಡ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸೋಂಕು ನಿಯಂತ್ರಣ ತರುವಲ್ಲಿ ಆಯುರ್ವೇದ ವೈದ್ಯರ ಪಾತ್ರ ಕೂಡ ಇದೆ , ಪತ್ರಕರ್ತರು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು, ಸಾರ್ವಜನಿಕರ ನಡುವೆಯೇ ಹೆಚ್ಚು ಇರುವುದರಿಂದ ಅವರೂ ಕೂಡಾ ತಮ್ಮ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

    ಕೋವಿಡ್-19 ನಿಂದ ರಕ್ಷಣೆ ಪಡೆಯಲು, ಆಯುಷ್ ಇಲಾಖೆಯಿಂದ ಸಿದ್ದಪಡಿಸಿರುವ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ , ಅರ್ಯುರ್ವೇದ, ಯುನಾನಿ ಮತ್ತು ಹೋಮಿಯೋಪತಿಯ ಮಾತ್ರೆಗಳನ್ನು ಹಾಗೂ ವಿಟಮಿನ್ ಸಿ ಅಧಿಕವಾಗಿರುವ ಚ್ಯವನಪ್ರಾಶನಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ಶಿವಕುಮಾರ್ ಅವರ ಮೂಲಕ ಪತ್ರಕರ್ತರಿಗೆ ಡಾ. ಅಲಕಾನಂದ ರಾವ್ ವಿತರಿಸಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ಶಿವಕುಮಾರ್ ಮಾತನಾಡಿ, ಪತ್ರಕರ್ತರು ಯಾವಾಗಲೂ ಸಮಯದ ಪರಿವಿಲ್ಲದೇ , ತಮ್ಮ ಆರೋಗವನ್ನೂ ಲೆಕ್ಕಿಸದೇ, ಕೋರೋನಾ ವಿರುದ್ದ ಹೋರಾಟದಲ್ಲಿ ಕೊರೋನಾ ವಾರಿಯರ್ಸ್ ಗಳಾಗಿ, ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸುತ್ತಿದ್ದು, ಪತ್ರಕರ್ತರ ಆರೋಗ್ಯದ ಹಿತದೃಷ್ಠಿಯಿಂದ ರೋಗನಿರೋಧಕ ಮಾತ್ರೆ ಮತ್ತು ಚ್ಯವನಪ್ರಾಶ ನೀಡಿರುವುದಕ್ಕೆ ಆಯುಷ್ ಇಲಾಖೆಗೆ ಅಭಿನಂದನೆ ಸಲ್ಲಿಸಿದರು.

    Click here

    Click here

    Click here

    Call us

    Call us

    ಕರ್ನಾಟಕ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಉಡುಪಿ ಅಧ್ಯಕ್ಷೆ ಡಾ| ವೀಣಾ ಎನ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವೈಧ್ಯ ಡಾ| ದಿನಕರ ಡೋಂಗ್ರೆ ಅವರು ಆಹಾರ ಸೇವನೆ ಕುರಿತು ಮಾಹಿತಿ ನೀಡಿದರು. ಹೋಮಿಯೋಪತಿ ಕುರಿತು ಡಾ| ಅನ್ನಪೂರ್ಣ ಭಂಡಾರಿ, ಯುನಾನಿ ಕುರಿತು ಡಾ| ರುಕ್ಯಾಡ್ ಅಂಜುA ಮಾಹಿತಿ ನೀಡಿದರು.

    ಸಂಘದ ಕಾರ್ಯದರ್ಶಿ ಸಂಧ್ಯಾಕುಮಾರಿ ವೇದಿಕೆಯಲ್ಲಿದ್ದರು. ಡಾ| ಪ್ರಕಾಶ್ ಪ್ರಾರ್ಥಿಸಿದರು. ಡಾ| ಪ್ರದೀಪ್ ಆರ್.ಶೆಟ್ಟಿ ವಂದಿಸಿದರು. ಡಾ| ಕೆ.ಸರ್ವೋತ್ತಮ ಶೆಟ್ಟಿ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.