Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆಯ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆಯ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ

    Updated:08/07/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ ಕೋವಿಡ್-19 ಸರ್ಕಾರಿ ಪರೀಕ್ಷಾ ಲ್ಯಾಬನ್ನು ರಾಜ್ಯದ ಮುಜರಾಯಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ಉದ್ಘಾಟಿಸಿದರು.

    Click Here

    Call us

    Click Here

    ಬಳಿಕ ಅವರು ಮಾತನಾಡಿ, ರಾಜ್ಯದಲ್ಲೇ ಕೊರೋನಾ ಆರಂಭದಲ್ಲಿ ಕೇವಲ ಒಂದು ಪರೀಕ್ಷಾ ಲ್ಯಾಬ್ ಮಾತ್ರ ಇದ್ದು, ಆದರೆ ಈ ಲ್ಯಾಬಿನೊಂದಿಗೆ ರಾಜ್ಯದಲ್ಲಿನ ಕೋವಿಡ್ ಪರೀಕ್ಷಾ ಲ್ಯಾಬ್ ಗಳ ಸಂಖ್ಯೆ 82 ಕ್ಕೇರಿದೆ. ಜಿಲ್ಲೆಯಲ್ಲಿ ಮೊದಲು ಟೆಸ್ಟಿಂಗ್ ಗಾಗಿ ಮಂಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳನ್ನು ಅವಲಂಬಿಸಬೇಕಿತ್ತು, ಈಗ ಇಲ್ಲಿಯೇ ಲ್ಯಾಬ್ ಆರಂಬಿಸಿರುವುದರಿಂದ ಇನ್ನು ಮುಂದೆ ಇಲ್ಲಿಯೇ ಶೀಘ್ರದಲ್ಲಿ ವರದಿ ಪಡೆಯಬಹುದಾಗಿದೆ. ಹೊರ ರಾಜ್ಯ, ದೇಶಗಳಿಂದ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವವರಿಗಾಗಿ, ಇಲ್ಲಿ ಲ್ಯಾಬ್ ನ ಆರಂಭಿಸಬೇಕಾದ ಅವಶ್ಯಕತೆ ಮನಗಂಡು ಮಾನ್ಯ ಮುಖ್ಯಮಂತ್ರಿಗಳು ಈ ಲ್ಯಾಬ್ ನ್ನು ಉಡುಪಿ ಜಿಲ್ಲೆಗೆ ವಿಶೇಷವಾಗಿ ಮಂಜೂರು ಮಾಡಿದ್ದಾರೆ ಎಂದು ಸಚಿವ ಕೋಟ ತಿಳಿಸಿದರು.

    ಕೋರೋನಾ ನಿಯಂತ್ರಣ ಮತ್ತು ನಿರ್ವಹಣೆ ಕುರಿತಂತೆ, ಉಡುಪಿ ಜಿಲ್ಲಾಡಳಿತ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇದಕ್ಕಾಗಿ , ಜಿಲ್ಲೆಯ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು ಮತ್ತು ವಿಶೇಷವಾಗಿ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಜಿಲ್ಲೆಯಲ್ಲಿ ಕೋವಿಡ್-19 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬವಾಗದಿರದಂತೆ ರೂಪಿಸಿರುವ, ಅಂಬುಲೆನ್ಸ್ ಮಾನಿಟರಿಂಗ್ ಸಿಸ್ಟಂ ಯೋಜನೆಯನ್ನು ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು. ಈ ಯೋಜನೆಗಾಗಿ ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಅಂಬುಲೈನ್ಸ್ ಗಳಿಗೆ ಜಿ.ಪಿ.ಎಸ್. ಅಳವಡಿಸಿದ್ದು, ಅಂಬುಲೆನ್ಸ್ ಯಾವ ಸ್ಥಳದಲ್ಲಿವೆ ಎಂಬ ಮಾಹಿತಿ ಬೆರಳ ತುದಿಯಲ್ಲಿಯೇ ದೊರೆಯಲಿದ್ದು, ಇದರಿಂದ ಕೋವಿಡ್ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ವಿಳಂಬಕ್ಕೆ ಆಸ್ಪದ ನೀಡದಂತೆ ಸಮೀಪದ ಆಂಬುಲೆನ್ಸ್ ಬಳಸಿಕೊಳ್ಳಬಹುದಾಗಿದ್ದು, ರಾಜ್ಯದಲ್ಲೇ ಈ ಯೋಜನೆ ಪ್ರಥಮವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

    Click here

    Click here

    Click here

    Call us

    Call us

    ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಬೆಡ್ ಗಳ ಕುರಿತು ಮಾಹಿತಿ ನೀಡಲು ರೂಪಿಸಿರುವ ಬೆಡ್ ಮ್ಯಾನೇಜ್’ಮೆಂಟ್ ಸಿಸ್ಟಂಅನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ಈ ಯೋಜನೆಯ ಪ್ರಕಾರ ಜಿಲ್ಲೆಯಲ್ಲಿನ ಕೊರೋನಾ ರೋಗಿಗೆ ಆತನಿಗೆ ಸಮೀಪದ ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಗಳು ರೋಗಿಗಳಿಗೆ ಖಾಲಿ ಇವೆ, ಏನು ಅಗತ್ಯ ಸೌಲಭ್ಯಗಳಿವೆ ಎಂಬ ಮಾಹಿತಿ ದೊರೆಯಲಿದೆ.

    ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಕೋವಿಡ್-19 ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ , ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

    ಕೋವಿಡ್ ಲ್ಯಾಬ್ ನಿರ್ಮಾಣಕ್ಕೆ ₹ 1 ಕೋಟಿ ತಗುಲಿದ್ದು, ಅತ್ಯಾಧುನಿಕ ಯಂತ್ರಗಳು ಹಾಗೂ ಉಪಕರಣಗಳನ್ನು ಅಳವಡಿಸಲಾಗಿದೆ. ‘ಲ್ಯಾಬ್ ಕಟ್ಟಡ ಕಾಮಗಾರಿಗೆ ₹ 45 ಲಕ್ಷ ವೆಚ್ಚವಾಗಿದೆ. ಪ್ರಯೋಗಾಲಯದಲ್ಲಿ ಒಬ್ಬರು ಮೈಕ್ರೊಬಯಾಲಜಿಸ್ಟ್ ಹಾಗೂ 8 ಲ್ಯಾಬ್ ಟೆಕ್ನಿಷಿಯನ್‌ಗಳ‌ ನೇಮಕ ಮಾಡಲಾಗಿದ್ದು, ಮೈಕ್ರೊ ಬಯಾಲಜಿಸ್ಟ್ ಹಾಗೂ ಇಬ್ಬರು ಲ್ಯಾಬ್ ಟೆಕ್ನಿಷಿಯನ್‌ಗಳಿಗೆ ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ತರಬೇತಿ ನೀಡಲಾಗಿದೆ’. ‘ಸಂಪೂರ್ಣ ಹವಾನಿಯಂತ್ರಿತ ಲ್ಯಾಬ್‌ನಲ್ಲಿ ಒಂದು ಬಾರಿಗೆ 96 ಸ್ಯಾಂಪಲ್‌ಗಳ ಪರೀಕ್ಷೆ ಮಾಡಬಹುದಾಗಿದ್ದು, ವರದಿಗೆ 4 ರಿಂದ 6 ಗಂಟೆ ಬೇಕಾಗುತ್ತದೆ. ಅದರ ಪ್ರಕಾರ, ಲ್ಯಾಬ್‌ನಲ್ಲಿ ದಿನಕ್ಕೆ ಗರಿಷ್ಠ 300 ಮಾದರಿ ಪರೀಕ್ಷಿಸಿ ವರದಿ ಪಡೆಯಬಹುದು. ಮಾದರಿ ಸಂಗ್ರಹದಿಂದ ವರದಿಯ ಫಲಿತಾಂಶದವರೆಗಿನ ಎಲ್ಲ ಪ್ರಕ್ರಿಯೆಗಳು ಆನ್‌ಲೈನ್‌ನಲ್ಲಿ ದಾಖಲಾಗಲಿದ್ದು, ಐಸಿಎಂಆರ್ ಮಾರ್ಗಸೂಚಿಯನ್ವಯ ನಡೆಯಲಿದೆ. ಸಿಬ್ಬಂದಿ ಪಿಪಿಇ ಕಿಟ್ ಧರಿಸಿ ಪರೀಕ್ಷೆ ನಡೆಸಲಿದ್ದಾರೆ. ‘ಆರಂಭದಲ್ಲಿ ರೋಗಿಗಳ ಮಾದರಿಯನ್ನು ಪ್ರೊಸೆಸಿಂಗ್ ಕೊಠಡಿ ಯಲ್ಲಿ ಸ್ವೀಕರಿಸಿ, ಬಯೋ ಸೇಪ್ಟಿ ಕ್ಯಾಬಿನೆಟ್‌ನಲ್ಲಿಟ್ಟು, ಬಳಿಕ ಪಾಸ್ ಬಾಕ್ಸ್ ಮೂಲಕ ಪರೀಕ್ಷಾ ಕೊಠಡಿಗೆ ರವಾನಿಸಲಾಗುವುದು. ನಂತರ ಆರ್‌ಟಿಪಿಸಿಆರ್ ಯಂತ್ರದಿಂದ ಮಾದರಿ ಪರೀಕ್ಷೆ ಗೊಳಪಡಿಸಲಾಗುವುದು’

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d