Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಯಂ ಸೇವೆಗೆ ವೈದ್ಯರು, ನರ್ಸ್‌ಗಳು ಮತ್ತು ಲ್ಯಾಬ್ ಟೆಕ್ನೀಷಿಯನ್ಸ್ ನೊಂದಾಯಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಸ್ವಯಂ ಸೇವೆಗೆ ವೈದ್ಯರು, ನರ್ಸ್‌ಗಳು ಮತ್ತು ಲ್ಯಾಬ್ ಟೆಕ್ನೀಷಿಯನ್ಸ್ ನೊಂದಾಯಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ರೋಗಿಗಳ ಚಿಕಿತ್ಸೆ ಬಗ್ಗೆ ಹಾಲಿ ಇರುವ ವ್ಯವಸ್ಥೆಯನ್ನು ಉನ್ನತಿಕರಿಸಬೇಕಾದ ಅಗತ್ಯತೆ ಇದೆ. ಅದೇ ರೀತಿ ವೈದ್ಯರು/ಸ್ಟಾಫ್ ನರ್ಸ್‌ಗಳ ಅಗತ್ಯವಿದೆ.

    Click Here

    Call us

    Click Here

    ಅಲ್ಲದೇ ಲ್ಯಾಬ್‌ಗಳಲ್ಲಿ ಲ್ಯಾಬ್ ಟೆಕ್ನೀಶೀಯನಗಳ ಕೆಲಸ ಅವಶ್ಯಕತೆ ಇರುತ್ತದೆ. ಆದುದರಿಂದ ಸ್ವಯಂ ಪ್ರೇರಿತರಾಗಿ ಕಾರ್ಯನಿರ್ವಹಿಸಲು ಇಚ್ಚಿಸುವ ವೈದ್ಯರು, ಸ್ಟಾಫ್ ನರ್ಸ್‌ಗಳು ಮತ್ತು ಲ್ಯಾಬ್ ಟೆಕ್ನಿಶಿಯನ್‌ಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉಡುಪಿ ಇವರನ್ನು ಸಂಪರ್ಕಿಸಬಹುದಾಗಿದೆ.

    ಜಿಲ್ಲೆಯ ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ವೆಂಟಿಲೇಟರ್‌ಗಳು ಮತ್ತು ಹೈ ಪ್ರೆಜರ್ ಆಕ್ಸಿಜನ್ ಸಿಸ್ಟಮ್‌ಗಳ ತೀರಾ ಅವಶ್ಯಕತೆ ಇರುವುದರಿಂದ ವೆಂಟಿಲೇಟರ್ ಹಾಗೂ ಹೈ ಪ್ರೆಜರ್ ಆಕ್ಸಿಜನ್ ಸಿಸ್ಟಮ್‌ಗಳನ್ನು ನೀಡಲು ಇಚ್ಚಿಸುವ ದಾನಿಗಳು /ಸಂಘ ಸಂಸ್ಥೆಗಳು ಜಿಲ್ಲಾಧಿಕಾರಿ ಕಚೇರಿಗೆ ಹಸ್ತಾಂತರಿಸಿ ಕೋವಿಡ್ -೧೯ ನಿಯಂತ್ರಣದಲ್ಲಿ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಸಹಕರಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

    ಕ್ವಾರಂಟೈನ್ ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ:
    ಜಾಗತಿಕ ಸೋಂಕಾಗಿರುವ ಕೋವಿಡ್-19 ರೋಗವು ಹರಡುವುದನ್ನು ನಿಯಂತ್ರಣ ಮಾಡುವ ಹಾಗೂ ಇದರಿಂದಾಗಿ ಉಂಟಾಗುವ ಅನಾರೋಗ್ಯ ಸ್ಥಿತಿ ಮತ್ತು ಮರಣಗಳನ್ನು ತಡೆಗಟ್ಟುವ ಸಲುವಾಗಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿಗಳನ್ನು ,ಪ್ರಥಮ ಸಂಪರ್ಕಿಸಿರುವ (Primary Contact) ವ್ಯಕ್ತಿಗಳನ್ನು ಹಾಗೂ ಹೊರ ರಾಜ್ಯ/ದೇಶ ದಿಂದ ಬರುವ ವ್ಯಕ್ತಿಗಳನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತದೆ.

    ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮದ ಹಿತದೃಷ್ಟಿಯಿಂದ ಹೊರ ರಾಜ್ಯ/ದೇಶ ಪ್ರಯಾಣಿಕರು, ಕೋವಿಡ್-19 ಸೋಂಕಿತರು ಮತ್ತು ಪ್ರಥಮ ಸಂಪರ್ಕಿತರು ಕಡ್ಡಾಯವಾಗಿ ಹೋಂ ಕ್ವಾರಂಟೈನ್ಗೆ ಒಳಪಡುವುದನ್ನು ಖಾತ್ರಿಪಡಿಸಲು ಮತ್ತು ನೀಡಲಾದ ಸೂಚನೆಗಳನ್ನು ಅನುಸರಣೆ ಮಾಡುವ ಸಲುವಾಗಿ ಹಾಗೂ ಹೋಂ ಕ್ವಾರಂಟೈನ್ನ್ನು ಕಟ್ಟು ನಿಟ್ಟಾಗಿ ಪಾಲಿಸುವ ಸಲುವಾಗಿ ಹೋಂ ಕ್ವಾರಂಟೈನ್ ನ್ನು ಉಲ್ಲಂಘನೆ ಮಾಡಿರುವ ವ್ಯಕ್ತಿಯ ವಿರುದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005 ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂ ತೆ ಸರಕಾರದಿಂದ ನಿರ್ದೇಶನ ಇರುತ್ತದೆ.

    Click here

    Click here

    Click here

    Call us

    Call us

    Home Quarantine Watch App ತಂತ್ರಶಾದ ಮುಖಾಂತರ ಹೋಂ ಕ್ವಾರಂಟೈನ್ ನಲ್ಲಿ ಇರುವವರನ್ನು ಪ್ರತಿದಿನ ನಿಗದಿತ ಅಧಿಕಾರಿಗಳ ಮುಖಾಂತರ ಭೌತಿಕವಾಗಿ ಪರಿಶೀಲನೆ ನಡೆಸಲಾಗುತ್ತಿದೆ ,ಅಲ್ಲದೇ ಕ್ವಾರಂಟೈನ್ ನಲ್ಲಿ ಇರುವ ವ್ಯಕ್ತಿಗಳು ತಮ್ಮ ಸೆಲ್ಫಿಯನ್ನು Upload ಮಾಡಬೇಕಿದೆ. ಅಲ್ಲದೇ Quarantine Geo Fencing Breach ಮುಖಾಂತರ ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಗಂಘಿಸಿರುವವರನ್ನು ವೈಜ್ಞಾನಿಕವಾಗಿ ಪತ್ತೆ ಹಚ್ಚಲಾಗುತ್ತಿದೆ. ಇಂತಹವರ ವಿರುದ್ಧ ಈಗಾಗಲೇ 11 FIR ದಾಖಲಿಸಲಾಗಿದೆ.

    ಆದ್ದರಿಂದ ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ಗೆ ಒಳಪಟ್ಟ ಯಾವುದೇ ವ್ಯಕ್ತಿಗಳು ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವ್ಯಕ್ತಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಲು ಆಯಾ ತಾಲೂಕಿನ ತಹಶೀಲ್ದಾರರು , ಕಾರ್ಯ ನಿರ್ವಾಹಣಾಧಿಕಾರಿಗಳು ಮತ್ತು Flying Squad ಇವರುಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಸಾರ್ವಜನಿಕರ ಸ್ವಾಸ್ಥ್ಯ ದ ಹಿತದೃಷ್ಠಿಯಿಂದ ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘನೆ ಮಾಡಿದಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ರೀತಿಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d