Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು: ಶಿಕ್ಷಕರಿಗೆ ಆನ್‌ಲೈನ್ ಎಫ್‌ಡಿಪಿ ಕಾರ‍್ಯಕ್ರಮ
    alvas nudisiri

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು: ಶಿಕ್ಷಕರಿಗೆ ಆನ್‌ಲೈನ್ ಎಫ್‌ಡಿಪಿ ಕಾರ‍್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಮಿಜಾರ್ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಿಂದ ಆಯೋಜಿಸಲ್ಪಟ್ಟ ಒಂದು ದಿನದ ಆನ್‌ಲೈನ್ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಮ್- “ಹೇಗೆ ಬೋಧನಾ- ಕಲಿಕಾ ಪ್ರಕ್ರಿಯೆಯಲ್ಲಿ ಗುಣಮಟ್ಟದ ಬದಲಾವಣೆ ಸಾಧ್ಯ” ಎಂಬ ವಿಷಯದ ಕುರಿತು ಉದ್ಘಾಟನಾ ಕಾರ‍್ಯಕ್ರಮ ನಡೆಯಿತು

    Click Here

    Call us

    Click Here

    ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಲಹಾಬಾದ ಐಐಐಟಿಯ ನಿರ್ದೇಶಕ ಪ್ರೋ ಪಿ. ನಾಗಭೂಷಣ್, ಪ್ರತಿಯೊಬ್ಬ ಶಿಕ್ಷಕನೂ ತನ್ನ ಮುಂದಿರುವ ಸವಾಲುಗಳನ್ನ ಮೀರಿ ಯೋಚಿಸಿ, ಕಾರ‍್ಯ ಪ್ರವೃತ್ತನಾದಾಗ ಶಿಕ್ಷಣದ ಮೂಲ ಧ್ಯೇಯ – ಸರ್ವಾಂಗೀಣ ಪ್ರಗತಿ ವಿದ್ಯಾರ್ಥಿಯಲ್ಲಿ ಮೂಡಲು ಸಾಧ್ಯ ನಮ್ಮ ಹೆಚ್ಚಿನ ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾನಿಲಯಗಳ ಅಧೀನದಲ್ಲಿ ಕಾರ‍್ಯ ನಿರ್ವಹಿಸುವ ಹಿನ್ನಲೆಯಲ್ಲಿ ಅನೇಕ ನಿರ್ಬಂಧಗಳು ತಮ್ಮನ್ನು ಸೀಮಿತಗೊಳಿಸಿದರೂ ಅದನ್ನು ಮೀರಿ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರೂ ದುಡಿಯುವ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಕಾರ‍್ಯರೂಪಕ್ಕೆ ಬರಲಿರುವ ಹೊಸ ಶಿಕ್ಷಣ ನೀತಿ ಶೈಕ್ಷಣಿಕ ಸ್ವಾಯತ್ತತೆಗೆ ಹೆಚ್ಚು ಒತ್ತು ನೀಡಲಿದ್ದು ಶಿಕ್ಷಕರು ಇನ್ನೂ ಹೆಚ್ಚಿನ ಜವಾಬ್ದಾರಿ ಹಾಗೂ ಕಾರ‍್ಯ ಕ್ಷಮತೆಯನ್ನು ಪ್ರದರ್ಶಿಸಬೇಕು ಎಂದರು. ಶಿಕ್ಷಕನು ತಾನು ನಿರ್ವಹಿಸುತ್ತಿರು ಕೆಲಸದ ಆದಾರದ ಮೇಲೆ ತನ್ನನ್ನು ತಾನು ಮೌಲ್ಯಮಾಪನಕ್ಕೆ ಹಚ್ಚಿ, ಪ್ರತಿ ಹಂತದಲ್ಲೂ ಯೋಚಿಸಿ, ಕಾರ‍್ಯವನ್ನು ನೆರವೇರಿಸಬೇಕು. ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ ಸಿದ್ದಪಡಿಸುವ ಪದ್ದತಿಗೆ ಜೋತು ಬೀಳದೆ, ಅವರು ತಾವು ಪಡೆದ ಜ್ಞಾನವನ್ನು ಹೇಗೆ ಜೀವನದಲ್ಲಿ ಆಳವಡಿಸಿಕೊಳ್ಳಲು ಸಾಧ್ಯ ಎಂಬುದನ್ನು ಕಲಿಸುವ ಶಿಕ್ಷಣ ಬೇಕು ಎಂದರು. ಈ ಹಿನ್ನಲೆಯಲ್ಲಿ ಶಿಕ್ಷಕನು ತರಗತಿಗಳಲ್ಲಿ ಏಕಾಲಾಪ ಪದ್ದತಿಯನ್ನು ಅನುಸರಿಸದೆ ಸಂವಾದ, ಸಂಭಾಷಣೆಗೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದರು.

    ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೆಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಆಳ್ವಾಸ್ ತಾನು ಹೊಂದಿರುವ ವಿವಿಧ ಪ್ರತಿಷ್ಟಿತ ಸಂಸ್ಥೆಗಳೊಂದಿಗಿನ ಶೈಕ್ಷಣಿಕ ಒಡಂಬಡಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚು ಹೆಚ್ಚು ಅನ್ವಹಿಕ ಜ್ಞಾನವನ್ನು ಲಭಿಸುವಂತೆ ಮಾಡುತ್ತಿದ್ದು, ಸಿಗುವ ಪ್ರತಿ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿದೆ ಎಂದರು.

    ಈ ಒಂದು ದಿನದ ಎಫ್‌ಡಿಪಿ ಕಾರ‍್ಯಗಾರವನ್ನು ಐಐಐಟಿ ಅಲಹಾಬಾದ್ ಹಾಗೂ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ನಡುವೆ 2008ರಲ್ಲಿ ನಡೆದ ಶೈಕ್ಷಣಿಕ ಒಪ್ಪಂದದ ನೆಲೆಯಲ್ಲಿ ಆಯೋಜಿಸಲಾಗಿತ್ತು. ಈ ಒಪ್ಪಂದದಿಂದ ಇದುವರೆಗೆ ಕಾಲೇಜಿನ 120ಕ್ಕೂ ಅಧಿಕ ವಿದ್ಯಾರ್ಥಿಗಳು ಮ್ಯಾಷಿನ ಲರ್ನಿಂಗ್ ಹಾಗೂ ಡೀಪ್ ಲರ್ನಿಂಗ್ ಕ್ಷೇತ್ರದಲ್ಲಿ3 ಸಲ ಅಲ್ಲಿನ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಪಡೆದಿದ್ದು, 40ಕ್ಕೂ ಅಧಿಕ ವಿದ್ಯಾರ್ಥಿಗಳು ಅಲ್ಲಿ ಇಂಟನ್‌ಶಿಫ್ ಮಾಡಲು ಅವಕಾಶ ಪಡೆದುದಲ್ಲದೆ, ಸದಾ ಅಲ್ಲಿನ 8 ರಿಂದ10 ಉಪನ್ಯಾಸಕರು ತರಬೇತಿ ನೀಡಲು ಮೂಡುಬಿದಿರೆಗೆ ಆಗಮಿಸುತ್ತಿರುತ್ತಾರೆ.

    ಒಂದು ದಿನದ ಕಾರ‍್ಯಗಾರದಲ್ಲಿ ಡಾ. ಪಿ. ನಾಗಭೂಷಣ್ ತಮ್ಮ ಪ್ರಧಾನ ಭಾಷಣದಲ್ಲಿ “ಸಮ್ ತೋಟ್ಸ್ ಫಾರ್ ಬೆಟರ್ ಟಿಚಿಂಗ್ – ಲರ್ನಿಂಗ್ ಅಂಡರ್ ಅಫೀಲಿಯೆಟಿಂಗ್ ಕನ್ಸ್‌ಟ್ರೆಂಟ್ಸ್”, ಒಮಾನ್( ಮಸ್ಕತ್) ಮಿಡ್ಲೀಸ್ಟ್ ಕಾಲೇಜಿನ ಡಾ. ಸೈಯದ್ ಝಾಕಿರ್ ಅಲಿ ’ಕಂಟೀನ್ಯೂಸ್ ಅಸೆಸೆಮೆಂಟ್ಸ್ ಸಮ್ ಎಕ್ಸಪೀರಿಯನ್ಸ್ ಟೂ ಇಂಪ್ರೂ ಕ್ವಾಲಿಟಿ ಇನ್ ಟೀಚಿಂಗ್ ಆಂಡ್ ಲರ್ನಿಂಗ್ ಪ್ರೋಸೆಸ್’, ಐಐಐಟಿ ಅಲಹಾಬಾದ್‌ನ ಸಹಾಯಕ ಪ್ರಾಧ್ಯಾಪಕ ವ್ರಿಜೇಂದರ್ ಸಿಂಗ್ ಹಾಗೂ ಐಐಐಟಿ ಅಲಹಾಬಾದ್‌ನ ಡಾ ಮಹಮ್ಮದ್ ಜಾವೇದ್ ವಿವಿಧ ವಿಚಾರಗಳ ಕುರಿತು ಮಾಹಿತಿ ನೀಡಿದರು.

    Click here

    Click here

    Click here

    Click Here

    Call us

    Call us

    ಈ ಕಾರ‍್ಯಗಾರದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ‍್ಯ ಡಾ ಪೀಟರ್ ಫೆರ್ನಾಂಡೀಸ್, ಕಾಲೇಜಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ ಮಂಜುನಾಥ ಕೊಠಾರಿ ಹಾಗೂ ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಪಾಲ್ಗೊಂಡರು. ಸಹಾಯಕ ಪ್ರಾಧ್ಯಪಕಿ ಮೇಘಾ ಹೆಗ್ಡೆ ನಿರ್ವಹಿಸಿ, ಶಿಲ್ಪಾ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    sixteen − 13 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.