Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧ್ವನಿ ಬೆಳಕಿನವರಿಂದ ಹೊಸ ಸಾಧ್ಯತೆಗಳಿಗೆ ನಾಂದಿ: ಓಂಗಣೇಶ್
    ಊರ್ಮನೆ ಸಮಾಚಾರ

    ಧ್ವನಿ ಬೆಳಕಿನವರಿಂದ ಹೊಸ ಸಾಧ್ಯತೆಗಳಿಗೆ ನಾಂದಿ: ಓಂಗಣೇಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಸಾಂಸ್ಕೃತಿಕ ಕ್ಷೇತ್ರಕ್ಕೆ ಧ್ವನಿ ಬೆಳಕಿನವರ ಕೊಡುಗೆ ನಿರಂತರವಾಗಿದ್ದು ಹೊಸ ಸಾಧ್ಯತೆಗಳಿಗೆ ತೆರೆದುಕೊಳ್ಳುವಲ್ಲಿ ಅವರ ಸಹಕಾರ ಯಾರೂ ಮರೆಯುವಂತಿಲ್ಲ. ಕಲಾವಿದರಾಗಲಿ ಜನನಾಯಕರಾಗಲಿ ವೇದಿಕೆಯಿಂದ ಜನರಿಗೆ ತಲುಪುವುದಿದ್ದರೆ ಅದು ಸೌಂಡ್ ಲೈಟ್‌ನವರ ಸಹಕಾರದಿಂದ. ಮಳೆ ಚಳಿ ಲೆಕ್ಕಿಸದ ಅವರ ಪ್ರಾಮಾಣಿಕ ಪ್ರಯತ್ನದಿಂದ ಹಲವು ಕ್ಷೇತ್ರದಲ್ಲಿ ಇಂದು ಅದ್ಭುತ ಸಾಧನೆಯಾಗಿದೆ. ಹಳ್ಳಿ ಪಟ್ಟಣಗಳಲ್ಲಿನ ಉತ್ಸವಗಳಿಗೆ ವೈಭವದ ಮೆರಗು ಸೃಷ್ಠಿಯಾಗಿದ್ದಲ್ಲದೆ ಪ್ರತಿ ಕಾರ್ಯಕ್ರಮದ ಯಶಸ್ಸು ಕೂಡಾ ಇವರನ್ನೇ ಅವಲಂಬಿರಿಸಿರುತ್ತದೆ ಎಂದು ಅಂತರ್ರಾಷ್ಟ್ರೀಯ ಜಾದೂಗಾರ ಸಾಹಿತಿ ಓಂಗಣೇಶ್ ಹೇಳಿದರು.

    Click Here

    Call us

    Click Here

    ಅವರು ಉಪ್ಪುಂದ ಮಾತೃ ಶ್ರೀ ಸಭಾ ಭವನದಲ್ಲಿ ಜರಗಿದ ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಚತುರ್ಥ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

    ಲೋಕದ ಧ್ವನಿ ಬೆಳಕಿನ ಸಂಯೋಜನೆ ಭಗವಂತನ ಕೆಲಸ. ಅಂತೆಯೆ ನಾವು ಆ ದೇವರಿಗೆ ಪ್ರಿಯರಾಗುವಂತೆ ದುಡಿಯೋಣಾ. ಕೀಳರಿಮೆ ಬಿಟ್ಟು ನಮ್ಮ ವೃತ್ತಿಯನ್ನು ನಾವು ಗೌರವಿಸಿಕೊಳ್ಳುವುದರ ಮೂಲಕ ಸಮಾಜದಲ್ಲಿ ಎದ್ದು ನಿಲ್ಲೋಣಾ. ಆಧುನಿಕತೆಯ ಭರದಲ್ಲಿ ಮಾನವೀಯತೆ ಮರೆಯದೆ ಪರಸ್ಪರ ಸಾಮರಸ್ಯದಿಂದ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸೋಣಾ ಎಂದರು.

    ಧ್ವನಿ ಬೆಳಕು ಸಂಯೋಜಕರ ಸಂಘಟನೆಯ ಉಡುಪಿ ಜಿಲ್ಲಾ ಅಧ್ಯಕ್ಷರಾದ ವಿಜಯಕುಮಾರ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲೇ ಅದ್ವಿತೀಯ ವಲಯವೆಂಬ ಹೆಗ್ಗಳಿಕೆಗೆ ಪಾತ್ರವಾದ ಹಿನ್ನೆಲೆಯಲ್ಲಿ ಈ ಬೈಂದೂರು ಸಂಘಟನೆ ಇನ್ನುಳಿದವರಿಗೆ ಮಾದರಿಯಾಗಿದೆ. ಇಲ್ಲಿನ ಆಡಳಿತ ಮಂಡಳಿಯ ಅವಿರತ ಪ್ರಯತ್ನಕ್ಕೆ ಅಭಿನಂದಿಸುತ್ತೇನೆ ಎಂದರು.

    ಮುಖ್ಯ ಅತಿಥಿಗಳಾಗಿ ಟಿ ಎಂ ಟಿ ಎಲ್ ಸಂಸ್ಥೆಯ ಏರಿಯಾ ಸೇಲ್ಸ್ ಮ್ಯಾನೆಜರ್ ಮಹೇಶ್ ಬೆಂಗಳೂರು, ಓರಿಯಂಟಲ್ ಇನ್ಸುರೆನ್ಸ್ ಕಂಪನಿಯ ಅಭಿವೃದ್ಧಿ ಅಧಿಕಾರಿ ಪುರಂದರ ಶೆಣೈ, ವರ್ಧಮಾನ್ ಮೇಗಾ ಟೆಕ್ ಸಂಸ್ಥೆಯ ಮುಖ್ಯಸ್ಥ ಸತ್ಯಜೀತ್ ಮುಂಬಯಿ, ಧ್ವ.ಬೆ.ಸಂ.ಸಂ. ಜಿಲ್ಲಾ ಕಾರ್ಯದರ್ಶಿ ದಾಮೋದರ್, ಕೋಶಾಧಿಕಾರಿ ಗಣೇಶ್ ದೇವಾಡಿಗ, ಗೌರವ ಸಲಹೆಗಾರ ಬಾಲಕೃಷ್ಣ ಪೂಜಾರಿ, ಸಭಾ ಭವನದ ಮಾಲಕ ಮಂಜು ದೇವಡಿಗ ಹಾಗೂ ಎಲ್ಲಾ ವಲಯಾಧ್ಯಕ್ಷರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಇದೇ ಸಂದರ್ಭದಲ್ಲಿ ಕಾರ್ಮಿಕರ ಅಪಘಾತ ವಿಮಾ ಪತ್ರವನ್ನು ಬೈಂದೂರು ವಲಯಾಧ್ಯಕ್ಷ ಶಶಿಧರ ಶೆಣೈ ಸ್ವೀಕರಿಸಿ ವಂದಿಸಿದರು, ಕಾರ್ಯದರ್ಶಿ ವಿನಾಯಕ ಪ್ರಭು ವರದಿಮಂಡಿಸಿ ವಲಯ ಜಿಲ್ಲಾ ಪ್ರತಿನಿಧಿ ಪ್ರಭಾಕರ ಸ್ವಾಗತಿಸಿ ಉದಯ್ ಆಚಾರ್ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    sixteen − fifteen =

    Call us

    Click Here

    Call us

    Call us

    Call us
    Highest Viewed Recently
    • ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.