ಉಡುಪಿ ಪಿಎಂಜೆಕೆವೈ ಪ್ರಚಾರ ಪ್ರಸಾರ ಅಭಿಯಾನ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಅಕ್ಷತಾ ಗಿರೀಶ್ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇಂದ್ರ ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ರಚಿಸಲ್ಪಟ್ಟಿರುವ “ಪ್ರಧಾನಮಂತ್ರಿ ಜನಕಲ್ಯಾಣಕಾರಿ ಯೋಜನೆ ಪ್ರಚಾರ ಪ್ರಸಾರ ಅಭಿಯಾನದ ಮಹಿಳಾ ವಿಭಾಗ ಅಧ್ಯಕ್ಷರಾಗಿ ಅಕ್ಷತಾ ಗಿರೀಶ್ ಆಯ್ಕೆಯಾಗಿದ್ದಾರೆ. ಅಕ್ಷತಾ ಅವರು ಪತ್ರಕರ್ತೆಯಾಗಿ, ಟಿ.ವಿ. ನಿರೂಪಕರಾಗಿ, ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಸಕ್ರೀಯರಾಗಿದ್ದು, ಜೆಸಿಐ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮೂಲಕ, ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸಿದ ಕೀರ್ತಿ ಹೊಂದಿದ್ದಾರೆ.

Call us

Click Here

ಮಹಿಳಾ ವಿಭಾಗದ ಸಂಘಟನಾ ಕಾರ್ಯದರ್ಶಿ ಲಕ್ಷೀ ಪಿ., ಎಸ್ ಸಹ ಕಾರ್ಯದರ್ಶಿ ಕಸ್ತೂರಿ ಆಚಾರ್ಯ ಆಯ್ಕೆಯಾಗಿದ್ದಾರೆ.

ಪ್ರಧಾನಮಂತ್ರಿ ಜನಕಲ್ಯಾಣಕಾರಿ ಯೋಜನೆ ಪ್ರಚಾರ ಪ್ರಸಾರ ಅಭಿಯಾನದ ಉಡುಪಿ ಜಿಲ್ಲಾಧ್ಯಕ್ಷರಾಗಿ ಮನ್ ಸುಖ್ ಲಾಲ್ ಜೆ. ಪಟೇಲ್, ಸಂಘಟನಾ ಕಾರ್ಯದರ್ಶಿ ನಟೇಶ್ ವೈ ಆರ್. ಉಡುಪಿ, ಸಹ ಕಾರ್ಯದರ್ಶಿ ಮೋಹನ್ ಭಟ್, ಯುವ ವಿಭಾಗ ಅಧ್ಯಕ್ಷರಾಗಿ ರಘುನಾಥ ಜೆ. ಆಚಾರ್ಯ, ಸಂಘಟನಾಕಾರ್ಯದರ್ಶಿ ಅಶೋಕ್ ಕಿಣಿ, ಗ್ರಾಮ ವಿಕಾಸ ಅಧ್ಯಕ್ಷರಾಗಿ ಮಕರಂದ ಪಡುಬಿದ್ರಿ, ಸಂಘಟನಾ ಕಾರ್ಯದರ್ಶಿ ವಿಜಯಕುಮಾರ್ ಶೆಟ್ಟಿ, ಕಾನೂನು ವಿಭಾಗ ದಿನೇಶ್ ಸಿ ನಾಯ್ಕ್. ಐಟಿ ವಿಭಾಗ ಚೇತನ್ ಹೆಗ್ಡೆ ಅವರು ಆಯ್ಕೆಯಾಗಿರುತ್ತಾರೆ.

Leave a Reply