ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರಾಮ ಪಂಚಾಯತ್ ವತಿಯಿಂದ ನಿರ್ಮಿಸಲಾಗಿರುವ ಬಾಪೂಜಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಗುರುವಾರ ಉಧ್ಗಾಟನಾ ಕಾರ್ಯಕ್ರಮ ನಡೆಯಿತು
ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ, ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿಗ್ರಾಮ ಪಂಚಾಯತ್ಗಳು ಸ್ಥಳೀಯ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಅರ್ಹರನ್ನು ಗುರುತಿಸಿ ಸರಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ನೀಡಲು ಕ್ರಮಕೈಗೊಳ್ಳಬೇಕು. ಪಂಚಾಯತ್ ಕಛೇರಿಗೆ ಜನರ ಅಲೆದಾಟ ತಪ್ಪಿಸಿ ಅವರಿಗೆ ಸಕಾಲದಲ್ಲಿ ಎಲ್ಲಾ ಸೇವೆ ದೊರೆಯುವಂತೆ ಮಾಡಬೇಕು. ವಿವಿಧ ಅಭಿವೃದ್ಧಿ ಯೋಜನೆಗಳ ಅನುದಾನದ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಗಂಗೊಳ್ಳಿ ಗ್ರಾಪಂ ಸದಸ್ಯರು, ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಕಾರ್ಯದರ್ಶಿ ದಿನೇಶ ಶೇರುಗಾರ್, ಗಂಗೊಳ್ಳಿ ಗ್ರಾಮ ಕರಣಿಕ ರಾಘವೇಂದ್ರ ದೇವಾಡಿಗ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಮತ್ತಿತರರು ಉಪಸ್ಥಿತರಿದ್ದರು.