Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಂತ ಸೂರು ನಿರ್ಮಿಸುವ ಕನಸು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸಾಕಾರ
    ವಿಶೇಷ ವರದಿ

    ಸ್ವಂತ ಸೂರು ನಿರ್ಮಿಸುವ ಕನಸು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸಾಕಾರ

    Updated:06/07/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಬೈಂದೂರು: ನೆಮ್ಮದಿಯಿಂದ ವಾಸಿಸಲು ಸುಸಜ್ಜಿತ ಸೂರು ನಿರ್ಮಿಸಿಕೊಳ್ಳಬೇಕೆಂಬ ಹಂಬಲವೊಂದು ಆ ಕುಟುಂಬಕ್ಕೆ ಗಗನಕುಸುಮವಾಗಿದ್ದ ಹೊತ್ತಿನಲ್ಲಿ, ತಾಲೂಕಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮಾನವೀಯ ನೆರವು ಅವರ ಕನಸನ್ನು ನನಸಾಗಿಸಿದೆ. ಉಪ್ಪುಂದದ ಬಾಯಂಹಿತ್ಲುವಿನಲ್ಲಿ ಕೇವಲ ಒಂದೆರಡು ತಿಂಗಳುಗಳಲ್ಲಿ ಸುಂದರ ಮನೆಯೊಂದು ಸಿದ್ಧಗೊಂಡಿದೆ.

    Click Here

    Call us

    Click Here

    ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಂಹಿತ್ಲು ನಿವಾಸಿ ಬೇಬಿ ಸುಬ್ಬಯ್ಯ ದೇವಾಡಿಗ ಎಂಬುವವರ ಕುಟುಂಬ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟಿನ ಈ ಮಹತ್ವಾಕಾಂಕ್ಷಿ ಯೋಜನೆಯ ಫಲಾನುಭವಿಗಳು.

    2 ತಿಂಗಳಿನಲ್ಲಿ ಗೃಹ ನಿರ್ಮಾಣ ಪೂರ್ಣ:
    ಬೇಬಿ ದೇವಾಡಿಗ ಅವರ ಕುಟುಂಬ ಸುಮಾರು 30 ವರ್ಷಗಳಿಂದ ಚಿಕ್ಕ ಗುಡಿಸಿಲಿನಲ್ಲಿ ವಾಸಿಸುತ್ತಿದ್ದರು. ಇತ್ತಿಚಿನ ವರ್ಷಗಳಲ್ಲಿ ಅದು ತೀರ ದುಸ್ಥಿತಿಗೆ ತಲುಪಿದ್ದರಿಂದ ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ ಅವರಿಗೆ ಆರ್ಥಿಕ ಅಡಚಣೆ ಎದುರಾಗಿತ್ತು. ಆರಂಭದಲ್ಲಿ ಮನೆಯ ತಳಪಾಯ ನಿರ್ಮಾಣಕ್ಕೆ ಅವರು ಕೂಡಿಸಿಟ್ಟಿದ್ದ ಒಂದಿಷ್ಟು ಹಣದೊಂದಿಗೆ ವಂಡ್ಸೆಯ ರಮೇಶ್ ದೇವಾಡಿಗ ಹಾಗೂ ಒಂದಿಷ್ಟು ದಾನಿಗಳು ನೆರವಾಗಿದ್ದರು. ಮನೆಯ ತಳಪಾಯ ಹಾಗೂ ಅರೆಬರೆ ಗೋಡೆ ನಿರ್ಮಾಣವಾಗಿತ್ತು. ಆದರೆ ಮನೆ ಪೂರ್ಣಗೊಳಿಸಲು ಮತ್ತೆ ಆರ್ಥಿಕ ಸಂಕಷ್ಟ ಎದುರಾಗಿ ಅರ್ಧಕ್ಕೆ ಕಾಮಗಾರಿ ನಿಂತಿತ್ತು. ಎರಡು ತಿಂಗಳ ಹಿಂದೆ ಸ್ಥಳೀಯ ಜನಪ್ರತಿನಿಧಿಯೋರ್ವರ ಮೂಲಕ ಕುಟುಂಬದ ಸಂಕಷ್ಟ ಟ್ರಸ್ಟ್‌ನ ಗಮನಕ್ಕೆ ಬಂದಿದ್ದು, ಮನೆಯನ್ನು ಪೂರ್ಣಗೊಳಿಸುವ ಭರವಸೆ ದೊರೆತಿತ್ತು. ಕುಂದಾಪ್ರ ಡಾಟ್ ಕಾಂ ವರದಿ.

    ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರ ಅವರ ನಿರ್ದೇಶನದಂತೆ ಅರ್ಧಕ್ಕೆ ನಿಂತಿದ್ದ ಕಾಮಗಾರಿಯನ್ನು ಇದೀಗ ಪೂರ್ಣಗೊಳಿಸಲಾಗಿದೆ. ಮನೆಯ ಗೋಡೆ ಪೂರ್ಣಗೊಳಿಸಿ ಗಾರೆ, ಮನೆಯ ಮೇಲ್ಛಾವಡಿ, ನೆಲಕ್ಕೆ ಟೈಲ್ಸ್ ಹಾಗೂ ವಿಟ್ರಿಫೈಡ್, ಪೇಟಿಂಗ್ ಮಾಡಿಸಲಾಗಿದ್ದು ಸುಸಜ್ಜಿತವಾಗಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸದ್ಯದಲ್ಲೇ ಫಲಾನುಭವಿಗಳಿಗೆ ಮನೆಯನ್ನು ಹಸ್ತಾಂತರಿಸುವ ಹಾಗೂ ಗೃಹ ಪ್ರವೇಶ ಕಾರ್ಯಕ್ರಮ ನಡೆಯಲಿದೆ.

    ಟ್ರಸ್ಟ್ ಮೂಲಕ ಹತ್ತಾರು ನೆರವು:
    ಗೋವಿಂದ ಬಾಬು ಪೂಜಾರಿ ಅವರು ಯಶಸ್ವಿ ಉದ್ಯಮಿ. ಅಸಾಧ್ಯವಾದುದನ್ನು ಸಾಧಿಸಿ ಉದ್ಯಮ ಕ್ಷೇತ್ರದಲ್ಲಿ ಯುವಕರಿಗೆ ಮಾದರಿಯಾದವರು. ಉದ್ಯಮದ ಜೊತೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಆರಂಭಿಸಿ ಅದರ ಮೂಲಕ ಶಿಕ್ಷಣ, ಧಾರ್ಮಿಕ, ಆರೋಗ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಿಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡುತ್ತಿದ್ದಾರೆ. ಪ್ರಸ್ತುತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು ವಿದ್ಯಾರ್ಥಿ ವೇತನ, ವಿದ್ಯಾರ್ಥಿ ದತ್ತು ಸ್ವೀಕಾರ, ಶಿಕ್ಷಣ ಸಂಸ್ಥೆಗಳಿಗೆ ಪ್ರೋತ್ಸಾಹದಂತಹ ಮಹತ್ವಕಾಂಕ್ಷೆಯ ಕಾರ್ಯವನ್ನು ನಿರಂತವಾಗಿ ಮಾಡಿಕೊಂಡು ಬರಲಾಗುತ್ತಿದೆ/ಕುಂದಾಪ್ರ ಡಾಟ್ ಕಾಂ ವರದಿ/

    Click here

    Click here

    Click here

    Call us

    Call us

    • ಮನೆ ನಿರ್ಮಿಸಬೇಕು ಎಂಬ ಆಸೆ ಇದ್ದರೂ ಅರ್ಥಿಕ ಅಡಚಣೆ ಎದುರಾಗಿತ್ತು. ಆರಂಭವಲ್ಲಿ ಒಂದಿಷ್ಟು ಹಣ ಸೇರಿಸಿ, ದಾನಿಗಳ ನೆರವಿನಿಂದ ನೆಲಗಟ್ಟು, ಗೋಡೆ ನಿರ್ಮಿಸಿದ್ದೆವು. ಮುಂದುವರಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಗೋವಿಂದ ಬಾಬು ಪೂಜಾರಿ ಅವರು ಮನೆ ಪೂರ್ಣಗೊಳಿಸಲು ಸಂಪೂರ್ಣ ನೆರವಾಗಿದ್ದಾರೆ. -ಬೇಬಿ ಸುಬ್ಬಯ್ಯ ದೇವಾಡಿಗ, ಫಲಾನುಭವಿ. ಕುಂದಾಪ್ರ ಡಾಟ್ ಕಾಂ ವರದಿ.
    • ಕಳೆದ ಆರು ವರ್ಷಗಳಿಂದ ಟ್ರಸ್ಟ್ ಮೂಲಕ ಹಲವಾರು ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ನೆರವು ನೀಡುತ್ತಾ ಬರಲಾಗುತ್ತಿದೆ. ಆರ್ಥಿಕ ಅಡಚಣೆಯಿರುವವರಿಗೆ ಅರ್ಹ ಘಲಾನುಭವಿಗಳಿಗೆ ಮನೆ ನಿರ್ಮಿಸಿಕೊಡುವುದು ಟ್ರಸ್ಟಿನಿಂದ ದೊಡ್ಡ ಯೋಜನೆಯಾಗಿದ್ದು, ಈ ಬಗ್ಗೆ ಸಾರ್ಥಕ ಭಾವವಿದೆ. – ಗೋವಿಂದ ಬಾಬು ಪೂಜಾರಿ, ಮ್ಯಾನೆಜಿಂಗ್ ಟ್ರಸ್ಟೀ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ

    ಇದನ್ನೂ ಓದಿ:
    ► ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ನಿರ್ಮಿಸಿದ ಶ್ರೀ ಕೃಷ್ಣ ನಿಲಯ ಉದ್ಘಾಟನೆ – https://kundapraa.com/svct-constructed-new-home-handovered-to-benifisher/

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    01/11/2024

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d