Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅತಂತ್ರವಾದ ವಂಡ್ಸೆ ಸ್ವಾವಲಂಬನಾ ಮಹಿಳೆಯರ ಹೊಲಿಗೆ ವೃತ್ತಿ – ತರಬೇತಿ ಕೇಂದ್ರ
    ವಿಶೇಷ ವರದಿ

    ಅತಂತ್ರವಾದ ವಂಡ್ಸೆ ಸ್ವಾವಲಂಬನಾ ಮಹಿಳೆಯರ ಹೊಲಿಗೆ ವೃತ್ತಿ – ತರಬೇತಿ ಕೇಂದ್ರ

    Updated:10/10/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಆರಂಭಗೊಂಡ ವಂಡ್ಸೆ ಸ್ವಾವಲಂಬನಾ ಮಹಿಳೆಯರ ಹೊಲಿಗೆ ವೃತ್ತಿ ಮತ್ತು ತರಬೇತಿ ಕೇಂದ್ರಕ್ಕೆ ಇದೀಗ ಸಂಚಾಕಾರ ಎದುರಾಗಿದೆ. ಕಳೆದ ಎರಡು ವರ್ಷಗಳಿಂದ ಹಳೆಯ ಸರಕಾರಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಕೇಂದ್ರವನ್ನು ರಾತ್ರೋರಾತ್ರಿ ಎತ್ತಂಗಡಿ ಮಾಡಿದ್ದು, ಕಣ್ಣೊರೆಸುವ ತಂತ್ರವೆಂಬಂತೆ ಬದಲಿ ಕಟ್ಟಡ ಸೂಚಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    Click Here

    Call us

    Click Here

    ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮ ಪಂಚಾಯಿತಿ ಮೂಲಕ ಗ್ರಾಮೀಣ ಭಾಗದ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಿ ಸ್ವಾವಲಂಬಿ ಜೀವನ ನಡೆಸುವುದಕ್ಕಾಗಿ 2018ರಲ್ಲಿ ಮಹಿಳಾ ಸ್ವಾವಲಂಬನಾ ಕೇಂದ್ರ ಆರಂಭಿಸಲಾಗಿತ್ತು. ಈಗಾಗಲೇ ಮೂರು ಬ್ಯಾಚ್ ಮೂಲಕ 150 ಮಹಿಳೆಯರು ಹೊಲಿಗೆ ತರಬೇತಿ ಪಡೆದು ಸ್ವಾವಲಂಭಿ ಬದುಕು ಕಟ್ಟಿಕೊಂಡಿದ್ದರು. ಈ ಹಿಂದೆ ವಂಡ್ಸೆಯಲ್ಲಿ ಹೊಸ ಪಶು ಆಸ್ಪತ್ರೆ ನಿರ್ಮಾಣವಾದ ಬಳಿಕ ಜಿಲ್ಲಾ ಪಂಚಾಯತ್ ಹಳೆ ಪಶು ಆಸ್ಪತ್ರೆ ಕಟ್ಟಡವನ್ನು ವಂಡ್ಸೆ ಗ್ರಾಮ ಪಂಚಾಯತಿಗೆ ಹಸ್ತಾಂತರಿಸಿತ್ತು. ವಂಡ್ಸೆ ಗ್ರಾಮ ಪಂಚಾಯತ್ ಸ್ವಾವಲಂಭನಾ ಕೇಂದ್ರಕ್ಕಾಗಿ ಈ ಕಟ್ಟಡವನ್ನು ಬಿಟ್ಟುಕೊಟ್ಟಿತ್ತು. ಈ ಹಿಂದೆ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರೇ ಸ್ವಾವಲಂಬನಾ ಕೇಂದ್ರವನ್ನು ಉದ್ಘಾಟಿಸಿದ್ದರು.

    ಆರಂಭದಲ್ಲಿ ಕುಂದಾಪುರ ಕೃಷಿ ಇಲಾಖೆ ಪ್ರಾಯೋಜಕತ್ವದಲ್ಲಿ ರುಡ್‌ಸೇಟ್ ಬ್ರಹ್ಮಾವರದ ಮೂಲಕ ಬಟ್ಟೆ ಹಾಗೂ ಪೇಪರ್ ಬ್ಯಾಗ್ ತರಬೇತಿ ಪಡೆದುಕೊಂಡಿದ್ದರು. ಕೇಂದ್ರದ ಮೂಲಕ ತರಬೇತಿ ಪಡೆದ ಮಹಿಳೆಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ದೇವಸ್ಥಾಗಳ ಪ್ರಸಾದ ವಿತರಣೆ ಬಟ್ಟೆ ಚೀಲ ಹೊಲಿಯುವ ಕೆಲಸ ವಹಿಸಿಕೊಂಡು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ದಾರಿ ಮಾಡಿಕೊಟ್ಟಿತ್ತು. ಕೊರೋನಾ ಸಮಯದಲ್ಲಿ ಬಟ್ಟೆಯ ಮಾಸ್ಕ್ ತಯಾರಿಸುವ ಮೂಲಕ ಕೊರೋನಾ ವಾರಿಯರ‍್ಸ್ ಆಗಿಯೂ ತೊಡಗಿಸಿಕೊಂಡಿದ್ದರು.

    ಹೊಲಿಗೆ ಕೇಂದ್ರದ ಅಭಿವೃದ್ಧಿಗಾಗಿ ಇಲಾಖೆಯಿಂದ ಬಂದ ರೂ. 2 ಲಕ್ಷ ಸಹಾಯಧನವನ್ನು ಬ್ಯಾಂಕಿನಲ್ಲಿ ಭದ್ರತೆಯಾಗಿರಿಸಿರೂ. 4 ಲಕ್ಷ ಸಾಲ ತೆಗೆದು ಅದರಲ್ಲಿ ಪವರ್ ಮಿಷಿನ್, ಕಟ್ಟಿಂಗ್ ಮಿಷಿನ್ ಹಾಗೂ ಓವರ್‌ಲಾಕ್ ಮಿಷಿನ್ ಮತ್ತು ಬಟ್ಟೆ ಇತರ ಸಾಮಾಗ್ರಿಗಳನ್ನು ಖರೀದಿಸಲಾಗಿತ್ತು.

    Click here

    Click here

    Click here

    Call us

    Call us

    ನೆಮ್ಮದಿ ಕೇಂದ್ರ ಆರಂಭಿಸುವ ಸಬೂಬು:
    ಸ್ವಾವಲಂಬನಾ ಕೇಂದ್ರವನ್ನು ತೆರವುಗೊಳಿಸಿ ಅಲ್ಲಿ ನೆಮ್ಮದಿ ಕೇಂದ್ರ ಆರಂಭಿಸುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಸ್ವಾವಲಂಬನಾ ಕೇಂದ್ರ ನಡೆಸಲು ಬೇರೊಂದು ಸರಕಾರಿ ಕಟ್ಟವನ್ನೂ ಸೂಚಿಸಿದ್ದಾರೆ. ಆದರೆ ಅಧಿಕಾರಿಗಳು ಸೂಚಿಸಿರುವ ಮತ್ತೊಂದು ಕಟ್ಟಡದಲ್ಲಿ ನಾಡ ಕಛೇರಿ ಮೀಸಲಿರಿಸಲಾಗಿದೆ. ತಾತ್ಕಾಲಿಕವಾಗಿ ಸ್ವಾವಲಂಬನಾ ಕೇಂದ್ರ ಸ್ಥಳಾಂತರಿಸಿ, ನೆಲೆಯಿಲ್ಲದಂತೆ ಮಾಡುವ ಹುನ್ನಾರವೂ ಅಡಗಿದೆ ಎನ್ನಲಾಗುತ್ತಿದೆ.

    ರಾತ್ರೋರಾತ್ರಿ ಸ್ಥಳಾಂತರಿಸಿದ ಅಧಿಕಾರಿಗಳು:
    ಮಹಿಳಾ ಸ್ವಾವಲಂಬನಾ ಕೇಂದ್ರವನ್ನು ಪೊಲೀಸ್ ರಕ್ಷಣೆಯೊಂದಿಗೆ ರಾತ್ರಿಯ ವೇಳೆಗೆ ಸ್ಥಳಾಂತರಿಸಿರುವ ಹಿಂದೆ ರಾಜಕೀಯ ವೈಷಮ್ಯವಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಜಿಲ್ಲಾ ಪಂಚಾಯತ್ ಸಿಇಓ ಅವರ ಆದೇಶವಿದೆ ಎಂದು ವಂಡ್ಸೆ ಗ್ರಾಮ ಪಂಚಾಯತ್ ಪಿಡಿಓ ಶುಕ್ರವಾರ ಕೇಂದ್ರವನ್ನು ತೆರವುಗೊಳಿಸಲು ಬಂದಿದ್ದರು. ಆದರೆ ಅಲ್ಲಿನ ಮಹಿಳೆಯರು ಪ್ರತಿಭಟಿಸಿದ ಬಳಿಕ ಹಿಂದಕ್ಕೆ ತೆರಳು ಮತ್ತೆ ಮಧ್ಯಾಹ್ನವೂ ತೆರವುಗೊಳಿಸುವ ವಿಫಲಯತ್ನ ನಡೆಸಿದ್ದರು. ಬಳಿಕ ಹತ್ತು ದಿನಗಳ ಕಾಲಾವಕಾಶ ನೀಡುವಂತೆ ಕೇಳಿಕೊಂಡ ಬಳಿಕ ಒಪ್ಪಿ ತೆರಳಿದ್ದ ಅಧಿಕಾರಿಗಳು ರಾತ್ರಿ ವೇಳೆಯಲ್ಲಿ ಬಂದು ಕಟ್ಟಡದಲ್ಲಿದ್ದ ಮೆಷಿನ್‌ಗಳನ್ನು ತೆರವುಗೊಳಿಸಿದ್ದಾರೆ. ಪಂಚಾಯತ್‌ರಾಜ್ ಕಾನೂನಿನಂತೆ ಸೂರ್ಯಾಸ್ತದ ನಂತರ ಯಾವುದೇ ಕಟ್ಟಡ ತೆರಳುಕಾರ್ಯ ಮಾಡುವಂತಿಲ್ಲ ಎಂಬ ಅಂಶ ದಾಖಲಾಗಿದ್ದರೂ, ಎಲ್ಲವನ್ನೂ ಗಾಳಿಗೆ ತೂರಲಾಗಿದೆ. ಘಟನೆಯ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಕುಂದಾಪ್ರ ಡಾಟ್ ಕಾಂ, ಗ್ರಾಪಂ ದೂರವಾಣಿ ಹಾಗೂ ಪಿಡಿಓ ಅವರ ಮೊಬೈಲ್ ಸಂಖ್ಯೆ ಸಂಪರ್ಕಿಸಲಾಗಿತ್ತು ಆದರೆ ನಾಟ್‌ರಿಚೆಬಲ್ ಆಗಿದ್ದವು.

    ಒಟ್ಟಿನಲ್ಲಿ ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿ ಕನಸು ಹೊತ್ತು ದುಡಿಯುತ್ತಿರುವ ಮಹಿಳೆಯರಿಗೆ ಸೂಕ್ತ ನೆಲೆ ನೀಡದುರುವುದಕ್ಕೆ ಗ್ರಾಮಸ್ಥರಿಂದಲೇ ವಿರೋಧ ವ್ಯಕ್ತವಾಗಿದೆ.

    • ಸಂಸ್ಥೆಯ ಏಳಿಗೆಯನ್ನು ಸಹಿಸದ ಕೆಲವರು ಈ ಹಿಂದಿನಿಂದಲೂ ನಮಗೆ ಕಿರಿಕಿರಿ ಮಾಡುತ್ತಿದ್ದರು. ಸಂಸ್ಥೆಯನ್ನು ಮುಚ್ಚುವಂತೆ ಅಧಿಕಾರಿಗಳ ಮುಖಾಂತರ ಒತ್ತಡ ಹೇರುತ್ತಿದ್ದರು. ೧೦೦ ಜನ ಮಹಿಳೆಯರ ಜೀವನೋಪಾಯವಾಗಿದ್ದ ವೃತ್ತಿಗೆ ಅಡ್ಡಿಯುಂಟು ಮಾಡಿ ಅನ್ಯಾಯವೆಸಗಿದ್ದಾರೆ. ಪ್ರಧಾನಮಂತ್ರಿಗಳು ಆತ್ಮನಿರ್ಭರ ಭಾರತದ ಮೂಲಕ ಸ್ವ-ಉದ್ಯೋಗವನ್ನು ಬಲಪಡಿಸುವ ಯೋಜನೆ ಹಾಕಿಕೊಂಡಿದ್ದರೆ ಇಲ್ಲಿ ಮಾತ್ರ ಸ್ವ-ಉದ್ಯೋಗ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. – ಮಹಾಲಕ್ಷ್ಮೀ, ಮೇಲ್ವಿಚಾರಕಿ, ಸ್ವಾವಲಂಬನಾ ಕೇಂದ್ರ, ವಂಡ್ಸೆ

     

    • ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಸ್ವ-ಉದ್ಯೋಗ ಮಾಡುವ ಅವಕಾಶ ಕಡಿಮೆಯಿದ್ದು, ವಂಡ್ಸೆ ಗ್ರಾಮ ಪಂಚಾಯಿತಿ ಸ್ವಾವಲಂಬನಾ ಕೇಂದ್ರ ಆರಂಭಿಸಿ ಹೊಲಿಗೆ ತರಬೇತಿ ನೀಡಲು ಆರಂಭಿಸಿತು. ಇದರಿಂದ ನೂರಾರು ಮಹಿಳೆಯರಿಗೆ ಉಪಯೋಗವಾಗಿದೆ. ನೆಮ್ಮದಿಕೇಂದ್ರ ಆರಂಭಿಸುವ ನೆಪ ಹೇಳಿ ಸ್ವಾವಲಂಬನಾ ಕೇಂದ್ರ ಸ್ಥಳಾಂತರಿಸುವ ಹಿಂದೆ ರಾಜಕೀಯ ಷಡ್ಯಂತ್ರವಿದೆ. ವಂಡ್ಸೆಯ ಎಸ್‌ಎಲ್‌ಆರ್‌ಎಂ ಘಟಕ, ಸ್ವಾವಲಂಬನಾ ಕೇಂದ್ರ ಹಾಗೂ ಶಾಲೆ ಪಂಚಾಯತಿಗೆ ಕೀರ್ತಿ ತಂದುಕೊಟ್ಟಿದ್ದವು. ಇಲ್ಲಿ ರಾಜಕೀಯ ಮರೆತು ಪ್ರೋತ್ಸಾಹಿಸುವ ಕೆಲಸ ಮಾಡಬೇಕಿತ್ತು. ಇದರಲ್ಲಿಯೂ ನ್ಯೂನ್ಯತೆ ಹುಡುಕುತ್ತಿರುವುದು ದುರದೃಷ್ಟಕರ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಅವರೇ ಮುಂದೆ ಉತ್ತರಿಸುತ್ತಾರೆ. – ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರು, ಗ್ರಾಮ ಪಂಚಾಯತ್ ವಂಡ್ಸೆ
              ಉಡುಪಿ ಡಿಸಿಯಾಗಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ವಾವಲಂಬನಾ ಕೇಂದ್ರ ಉದ್ಘಾಟಿಸಿದ ಸಂದರ್ಭ


                                                                     ಸ್ವಾವಲಂಬನಾ ಕೇಂದ್ರವನ್ನು ಸ್ಥಳಾಂತರಿಸುತ್ತಿರುವುದು

    ಕೊರೋನಾ ಆತಂಕದ ಸಂದರ್ಭದಲ್ಲಿ ಬಟ್ಟೆಯ ಮಾಸ್ಕ್ ತಯಾರಿಸಿ ಮೆಚ್ಚುಗೆ ಗಳಿಸಿದ್ದ ಸ್ವಾವಲಂಬನಾ ಕೇಂದ್ರದ ಮಹಿಳೆಯರು

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d