Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧ್ವನಿ ಬೆಳಕಿನವರಿಂದ ಹೊಸ ಸಾಧ್ಯತೆಗಳಿಗೆ ನಾಂದಿ: ಓಂಗಣೇಶ್
    ಊರ್ಮನೆ ಸಮಾಚಾರ

    ಧ್ವನಿ ಬೆಳಕಿನವರಿಂದ ಹೊಸ ಸಾಧ್ಯತೆಗಳಿಗೆ ನಾಂದಿ: ಓಂಗಣೇಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಸಾಂಸ್ಕೃತಿಕ ಕ್ಷೇತ್ರಕ್ಕೆ ಧ್ವನಿ ಬೆಳಕಿನವರ ಕೊಡುಗೆ ನಿರಂತರವಾಗಿದ್ದು ಹೊಸ ಸಾಧ್ಯತೆಗಳಿಗೆ ತೆರೆದುಕೊಳ್ಳುವಲ್ಲಿ ಅವರ ಸಹಕಾರ ಯಾರೂ ಮರೆಯುವಂತಿಲ್ಲ. ಕಲಾವಿದರಾಗಲಿ ಜನನಾಯಕರಾಗಲಿ ವೇದಿಕೆಯಿಂದ ಜನರಿಗೆ ತಲುಪುವುದಿದ್ದರೆ ಅದು ಸೌಂಡ್ ಲೈಟ್‌ನವರ ಸಹಕಾರದಿಂದ. ಮಳೆ ಚಳಿ ಲೆಕ್ಕಿಸದ ಅವರ ಪ್ರಾಮಾಣಿಕ ಪ್ರಯತ್ನದಿಂದ ಹಲವು ಕ್ಷೇತ್ರದಲ್ಲಿ ಇಂದು ಅದ್ಭುತ ಸಾಧನೆಯಾಗಿದೆ. ಹಳ್ಳಿ ಪಟ್ಟಣಗಳಲ್ಲಿನ ಉತ್ಸವಗಳಿಗೆ ವೈಭವದ ಮೆರಗು ಸೃಷ್ಠಿಯಾಗಿದ್ದಲ್ಲದೆ ಪ್ರತಿ ಕಾರ್ಯಕ್ರಮದ ಯಶಸ್ಸು ಕೂಡಾ ಇವರನ್ನೇ ಅವಲಂಬಿರಿಸಿರುತ್ತದೆ ಎಂದು ಅಂತರ್ರಾಷ್ಟ್ರೀಯ ಜಾದೂಗಾರ ಸಾಹಿತಿ ಓಂಗಣೇಶ್ ಹೇಳಿದರು.

    Click Here

    Call us

    Click Here

    ಅವರು ಉಪ್ಪುಂದ ಮಾತೃ ಶ್ರೀ ಸಭಾ ಭವನದಲ್ಲಿ ಜರಗಿದ ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಚತುರ್ಥ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

    ಲೋಕದ ಧ್ವನಿ ಬೆಳಕಿನ ಸಂಯೋಜನೆ ಭಗವಂತನ ಕೆಲಸ. ಅಂತೆಯೆ ನಾವು ಆ ದೇವರಿಗೆ ಪ್ರಿಯರಾಗುವಂತೆ ದುಡಿಯೋಣಾ. ಕೀಳರಿಮೆ ಬಿಟ್ಟು ನಮ್ಮ ವೃತ್ತಿಯನ್ನು ನಾವು ಗೌರವಿಸಿಕೊಳ್ಳುವುದರ ಮೂಲಕ ಸಮಾಜದಲ್ಲಿ ಎದ್ದು ನಿಲ್ಲೋಣಾ. ಆಧುನಿಕತೆಯ ಭರದಲ್ಲಿ ಮಾನವೀಯತೆ ಮರೆಯದೆ ಪರಸ್ಪರ ಸಾಮರಸ್ಯದಿಂದ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸೋಣಾ ಎಂದರು.

    ಧ್ವನಿ ಬೆಳಕು ಸಂಯೋಜಕರ ಸಂಘಟನೆಯ ಉಡುಪಿ ಜಿಲ್ಲಾ ಅಧ್ಯಕ್ಷರಾದ ವಿಜಯಕುಮಾರ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲೇ ಅದ್ವಿತೀಯ ವಲಯವೆಂಬ ಹೆಗ್ಗಳಿಕೆಗೆ ಪಾತ್ರವಾದ ಹಿನ್ನೆಲೆಯಲ್ಲಿ ಈ ಬೈಂದೂರು ಸಂಘಟನೆ ಇನ್ನುಳಿದವರಿಗೆ ಮಾದರಿಯಾಗಿದೆ. ಇಲ್ಲಿನ ಆಡಳಿತ ಮಂಡಳಿಯ ಅವಿರತ ಪ್ರಯತ್ನಕ್ಕೆ ಅಭಿನಂದಿಸುತ್ತೇನೆ ಎಂದರು.

    ಮುಖ್ಯ ಅತಿಥಿಗಳಾಗಿ ಟಿ ಎಂ ಟಿ ಎಲ್ ಸಂಸ್ಥೆಯ ಏರಿಯಾ ಸೇಲ್ಸ್ ಮ್ಯಾನೆಜರ್ ಮಹೇಶ್ ಬೆಂಗಳೂರು, ಓರಿಯಂಟಲ್ ಇನ್ಸುರೆನ್ಸ್ ಕಂಪನಿಯ ಅಭಿವೃದ್ಧಿ ಅಧಿಕಾರಿ ಪುರಂದರ ಶೆಣೈ, ವರ್ಧಮಾನ್ ಮೇಗಾ ಟೆಕ್ ಸಂಸ್ಥೆಯ ಮುಖ್ಯಸ್ಥ ಸತ್ಯಜೀತ್ ಮುಂಬಯಿ, ಧ್ವ.ಬೆ.ಸಂ.ಸಂ. ಜಿಲ್ಲಾ ಕಾರ್ಯದರ್ಶಿ ದಾಮೋದರ್, ಕೋಶಾಧಿಕಾರಿ ಗಣೇಶ್ ದೇವಾಡಿಗ, ಗೌರವ ಸಲಹೆಗಾರ ಬಾಲಕೃಷ್ಣ ಪೂಜಾರಿ, ಸಭಾ ಭವನದ ಮಾಲಕ ಮಂಜು ದೇವಡಿಗ ಹಾಗೂ ಎಲ್ಲಾ ವಲಯಾಧ್ಯಕ್ಷರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಇದೇ ಸಂದರ್ಭದಲ್ಲಿ ಕಾರ್ಮಿಕರ ಅಪಘಾತ ವಿಮಾ ಪತ್ರವನ್ನು ಬೈಂದೂರು ವಲಯಾಧ್ಯಕ್ಷ ಶಶಿಧರ ಶೆಣೈ ಸ್ವೀಕರಿಸಿ ವಂದಿಸಿದರು, ಕಾರ್ಯದರ್ಶಿ ವಿನಾಯಕ ಪ್ರಭು ವರದಿಮಂಡಿಸಿ ವಲಯ ಜಿಲ್ಲಾ ಪ್ರತಿನಿಧಿ ಪ್ರಭಾಕರ ಸ್ವಾಗತಿಸಿ ಉದಯ್ ಆಚಾರ್ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.