Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದುಬೈಯಲ್ಲಿ ಬಸವರಾಜ್ ಶೆಟ್ಟಿಗಾರ್‌ರವರಿಗೆ ಸನ್ಮಾನ
    ಕುಂದಾಪ್ರದ್ ಸುದ್ಧಿ

    ದುಬೈಯಲ್ಲಿ ಬಸವರಾಜ್ ಶೆಟ್ಟಿಗಾರ್‌ರವರಿಗೆ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ:  ದುಬೈನ ಯುನೈಟೆಡ್ ಅರಬ್ ಎಮಿರೇಟ್ಸ್ ಪದ್ಮಶಾಲಿ ಸಮುದಾಯದ ಕನ್ನಡಿಗರ ಸಂಘದ ವತಿಯಿಂದ ಇತ್ತೀಚೆಗೆ ಸಿಂಧ್ ಸೆಂಟರ್ ಹಾಲ್‌ನಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಪೌರೋಹಿತ್ಯವನ್ನು ಮಾಡಿ ಹಾಗೂ ಧಾರ್ಮಿಕ ಪ್ರವಚನ ನೀಡಿದ ವಾಸ್ತುತಜ್ಞ, ಜ್ಯೋತಿಷಿ ಬಸವರಾಜ್ ಶೆಟ್ಟಿಗಾರರಿಗೆ ೨೧೫ನೇ ಸನ್ಮಾನ ಅದ್ಧೂರಿಯಾಗಿ ಜರಗಿತು.

    Click Here

    Call us

    Click Here

    ಅಧ್ಯಕ್ಷರಾದ ರವಿ ಕಾರ್ಕಳ್‌ರವರು ಶೆಟ್ಟಿಗಾರರನ್ನು ಸನ್ಮಾನಿಸಿ ಮಾತನಾಡುತ್ತಾ ಸಾಮಾನ್ಯವಾಗಿ ಪ್ರತಿಯೊಬ್ಬರು ಯಾವುದಾದರು ಒಂದೇ ರಂಗದಲ್ಲಿ ಸಾಧನೆ ಮಾಡುವವರನ್ನು ಕಾಣಬಹುದು. ಆದರೆ ಬಸವರಾಜರು ವಾಸ್ತುಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಧಾರ್ಮಿಕ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಯಕ್ಷಗಾನರಂಗ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪದ್ಮಶಾಲಿ ಸಮಾಜದ ಅನರ್ಘ್ಯರತ್ನರಾಗಿದ್ದಾರೆ ಎಂದರೆ ಅತಿಶಯೋಕ್ತಿಯಾಗಲಾರದು.

    ಶಾರ್ಜದ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರಾದ ಗಣೇಶ್ ರೈಯವರು ಮಾತನಾಡುತ್ತಾ ಕೇರಳದಲ್ಲಿ ಪಾಂಡಿತ್ಯವನ್ನು ಅರ್ಜಿಸಿಕೊಂಡ ಶೆಟ್ಟಿಗಾರರ ಪೌರೋಹಿತ್ಯದಲ್ಲಿ ನಡೆದ ಸತ್ಯನಾರಾಯಣ ಪೂಜೆ ಹಾಗೂ ತಾಳಮದ್ದಲೆಯ ಅರ್ಥದಂತೆ ಮಾಡಿದ ಕಥಾರೂಪಕ ನಭೂತೋ ನಭವಿಷ್ಯತಿ ಎಂಬಂತೆ ಯಶಸ್ವಿಯಾಗಿದ್ದು ನನ್ನ ಜೀವನದಲ್ಲಿ ಇಂತಹ ಸಂಪ್ರದಾಯಬದ್ಧ ಪೂಜೆಯನ್ನು ನೋಡಿದ್ದು ಜನ್ಮಸಾರ್ಥಕ್ಯವನ್ನು ಪಡೆದುಕೊಂಡ ಅನುಭವವಾಗಿದೆ. ಶೆಟ್ಟಿಗಾರರು ವಿಶ್ವಮಿತ್ರನಂತೆ ಛಲವನ್ನು ಇರಿಸಿಕೊಂಡು ಬ್ರಹ್ಮಜ್ಞಾನವನ್ನು ಅರ್ಜಿಸಿಕೊಂಡಿರುವುದು ಪದ್ಮಶಾಲಿ ಸಮಾಜಕ್ಕೆ ಹೆಮ್ಮೆ ತಂದಂತಾಗಿದೆ ಎಂದು ಶುಭಹಾರೈಸಿದರು.

    ಬಸವರಾಜ್ ಶೆಟ್ಟಿಗಾರರು ಸನ್ಮಾನಕ್ಕೆ ಉತ್ತರಿಸುತ್ತ – ನನ್ನ ಜೀವನದಲ್ಲಿ 200ಕ್ಕೂ ಮಿಕ್ಕಿ ಸನ್ಮಾನ ನಡೆದಿರಬಹುದು. ಆದರೆ ಬಹುಜನರ ಅಪೇಕ್ಷೆಯ ಮೇರೆಗೆ ಪೌರೋಹಿತ್ಯದ ಉಡುಗೆಯಲ್ಲೇ ಸನ್ಮಾನ ಪಡೆದಿರುವುದು ಪ್ರಥಮವಾಗಿದೆ. ಈ ಸನ್ಮಾನವನ್ನು ಹಲವು ರಂಗದಲ್ಲಿ ವಿದ್ಯೆ ನೀಡಿದ ದ್ವಾದಶ ಆದಿತ್ಯರಂತೆ ರಾರಾಜಿಸುವ ಗುರುಗಳ ಸಿರಿಚರಣಕ್ಕೆ ಅರ್ಪಿಸುತ್ತೇನೆಂದು ಧನ್ಯತಾಃ ಭಾವದಿಂದ ಹೇಳಿದರು.

    ಸಮಾರಂಭದಲ್ಲಿ ಜೈನ್‌ಮಿಲನ್‌ನ ಉಪಾಧ್ಯಕ್ಷ ಸಂದೇಶ್ ಜೈನ್, ದುಬೈಯ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಪೂಜಾರಿ, ಮೊಗವೀರ ಸಂಘದ ಉಪಾಧ್ಯಕ್ಷ ಬಾಲ ಸಾಲಿಯಾನ್, ಶಾರ್ಜ ಕರ್ನಾಟಕ ಸಂಘದ ಅಧ್ಯಕ್ಷ ಶಾಂತಾರಾಮ ಆಚಾರ್ಯ, ನಾರಾಯಣ ಸೇವಾ ಸಮಿತಿಯ ಗಿರಿಧರ್ ನಾಯಕ್, ವಿಶ್ವಕರ್ಮ ಸಂಘದ ಅಧ್ಯಕ್ಷ ಪ್ರಶಾಂತ್ ಆಚಾರ್ಯ, ಅಮ್ಚೇಗಲ್ ಸಮಾಜ ಸಂಘದ ಮಾಜಿ ಅಧ್ಯಕ್ಷ ಶೈಲೇಶ್ ಶೆಣೈ ಉಪಸ್ಥಿತರಿದ್ದು ಶುಭ ಹಾರೈಸಿದರು.

    Click here

    Click here

    Click here

    Call us

    Call us

    ಪದ್ಮಶಾಲಿ ಸಮುದಾಯದ ಕಾರ್ಯದರ್ಶಿ ಸಚೀಂದ್ರನಾಥ್ ಸ್ವಾಗತಿಸಿದರು. ಉಪಾಧ್ಯಕ್ಷ ಶುಭಕರ್ ವಕ್ವಾಡಿ, ಶ್ರೀಮತಿ ಅರುಂಧತಿ, ರಘುರಾಮ್ ಕುಕ್ಕೆಕಟ್ಟೆ ಅತಿಥಿಗಳನ್ನು ಗೌರವಿಸಿದರು. ಡಾ| ಪದ್ಮನಾಭ ಮಿಜಾರ್ ಕಾರ್ಯಕ್ರಮ ನಿರೂಪಿಸಿದರೆ, ಕೀರ್ತಿಕುಮಾರ್ ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d