Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್.ಎಸ್.ಎಲ್‌.ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆಗೆ ಎ ಗ್ರೇಡ್, 7ನೇ ಸ್ಥಾನ
    ಉಡುಪಿ ಜಿಲ್ಲೆ

    ಎಸ್.ಎಸ್.ಎಲ್‌.ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆಗೆ ಎ ಗ್ರೇಡ್, 7ನೇ ಸ್ಥಾನ

    Updated:10/08/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು,ಈ ಕುರಿತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಟಿಯಲ್ಲಿ ಫಲಿತಾಂಶದ ಮಾಹಿತಿ ನೀಡಿದ್ದಾರೆ.

    Click Here

    Call us

    Click Here

    ಈ ಭಾರಿ ಗ್ರೇಡ್ ಪದ್ದತಿ ಇದ್ದು 10 ಜಿಲ್ಲೆಗಳು ಎ ಗ್ರೇಡ್, 20 ಜಿಲ್ಲೆಗಳು ಬಿ ಗ್ರೇಡ್ ಹಾಗೂ 4 ಜಿಲ್ಲೆಗಳು ಸಿ ಗ್ರೇಡ್ ಪಡೆದಿವೆ. (34 ಶೈಕ್ಷಣಿಕ ಜಿಲ್ಲೆಗಳು) ಒಟ್ಟಾರೆ ಶೇ. 71.81 ಫಲಿತಾಂಶ ಈ ಬಾರಿ ಬಂದಿದೆ. ಕಳೆದ ಬಾರಿ ಶೇ.73.70 ರಷ್ಟು ಫಲಿತಾಂಶ ಬಂದಿತ್ತು. ಉಡುಪಿ ಜಿಲ್ಲೆ ಎ ಗ್ರೇಡ್‌ನಲ್ಲಿದ್ದು 7ನೇ ಸ್ಥಾನದಲ್ಲಿದೆ, ಉತ್ತರ ಕನ್ನಡ ಜಿಲ್ಲೆ ಎ ಗ್ರೇಡ್‌ನಲ್ಲಿದ್ದು, 10ನೇ ಸ್ಥಾನದಲ್ಲಿದೆ, ದ.ಕ ಜಿಲ್ಲೆ ಬಿ. ಗ್ರೇಡ್‌ನಲ್ಲಿದ್ದು 12ನೇ ಸ್ಥಾನ ಪಡೆದುಕೊಂಡಿದೆ.

    ಎ ಗ್ರೇಡ್ ಜಿಲ್ಲೆಗಳು: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಧುಗಿರಿ, ಮಂಡ್ಯ, ಚಿತ್ರದುರ್ಗ, ಕೋಲಾರ, ಉಡುಪಿ, ರಾಮನಗರ, ಹಾಸನ, ಉತ್ತರ ಕನ್ನಡ ಜಿಲ್ಲೆಗಳು, ಬಿ ಗ್ರೇಡ್ ಜಿಲ್ಲೆಗಳು:  ಚಾಮರಾಜನಗರ, ಮಂಗಳೂರು, ಬಳ್ಳಾರಿ, ತುಮಕೂರು, ಸಿರಸಿ, ಬೆಂಗಳೂರು ನಾರ್ಥ್, ದಾವಣಗೆರೆ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕಲಬುರ್ಗಿ, ಕೊಪ್ಪಳ, ಬೀದರ್, ವಿಜಯವಾಡ, ಬಾಗಲಕೋಟೆ, ಧಾರವಾಡ, ರಾಯಚೂರು, ಬೆಂಗಳೂರು ಸೌಥ್, ಚಿಕ್ಕೂಡಿ ಹಾಗೂ ಸಿ ಗ್ರೇಡ್ ಜಿಲ್ಲೆಗಳು:  ಬೆಳಗಾವಿ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳು ಪಡೆದುಕೊಂಡಿವೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಸನ್ನಿಧಿ ಮಹಾಬಲೇಶ್ವರ ಹೆಗಡೆ (ಸಿರಸಿ), ಚಿರಾಯು (ನಾರಸಂದ್ರ) ನಿಖಿಲೇಶ್ ಮರಳಿ (ಬೆಂಗಳೂರು), ಧೀರಜ್ ಶೆಡ್ಡಿ (ಮಾರದೇವನಹಳ್ಳಿ), ಅನುಶ್ (ಸುಬ್ರಹ್ಮಣ್ಯ), ತನ್ಮಯಿ (ಚಿಕ್ಕಮಗಳೂರು) ಈ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದುಕೊಂಡಿದ್ದಾರೆ.

    ಒಟ್ಟು 6 ವಿದ್ಯಾರ್ಥಿಗಳು 625 ರಲ್ಲಿ 625 ಅಂಕ ಗಳಿಸಿದ್ದಾರೆ. 11 ವಿದ್ಯಾರ್ಥಿಗಳು 625ರಲ್ಲಿ 624 ಅಂಕ, 43 ವಿದ್ಯಾರ್ಥಿಗಳು 623, 56 ವಿದ್ಯಾರ್ಥಿಗಳು 622 ಅಂಕ, 68 ವಿದ್ಯಾರ್ಥಿಗಳು 621 ಹಾಗೂ 117 ವಿದ್ಯಾರ್ಥಿಗಳು 620 ಅಂಕ ಪಡೆದುಕೊಂಡಿದ್ದಾರೆ. 37,450 ವಿದ್ಯಾರ್ಥಿಗಳು ಎ+ ಗ್ರೇಡ್, 10,5,345 ಎ ವಿದ್ಯಾರ್ಥಿಗಳು ಗ್ರೇಡ್, 1,47,801 ಬಿ+ ಗ್ರೇಡ್ ಪಡೆದುಕೊಂಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Call us

    Call us

    ಈ ಭಾರಿ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ 71.81% ಫಲಿತಾಂಶ ಬಂದಿದೆ. ಸರಕಾರಿ ಶಾಲೆಗಳು 72.79% ಫಲಿತಾಂಶ ದಾಖಲಿಸಿದೆ.  ಒಟ್ಟು 8,11,050 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,82,316 ವಿದ್ಯಾರ್ಥಿಗಳು ಉತ್ತಿರ್ಣ, 2,28,734 ವಿದ್ಯಾರ್ಥಿಗಳು ಅನುತ್ತಿರ್ಣರಾಗಿದ್ದಾರೆ. 18,067 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದು, ಮುಂದಿನ ಹಂತದಲ್ಲಿ ಪರೀಕ್ಷೆ ಬರೆಯಲಿದ್ದಾರೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

    ಇಲಾಖೆಯ ಅಧಿಕೃತ ಜಾಲತಾಣಗಳಾದ kseeb.kar.nic.in ಅಥವಾ karresults.nic.in ನಲ್ಲಿಯೂ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು.

    ► ಉಪ್ಪುಂದದ ಸುರಭಿ ಎಸ್. ಶೆಟ್ಟಿ ರಾಜ್ಯಕ್ಕೆ ದ್ವಿತೀಯ. 625ರಲ್ಲಿ 624 ಅಂಕ – https://kundapraa.com/?p=40173 .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.