Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೆಪಿ ಸರಕಾರ ರೈತರು – ಕಾರ್ಮಿಕರನ್ನು ತುಳಿದು, ಉದ್ಯಮಪತಿಗಳ ಬೆಂಬಲಕ್ಕೆ ನಿಂತಿದೆ: ಕೆ. ಗೋಪಾಲ ಪೂಜಾರಿ
    Uncategorized

    ಬಿಜೆಪಿ ಸರಕಾರ ರೈತರು – ಕಾರ್ಮಿಕರನ್ನು ತುಳಿದು, ಉದ್ಯಮಪತಿಗಳ ಬೆಂಬಲಕ್ಕೆ ನಿಂತಿದೆ: ಕೆ. ಗೋಪಾಲ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು/ವಂಡ್ಸೆ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳ ನೀತಿಗಳು ರೈತರು, ಕಾರ್ಮಿಕರು ಹಾಗೂ ಬಡವರ್ಗಕ್ಕೆ ಶಾಪವಾಗಿದೆ. ದೇಶದ ನಾಗರಿಕರಿಗೆ ಅನುಕೂಲ ಮಾಡಿಕೊಡುವ ಬದಲಿಗೆ, ಲಾಭದಾಯಕ ಸಂಸ್ಥೆಗಳನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳಿಗೆ ಮಾರಿರುವುದೇ ಮೋದಿ ಸರ್ಕಾರದ ಮಹಾನ್ ಸಾಧನೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ತಹಶೀಲ್ದಾರರ ಕಛೇರಿ ಎದುರು ಹಾಗೂ ವಂಡ್ಸೆ ಪೇಟೆಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರತ್ಯೇಕವಾಗಿ ಆಯೋಜಿಸಿದ್ದ ಜನದ್ವನಿ – ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

    ರಾಜ್ಯ ಸರ್ಕಾರ ಸುಗ್ರಿವಾಜ್ಞೆಯ ಮೂಲಕ ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ, ಕಾರ್ಮಿಕ ವಿರೋಧ ಕಾಯ್ದೆ ತಿದ್ದುಪಡಿ ಮಾಡಿ ರೈತರು ಹಾಗೂ ಕಾರ್ಮಿಕರನ್ನು ಬೀದಿ ತಳ್ಳುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ ಅವರು ಕೊರೋನಾ ನಿಯಂತ್ರಣದಲ್ಲಿ ವ್ಯಾಪಾಕ ಭ್ರಷ್ಟಾಚಾರ ಕಂಡುಬಂದಿದ್ದು, ಪೆಟ್ರೋಲ್, ಡಿಸೇಲ್ ದರ ಗಗನ್ನಕ್ಕೇರಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಜನರನ್ನು ಸುಲಿಗೆ ಮಾಡುತ್ತಿದೆ. ಇಂತಹ ಸರ್ಕಾರದ ಅವಧಿಯಲ್ಲಿ ಜನಸಾಮಾನ್ಯರು, ಕೂಲಿ ಕಾರ್ಮಿಕರು ಬದುಕು ದುಸ್ತರವಾಗಿದೆ ಎಂದರು.

    ಬೈಂದೂರಿನಲ್ಲಿ ಜರುಗಿದ ಜನಧ್ವನಿ – ಪ್ರತಿಭಟನೆಯಲ್ಲಿ ಈ ಸಂದರ್ಭದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ತಾ.ಪಂ ಸದಸ್ಯ ಜಗದೀಶ ದೇವಾಡಿಗ, ಪ್ರಮೀಳಾ ದೇವಾಡಿಗ, ಕಿಸಾನ್ ಘಟಕದ ರಾಜೇಶ ದೇವಾಡಿಗ, ಪರಿಶಿಷ್ಟ ಪಂಗಡಗಳ ಅಧ್ಯಕ್ಷ ಮಹಾಲಿಂಗ ನಾಯ್ಕ್, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಉಪ್ಪುಂದ, ಕಾರ್ಯಾಧ್ಯಕ್ಷ ಪ್ರಶಾಂತ ಪೂಜಾರಿ, ನಾಗರಾಜ ಗಾಣಿಗ, ಮೋಹನ್ ಪೂಜಾರಿ, ವಾಸು ಪೂಜಾರಿ, ಮಣಿಕಂಠ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಬೈಂದೂರು ತಹಶೀಲ್ದಾರ ಬಿ.ಪಿ. ಪೂಜಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

    Click here

    Click here

    Click here

    Click Here

    Call us

    Call us

    ವಂಡ್ಸೆಯಲ್ಲಿ ಜರುಗಿದ ಜನಧ್ವನಿ – ಪ್ರತಿಭಟನೆಯಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ಕುಮಾರ್ ಶೆಟ್ಟಿ, ಮುಖಂಡರುಗಳಾದ ಮಂಜಯ್ಯ ಶೆಟ್ಟಿ, ಅನಂತ ಮೋವಾಡಿ, ಉದಯಕುಮಾರ್ ಶೆಟ್ಟಿ, ಶರತ್ಕುಮಾರ್ ಶೆಟ್ಟಿ, ತಾಪಂ ಸದಸ್ಯ ಉದಯ ಪೂಜಾರಿ, ಕಾಂಗ್ರೆಸ್ ಐಟಿ ಸೆಲ್ ಪ್ರಮುಖ ಚಂದ್ರಶೇಖರ ಶೆಟ್ಟಿ, ಯುತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಪ್ರಶಾಂತ ಪೂಜಾರಿ, ಮಹಿಳಾ ಕಾಂಗ್ರೆಸ್ನ ಮಂಜುಳಾ ದೇವಾಡಿಗ ಮೊದಲಾದವರು ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    nineteen − 18 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.