Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೋಟಗಾರಿಕೆ ಬೆಳೆಯ ಯಂತ್ರೋಪಕರಣಗಳಿಗೆ ಸಹಾಯಧನ-ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ತೋಟಗಾರಿಕೆ ಬೆಳೆಯ ಯಂತ್ರೋಪಕರಣಗಳಿಗೆ ಸಹಾಯಧನ-ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ: ಪ್ರಸ್ತುತ ಸಾಲಿಗೆ ಆರ್ಕೆವಿವೈ ಯಾಂತ್ರೀಕರಣ ಮತ್ತು ಕೇಂದ್ರ ಪುರಸ್ಕೃತ ಕೃಷಿ ಯಾಂತ್ರೀಕೃತ ಉಪಅಭಿಯಾನ ಕಾರ್ಯಕ್ರಮಗಳಡಿ ಶೇ. 50 ರ ಸಹಾಯಧನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ 40 ರ ಸಹಾಯಧನದಲ್ಲಿ ಇತರೇ ವರ್ಗದ ಫಲಾನುಭವಿಗಳಿಗೆ ಟ್ರ್ಯಾಕ್ಟರ್ ಯಂತ್ರೋಪಕರಣವನ್ನು ಹೊರತುಪಡಿಸಿ ಉಳಿದ ತೋಟಗಾರಿಕೆ ಬೆಳೆಗಳಲ್ಲಿ ಅವಶ್ಯಕವಿರುವ ಅನುಮೋದಿತ ಯಂತ್ರೋಪಕರಣಗಳಿಗೆ ಯೋಜನೆಯಡಿ ಜಿಲ್ಲೆಯಲ್ಲಿ ರೈತರಿಗೆ ಅವಕಾಶ ಕಲ್ಪಿಸಲು ಅನುಮೋದನೆಯಾಗಿರುತ್ತದೆ.

    Click Here

    Call us

    Click Here

    ಪ್ರತಿ ರೈತ ಫಲಾನುಭವಿಗಳಿಗೆ ಗರಿಷ್ಟ 5 ಯಂತ್ರೋಪಕರಣಗಳಿಗೆ 1.25 ಲಕ್ಷ ಗರಿಷ್ಟ ಸಹಾಯಧನ ಮಿತಿಯೊಂದಿಗೆ ಸಹಾಯಧನದ ಮೊತ್ತವನ್ನು ಇಸಿಎಸ್ ಮೂಲಕ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗಳಿಗೆ ವಿತರಿಸಲಾಗುತ್ತದೆ. ರೈತ ಫಲಾನುಭವಿಗಳು ಖರೀದಿಸುವ ಯಂತ್ರೋಪಕರಣಗಳಿಗೆ ಒಮ್ಮೆ ಸಹಾಯಧನ ಪಡೆಯಲು ಅರ್ಹರಿದ್ದು, ಹಿಂದಿನ ಸಾಲಿನಲ್ಲಿ ಖರೀದಿಸಿದ ಯಂತ್ರೋಪಕರಣಗಳ ಮಾದರಿಗಳನ್ನು ಪ್ರಸ್ತುತ ಹೊಸದಾಗಿ ಖರೀದಿಸಿದರೆ ಸಹಾಯಧನಕ್ಕಾಗಿ ಪರಿಗಣಿಸಲು ಅರ್ಹರಾಗಿರುವುದಿಲ್ಲ.

    ಅರ್ಜಿದಾರರು ತೋಟಗಾರಿಕೆ ಬೆಳೆ ಬೆಳೆಯುತ್ತಿರುವ ಬಗ್ಗೆ ವಿವರಗಳುಳ್ಳ ಆರ್ಟಿಸಿ ಅಥವಾ ಪಹಣಿಯನ್ನು ಇಲಾಖೆಗೆ ಒದಗಿಸಬೇಕು. ಅರ್ಜಿ ನೀಡುವ ರೈತರು ಏಪ್ರಿಲ್ 2020 ರ ನಂತರದಲ್ಲಿ ಖರೀದಿಸಿದ ಯಂತ್ರೋಪಕರಣಗಳಿಗೆ ಮಾತ್ರ ಸಹಾಯಧನ ನೀಡಲು ಅವಕಾಶವಿರುತ್ತದೆ.

    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಧಿನಿಯಮ 2013ರಂತೆ ಉಳಿಕೆ ಅನುದಾನ ಕಾರ್ಯಕ್ರಮದಡಿ ಕೃಷಿ ಇಲಾಖೆಯಿಂದ ಅನುಮೋದಿತ ಸರಬರಾಜು ದರ ಪಟ್ಟಿಯಲ್ಲಿರುವಂತೆ ಕೃಷಿ ಇಲಾಖೆಯ ಮಾರ್ಗಸೂಚಿಯಂತೆ ಪವರ್ ಟಿಲ್ಲರ್ಗಳನ್ನು ಪಡೆಯಲು ಅವಕಾಶವಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಮಾತ್ರ ಅನುದಾನದ ಲಭ್ಯತೆ ಇದ್ದು, ಅರ್ಹ ರೈತರು ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    18 + 18 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.