ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜೂನ್ನಲ್ಲಿ ಅಧಿಕಾರಾವಧಿ ಮುಗಿದ ಬೈಂದೂರು ತಾಲ್ಲೂಕಿನ 16 ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾಧಿಕಾರಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜೂನ್ ೨೯ರಂದು ಆದೇಶ ಹೊರಡಿಸಿದ್ದಾರೆ. ಇವುಗಳಿಗೆ ಅವಧಿ ಮುಕ್ತಾಯ ಪೂರ್ವದಲ್ಲಿ ಚುನಾವಣೆ ನಡೆಸಬೇಕು ಎಂಬ ವಿಧಿ ಇದೆಯಾದರೂ ಕೋವಿಡ್ -೧೯ ಹರಡುತ್ತಿರುವ ಕಾರಣ ರಾಜ್ಯ ಚುನಾವಣಾ ಆಯೋಗವು ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಿದೆ. ಆ ಹಿನ್ನೆಲೆಯಲ್ಲಿ ಚುನಾವಣೆ ನಡೆಯುವ ವರೆಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿಗಳಿಗೆ ನೇಮಕಗೊಂಡ ಆಡಳಿತಾಧಿಕಾರಿಗಳು:
- ಶಿರೂರು, ಪಡುವರಿ ಮತ್ತು ಗೋಳಿಹೊಳೆ – ರಾಜಕುಮಾರ್, ಎಇಇ, ಬೈಂದೂರು ಎಂಜಿನಿಯರಿಂಗ್ ಉಪವಿಭಾಗ
- ಬಿಜೂರು ಮತ್ತು ಉಪ್ಪುಂದ – ಜಿ. ಬಿ. ಮಾದರ್, ಬೈಂದೂರು ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ
- ಕೆರ್ಗಾಲು ಮತ್ತು ಹೇರೂರು – ಜ್ಯೋತಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ
- ಕೊಲ್ಲೂರು ಮತ್ತು ಜಡ್ಕಲ್ – ಅರವಿಂದ ಎಸ್. ಸುತ್ಗುಂಡಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ
- ಕಾಲ್ತೋಡು ಮತ್ತು ಖಂಬದಕೋಣೆ – ಪಿ. ಎಂ. ಮುತ್ತೆಪ್ಪಗೋಳ್, ಬೈಂದೂರು ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ.
- ಕಿರಿಮಂಜೇಶ್ವರ – ಸಂಜೀವ ನಾಯ್ಕ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ, ಕುಂದಾಪುರ
- ನಾವುಂದ – ಕಿರಣ್ಬಾಬು, ಬೈಂದೂರು ವಲಯ ಅರಣ್ಯಾಧಿಕಾರಿ
- ಮರವಂತೆ ಮತ್ತು ನಾಡ – ವಿನಾಯಕ ಕಾಮತ್, ಎಇಇ, ಮೆಸ್ಕಾಂ ಬೈಂದೂರು
- ಹಳ್ಳಿಹೊಳೆ – ಉದಯಕುಮಾರ ಶೆಟ್ಟಿ, ಪ್ರಾಂಶುಪಾಲರು, ಶಂಕರನಾರಾಯಣ ಸರ್ಕಾರಿ ಪದವಿಪೂರ್ವ ಕಾಲೇಜು
ನಿರ್ವಹಣೆಗೆ ಸೂಚನೆ:
ಆಡಳಿತಾಧಿಕಾರಿಗಳು ಕ್ರಮಬದ್ಧವಾಗಿ ರಚಿಸಿದ ಗ್ರಾಮ ಪಂಚಾಯಿತಿ ಎಂದು ಭಾವಿಸಿ ಗ್ರಾಮ ಪಂಚಾಯಿತಿಯ ಎಲ್ಲ ಸಾಮಾನ್ಯ ಅಧಿಕಾರ, ಕರ್ತವ್ಯ ಮತ್ತು ಪ್ರಕಾರ್ಯಗಳನ್ನು ನಿರ್ವಹಿಸಬೇಕು. ಕ್ರಮದಂತೆ ಪಂಚಾಯಿತಿ ಸಭೆ, ವಾರ್ಡ್ಸಭೆ, ಗ್ರಾಮಸಭೆಗಳನ್ನು ನಡೆಸಬೇಕು. ಅಧ್ಯಕ್ಷನ ಅಧಿಕಾರವನ್ನು ನಿರ್ವಹಿಸುವುದರ ಜತೆಗೆ ಅಭಿವೃದ್ಧಿ ಅಧಿಕಾರಿ ಜತೆ ಜಂಟಿಯಾಗಿ ಹಣಕಾಸಿನ ವ್ಯವಹಾರ ನಡೆಸಬೇಕು. ಪಂಚಾಯಿತಿ ಮತ್ತು ಗ್ರಂಥಾಲಯ ಸಿಬ್ಬಂದಿಗೆ ವೇತನ, ಗೌರವಧನ ಪಾವತಿಸಬೇಕು. ಆದರೆ ನೌಕರರನ್ನು ನೇಮಕ ಮಾಡಿಕೊಳ್ಳಬಾರದು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್-19 ಹರಡುವುದನ್ನು ತಡೆಯಲು ಪಂಚಾಯಿತಿ ಕಾರ್ಯಪಡೆಯ ಅಧ್ಯಕ್ಷ ಆಗಿ ಕಾರ್ಯ ನಿರ್ವಹಿಸಬೇಕು ಎಂದು ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/
ಇದನ್ನೂ ಓದಿ:
► ಕುಂದಾಪುರ ತಾಲೂಕಿನ 44 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ – https://kundapraa.com/?p=39187 .