Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಡಿಸಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾಸ್ಕ್ ಹಾಕದ, ಸಾಮಾಜಿಕ ಅಂತರ ಪಾಲಿಸದವರಿಂದ ದಂಡ ವಸೂಲಿ
    ಉಡುಪಿ ಜಿಲ್ಲೆ

    ಉಡುಪಿ ಡಿಸಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾಸ್ಕ್ ಹಾಕದ, ಸಾಮಾಜಿಕ ಅಂತರ ಪಾಲಿಸದವರಿಂದ ದಂಡ ವಸೂಲಿ

    Updated:21/07/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ: ಕೋವಿಡ್ -19 ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಪಾಲನೆ ಕುರಿತಂತೆ ಸಾರ್ವಜನಿಕರು ಈ ನಿಯಮಗಳ ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಮಂಗಳವಾರ ಉಡುಪಿ ನಗರದಲ್ಲಿ ದಿಢೀರ್ ದಾಳಿ ನಡೆಸಿ, ನಿಮಯಗಳ ಪಾಲನೆ ಮಾಡದವರಿಗೆ ದಂಡ ವಿಧಿಸುವ ಮೂಲಕ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ರವಾನಿಸಿದರು.

    Click Here

    Call us

    Click Here

    ಮಂಗಳವಾರ ಜಿಲ್ಲೆಯ ಎಲ್ಲಾ ನಗರಸ್ಥಳಿಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ಗಳಲ್ಲಿ ಏಕಕಾಲಕ್ಕೆ ನಡೆಸಲಾದ ಈ ಕಾರ್ಯಾಚರಣೆಯಲ್ಲಿ, ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಜೊತೆಯಲ್ಲಿ, ಕೋವಿಡ್-19 ನಿಯಂತ್ರಣ ಕುರಿತಂತೆ ಪ್ರತಿಯೊಬ್ಬರ ಜವಾಬ್ದಾರಿ ಕುರಿತು ಅರಿವು ಮೂಡಿಸಲಾಯಿತು.

    ಬಸ್ ಸ್ಟಾö್ಯಂಡ್ ಬಳಿಯ ಹೋಟೆಲ್ ಒಂದನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಹೋಟೆಲ್ ನಲ್ಲಿ ಗ್ರಾಹಕರಿಗೆ ಕೈ ತೊಳೆಯಲು ಸೋಪ್ ಇಡದ ಕಾರಣ ಮಾಲೀಕರಿಗೆ ದಂಡ ವಿಧಿಸಿದರು, ಪೆಟ್ರೋಲ್ ಬಂಕ್ ನಲ್ಲಿ ಕ್ಯಾಷಿಯರ್ ಕೈಗವಸು ತೊಡದೆ ಹಣ ಪಡೆಯುವುದನ್ನು ಕಂಡ ಜಿಲ್ಲಾಧಿಕಾರಿಗಳು, ನೋಟಿನಿಂದಲೂ ಸಹ ಕೋವಿಡ್-19 ಹರಡಲಿದ್ದು, ಎಚ್ಚರಿಕೆ ವಹಿಸುವಂತೆ ಸೂಚಿಸಿ, ಸುರಕ್ಷತಾ ಕ್ರಮ ಪಾಲಿಸಿದ ಕ್ಯಾಷಿಯರ್ ಗೆ ದಂಢ ವಿಧಿಸಿದರು. ಮೆಡಿಕಲ್ ಶಾಪ್ ಒಂದರಲ್ಲಿ ಸೂಕ್ತ ರೀತಿಯಲ್ಲಿ ಮಾಸ್ಕ್ ಧರಿಸದ ಅಂಗಡಿ ಮಾಲೀಕರಿಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ, ಮೆಡಿಕಲ್ ನಲ್ಲಿ ವೈದ್ಯರ ಅನುಮತಿಯಿಲ್ಲದೇ ಜ್ವರ ಶೀತ ಕೆಮ್ಮು ರೋಗಗಳಿಗೆ ಔಷಧ ವಿತರಿಸದಂತೆ ಸೂಚನೆ ನೀಡಿದರು. ಅಂಗಡಿಯಲ್ಲಿ ಮಾಸ್ಕ್ ಧರಿಸದ ಅಂಗಡಿ ಮಾಲೀಕ ಮತ್ತು ಸಿಬ್ಬಂದಿಗಳಿಗೆ ದಂಡ ವಿಧಿಸಿದರು. ಹೋಟೆಲ್ ಒಂದರಲ್ಲಿ ಅಗತ್ಯ ಸುರಕ್ಷತಾ ಕ್ರಮ ಪಾಲಿಸುತ್ತಿರುವ ಕುರಿತು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

    ನಂತರ ರಿಲಯನ್ಸ್ ಮಳಿಗೆಗೆ ತೆರಳಿದ ಜಿಲ್ಲಾಧಿಕಾರಿ, ಮಳಿಗೆ ಒಳಗೆ ಸೀಮಿತ ಸಂಖ್ಯೆಯ ಗ್ರಾಹಕರಿಗೆ ಮಾತ್ರ ಅನುಮತಿ ನೀಡುವಂತೆ ಹಾಗೂ ಎಲ್ಲಾ ಗ್ರಾಹಕರು ಮಾಸ್ಕ್ ಧರಿಸಿ ಖರೀದಿ ನಡೆಸುವ ಕುರಿತು ಪರಿಶೀಲನೆ ನಡೆಸಲು ಸೂಚಿಸಿ, ್ತ ಒಂದೇ ವಸ್ತುಗಳ ಬಳಿ ಸಾಮಾಜಿಕ ಅಂತರವಿಲ್ಲದೇ ಗ್ರಾಹಕರು ಖರೀದಿ ನಡೆಸದಂತೆ ಒಬ್ಬ ಸಿಬ್ಬಂದಿಯನ್ನು ಪರಿಶೀಲನೆಗೆ ನಿಯೋಜಿಸುವಂತೆ ಸೂಚನೆ ನೀಡಿದರು.

    ನಗರಸಭೆಯ ಅಧಿಕಾರಿಗಳು ಪ್ರತಿದಿನ ಕೋವಿಡ್-19 ನಿಯಮ ಉಲ್ಲಂಘನೆ ಕುರಿತು ಪರಿಶೀಲಿಸಿ, ಕಟ್ಟುನಿಟ್ಟಾಗಿ ದಂಡ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಸಭೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೋಹನ್ ರಾಜ್, ಇಂಜಿನಿಯರ್ ದುರ್ಗಾಪ್ರಸಾದ್, ಕಂದಾಯ ಅಧಿಕಾರಿ ಧನಂಜಯ, ಮೆನೇಜರ್ ವೆಂಕಟರಮಣಯ್ಯ, ಸಮುದಾಯ ಆರೋಗ್ಯ ವಿಭಾಗದ ನಾರಾಯಣ್, ಆರೋಗ್ಯ ನಿರೀಕ್ಷಕ ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಜಿಲ್ಲೆಯಲ್ಲಿ ಏಕಕಾಲಕ್ಕೆ ಮಾಸ್ಕ್ ಧರಿಸದವರಿಂದ ದಂಡ ವಸೂಲಿ:
    ಜಿಲ್ಲಾದ್ಯಂತ ನಡೆದ ಈ ಕಾರ್ಯಾಚರಣೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಲ್ಲೆಯ ನಗರ ಆಡಳಿತ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಗಳ ಅಧಿಕಾರಿಗಳು ಭಾಗವಹಿಸಿದ್ದು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನಜಾಗೃತಿ ಹಾಗೂ ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡಲಾಗಿದೆ.

    ಉಡುಪಿ ನಗರ ವ್ಯಾಪ್ತಿಯಲ್ಲಿ ಒಟ್ಟು 16 ಪ್ರಕರಣ ದಾಖಲಿಸಿದ್ದು ರೂ. 1,600 ದಂಡ ವಿಧಿಸಲಾಗಿದೆ. ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಒಟ್ಟು 22 ಪ್ರಕರಣ ದಾಖಲಿಸಿದ್ದು ರೂ. 2200 ದಂಡ ವಿಧಿಸಲಾಗಿದೆ. ಕಾಪು ವ್ಯಾಪ್ತಿಯಲ್ಲಿ ಒಟ್ಟು 8 ಪ್ರಕರಣದಿಂದ 800 ರೂ. ದಂಡ, ಕಾರ್ಕಳ ನಗರ ವ್ಯಾಪ್ತಿಯಲ್ಲಿ ಒಟ್ಟು 32 ಪ್ರಕರಣಗಳಿಂದ ರೂ. 3200 ದಂಡ ಹಾಗೂ ಸಾಲಿಗ್ರಾಮ ಪಟ್ಟಣ ವ್ಯಾಪ್ತಿಯಲ್ಲಿ ಒಟ್ಟು 15 ಪ್ರಕರಣಗಳಿಂದ ರೂ. 1500 ದಂಡ ವಸೂಲಿ ಮಾಡಲಾಗಿದೆ.

    ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 90 ಪ್ರಕರಣಗಳಿಂದ ರೂ.9000 ದಂಡ, ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 36 ಪ್ರಕರಣಗಳಿಂದ ರೂ. 3600 ದಂಡ, ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 48 ಪ್ರಕರಣಗಳಿಂದ ರೂ.4800 ದಂಡ, ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 59 ಪ್ರಕರಣಗಳಿಂದ ರೂ. 5900 ದಂಡ, ಕಾಪು ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 50 ಪ್ರಕರಣಗಳಿಂದ ರೂ.2000 ದಂಡ, ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 27 ಪ್ರಕರಣಗಳಿಂದ ರೂ. 2700 ದಂಡ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 9 ಪ್ರಕರಣಗಳಿಂದ ರೂ. 900 ದಂಡ ವಸೂಲಿ ಮಾಡಲಾಗಿದೆ.

    ಮಾಸ್ಕ್ ಧರಿಸದವರಿಗೆ ನಗರ ಪ್ರದೇಶದಲ್ಲಿ ಒಟ್ಟು ರೂ. 9300 ಹಾಗೂ ಗ್ರಾಮೀಣ ಪ್ರದೇಶದಲ್ಲಿ ಒಟ್ಟು ರೂ. 28900 ದಂಡ ವಿಧಿಸಲಾಗಿದೆ.

    ಇದನ್ನೂ ಓದಿ:
    ► ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಮಂಗಳವಾರ 84 ಪಾಸಿಟಿವ್ ದೃಢ – https://kundapraa.com/?p=39748 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.